AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ, 24 ಜನರ ವಿರುದ್ಧ ಎಫ್​ಐಆರ್ ದಾಖಲು

ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 24 ಜನರ ವಿರುದ್ಧ FIR ದಾಖಲಾಗಿದ್ದು, 60 ಜನರ ವಿಚಾರಣೆ ಮಾಡಲಾಗಿದೆ. ಎಂಟು ಮಂದಿ ತಲೆಮರೆಸಿಕೊಂಡಿದ್ದಾರೆ ಎಂದು ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದಾರೆ.

ಶಿವಮೊಗ್ಗ: ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ, 24 ಜನರ ವಿರುದ್ಧ ಎಫ್​ಐಆರ್ ದಾಖಲು
ಜಿ.ಕೆ. ಮಿಥುನ್ ಕುಮಾರ್, ಶಿವಮೊಗ್ಗ ಎಸ್​ಪಿ
TV9 Web
| Edited By: |

Updated on: Oct 03, 2023 | 12:50 PM

Share

ಶಿವಮೊಗ್ಗ, ಅ.3: ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ಜಿಲ್ಲೆಯ ರಾಗಿಗುಡ್ಡದಲ್ಲಿ (Ragigudda) ಹಿಂದೂಗಳ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 24 ಜನರ ವಿರುದ್ಧ FIR ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ.

ಪ್ರಕರಣ ಸಂಬಂಧ ಎಂಟು ಜನರು ತಲೆಮರೆಸಿಕೊಂಡಿದ್ದಾರೆ. 60 ಮಂದಿಯನ್ನು ವಿಚಾರಣೆ ಮಾಡಲಾಗಿದೆ ಎಂದು ಹೇಳಿದ ಮಿಥುನ್ ಕುಮಾರ್, ವಿಡಿಯೋ, ಫೋಟೋ ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಕಲ್ಲು ತೂರಾಟ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಶಿವಮೊಗ್ಗ ಗಲಭೆ: ರಾಗಿಗುಡ್ಡ ಏರಿಯಾದಲ್ಲಿ ವಾಸವಾಗಿರುವ ಈ ಕುಟುಂಬ ಅನುಭವಿಸಿದ ಆತಂಕ, ಯಾತನೆ ಪದಗಳಲ್ಲಿ ಹೇಳಲಾಗದು

ಪ್ರಕರಣ ಸಂಬಂಧ ಊಹಾಪೋಹ ಬೇಡ. ವಾಹನ ಯಾರದ್ದು, ವಾಹನದಲ್ಲಿ ಇದ್ದವರು ಯಾರು ಎಂದು ತನಿಖೆ ನಡೆಯುತ್ತಿದೆ. ಅವರನ್ನ ಕರೆತಂದು ವಿಚಾರಣೆ ಮಾಡುತ್ತೇವೆ.

ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿಲ್ಲ: ಎಸ್​ಪಿ

ರಾಗಿಗುಡ್ಡದಲ್ಲಿ 144 ಸೆಕ್ಷನ್​ ಮುಂದುವರಿಯಲಿದೆ. ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಇದ್ದರೂ ವ್ಯಾಪಾರ ವಹಿವಾಟಿಗೆ ಸಮಸ್ಯೆ ಇಲ್ಲ. ಶಿವಮೊಗ್ಗ ನಗರದಲ್ಲಿ ಎಲ್ಲೂ ಕೂಡ ಅಂಗಡಿ ಬಂದ್ ಮಾಡಿಸಿಲ್ಲ. ಯಾರೂ ಭಯಪಡುವ ಅವಶ್ಯಕತೆ ಇಲ್ಲ, ಪೊಲೀಸರ ನಿಯೋಜಿಸಿದ್ದೇವೆ. ರಾಗಿಗುಡ್ಡ ಹೊರತುಪಡಿಸಿ ಶಿವಮೊಗ್ಗ ನಗರದಾದ್ಯಂತ ಸಹಜ ಸ್ಥಿತಿ ಇದೆ ಎಂದು ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಹಾಕಿದ ಫ್ಲೆಕ್ಸ್​ನಲ್ಲಿ ತಿದ್ದುಪಡಿ ಮಾಡಬೇಕಿತ್ತು. ಮುಖಂಡರಿಗೆ ಕರೆಕ್ಷನ್ ಮಾಡುವಂತೆ ಹೇಳಿದ್ದೆವು. ಆದರೆ ಅವರು ತಡ ಮಾಡಿದರು. ನಂತರ ಜಿಲ್ಲಾಡಳಿತದ ಕಡೆಯಿಂದ ಅದನ್ನು ಮಾಡಲಾಗಿತ್ತು. ಅದಕ್ಕೂ ಈ ಘಟನೆಗೂ ಸಂಭಂದ ಇಲ್ಲ. ಕಲ್ಲೂ ತೂರಾಟ ಮಾಡಿದವರು ಮೇಲೆ ಕಾನೂನು ಕ್ರಮ ಜರುಗಿಸಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?