AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ಸ್ಟೆಬಿಲೈಜರ್ ಸ್ಫೋಟ, ಮಗನನ್ನು ಉಳಿಸಲು ಹೋಗಿ ಪ್ರಾಣ ಬಿಟ್ಟ ತಂದೆ

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನ ಮನೆಯಲ್ಲಿ ಸ್ಟೆಬಿಲೈಜರ್(Stabilizer) ಸ್ಫೋಟವಾಗಿ ತಂದೆಎಸ್.ಶರತ್(39) ಸಾವನ್ನಪ್ಪಿದ್ದು, ಶರತ್ ಪುತ್ರ ಸಂಚಿತ್(12) ಸ್ಥಿತಿ ಗಂಭೀರವಾಗಿದೆ.

Shivamogga: ಸ್ಟೆಬಿಲೈಜರ್ ಸ್ಫೋಟ, ಮಗನನ್ನು ಉಳಿಸಲು ಹೋಗಿ ಪ್ರಾಣ ಬಿಟ್ಟ ತಂದೆ
ಶರತ್(39)
TV9 Web
| Edited By: |

Updated on:Jan 08, 2023 | 11:04 AM

Share

ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿರುವ ಪ್ರತಿಷ್ಠಿತ ಭೂಪಾಳಂ ಕುಟುಂಬದ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಸ್ಟೆಬಿಲೈಜರ್ ಸ್ಫೋಟವಾಗಿ ತಂದೆ ಎಸ್.ಶರತ್(39) ಸಾವನ್ನಪ್ಪಿದ್ದು, ಪುತ್ರ ಸಂಚಿತ್(12) ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದಾಗಿ ಸ್ಟೆಬಲೈಜರ್ ಸ್ಫೋಟವಾಗಿದ್ದು, ಕೂಡಲೇ ಮನೆಯಲ್ಲಾ ಬೆಂಕಿ ಆವರಿಸಿದೆ. ತಂದೆ ಎಸ್.ಶರತ್ ಮಗ ಸಂಚಿತ್​ನನ್ನು ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡಿರುವ ದಾರುಳ ಘಟನೆ ನಡೆದಿದೆ.

ಲಿಂಗಸುಗೂರು: ಗೂಡ್ಸ್​ ಆಟೋ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯ

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಬಾಬಾಕಟ್ಟಿ ಬಳಿ ಗೂಡ್ಸ್ ಆಟೋ ಪಲ್ಟಿಯಾಗಿ ಮಸ್ಕಿ ಮಟ್ಟಣದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮುದಗಲ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೂಡ್ಸ್ ಆಟೋದಲ್ಲಿ 12 ಜನ ಮಸ್ಕಿ ಪಟ್ಟಣದ ನಿವಾಸಿಗಳು ಮುದಗಲ್​ಗೆ ಬಂದಿದ್ದಾರೆ. ವಾಪಸ್ ಹಿಂದಿರುಗುವಾಗ ವೇಗದಲ್ಲಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಪಲ್ಟಿಯಾಗಿದೆ.

ಮೈಸೂರು: ಮಿಂಚಿನ ವೇಗದಲ್ಲಿ ಜಿಂಕೆ ಬೇಟೆಯಾಡಿದ ಕಬಿನಿ ಕ್ವೀನ್ ಹುಲಿ

ಮೈಸೂರಿನ ನಾಗರಹೊಳೆ ಅಭಯಾರಣ್ಯದ ಅಂತರಸಂತೆ ವಲಯದಲ್ಲಿ ಕಬಿನಿ ಕ್ವೀನ್ ಎಂದೇ ಖ್ಯಾತಿಯಾಗಿರುವ ಹೆಣ್ಣು ಹುಲಿ ಕ್ಷಣಾರ್ಧದಲ್ಲಿ ಜಿಂಕೆಯನ್ನು ಬೇಟೆಯಾಡಿ ಎಳೆದು ಕೊಂಡು ಹೋಗಿದೆ. ಸಫಾರಿಗೆ ತೆರಳಿದ್ಧ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇದನ್ನೂ ಓದಿ:ಕೆಆರ್ ಪುರಂ ಬಳಿ ಭೀಕರ ಅಪಘಾತ; ಆಟೋಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸಾವು, ಮೂವರಿಗೆ ಗಾಯ

ಕೊಡಗಿನಲ್ಲಿ ಕಾಡು ಕೋಣ ಹತ್ಯೆ, ಮೂವರು ಆರೋಪಿಗಳ‌ ಬಂಧನ

ಮಡಿಕೇರಿ: ಕೊಡಗಿನ ಆನೆಚೌಕೂರು ಬಳಿ ಗುಂಡೇಟಿಗೆ ಬಲಿಯಾಗಿದ್ದ ಕಾಡುಕೋಣದ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಗೋಡು ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ಮಾಡಿದ್ದು, ಪೊನ್ನಂಪೇಟೆ ತಾಲ್ಲೂಕಿನ ಅತ್ತೂರು ಗ್ರಾಮದ‌ ಮೂವರು ಬೇಟೆಗಾರರಾದ ಅಪ್ಪಯ್ಯ, ಮಂಜು, ಅರುಣ್ ಎಂಬುವವರನ್ನ ಬಂಧಿಸಿ. ಆರೋಪಿಗಳಿಂದ ಬಂದೂಕು, ಕಾರು, ಮದ್ದು ಗುಂಡುಗಳ ವಶ ಪಡೆಯಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:47 am, Sun, 8 January 23

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ