
ಶಿವಮೊಗ್ಗ, ಫೆಬ್ರವರಿ 20: ಪೊಲೀಸಪ್ಪನ (Police) ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಕರ್ತವ್ಯ ನಿರ್ವಹಿಸುವ ಮೋಹನ್ ಹೆಸರು ಡೆತ್ ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತಂದೆ ಮತ್ತು ತಾಯಿ ಸಾವಿನಿಂದ ಹೆಣ್ಣು ಮಕ್ಕಳ್ಳಿಬ್ಬರು ಅನಾಥವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಮೃತಳ ಹೆತ್ತವರು ಟಾರ್ಚರ್ ಕೊಟ್ಟ ಪೋಲಿಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಸ್ವಾತಿಗೆ ಮದುವೆ ಆಗಿ 7 ವರ್ಷವಾಗಿತ್ತು. ಒಂದು ವಾರದ ಹಿಂದಷ್ಟೇ ಪತಿ ಜಗದೀಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಪೊಲೀಸ್ ಮೋಹನ್, ಸ್ವಾತಿಗೆ ಫೇಸ್ಬುಕ್ನಲ್ಲಿ ಮೆಸೇಜ್ ಮಾಡಿದ್ದ. ಆತನ ಅಕೌಂಟ್ ಅನ್ನು ಸ್ವಾತಿ ಬ್ಲಾಕ್ ಮಾಡಿದ್ದರು. ಇದಕ್ಕೆ ಕೋಪಗೊಂಡ ಪೋಲಿಸ್ ಬೇರೆ ಅಕೌಂಟ್ ನಿಂದ ಸ್ವಾತಿ ಬಗ್ಗೆ ಅಪಪ್ರಚಾರ ಮಾಡಿದ್ದ. ಬಳಿಕ ಈತನ ಕಾಟ ತಾಳಲಾರದೆ ಸ್ವಾತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ವಾರಿ ಅಮ್ಮ. ನನ್ನ ಬಗ್ಗೆ ಇಲ್ಲದೆ ಇರುವುದು ಎಲ್ಲಾ ಕೆಟದಾಗಿ ಜನಗಳ ಹತ್ತಿರ ಮೋಹನ್ ಹೇಳಿದ್ದಾರೆ. ನನಗೆ ತಡಿಯುವುದಕ್ಕೆ ಆಗುತ್ತಿಲ್ಲ. ನನ್ನ ಗಂಡ ಸತ್ತಿದು ಫುಲ್ ಡ್ರಿಂಕ್ಸ್ ಮಾಡಿ. ಈ ಮೋಹನ್ ಎನ್ನುವ ಪೊಲೀಸ್ ನನ್ನ ಬಗ್ಗೆ ಕೆಟದಾಗಿ ಜನಗಳ ಹತ್ತಿರ ಏನೇನೋ ಹೇಳಿರುವುದು ನನಗೆ ಈಗ ಬೆಳಿಗ್ಗೆ ವಿಷಯ ಗೊತಾಯ್ತು. ಅವನನ್ನು ಮಾತ್ರ ಸಮ್ಮನೇ ಬಿಡಬೇಡಿ ಎಂದಿದ್ದಾರೆ.
ಇದನ್ನೂ ಓದಿ: ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು?
ಅವರು ಯಾರು ಅಂತಾನೆ ನಂಗೆ ಗೊತ್ತಿಲ್ಲ. ಫೇಸ್ಬುಕ್ನಲ್ಲಿ ಮೆಸೇಜ್ ಮಾಡಿದ್ದರು. ನಾನು ಬ್ಲಾಕ್ ಮಾಡಿದೆ. ಅದೇ ಸಿಟ್ಟಿಗೆ ಏನೇನೋ ಹೇಳಿದ್ದಾರೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ. ದಯವಿಟ್ಟು ಸ್ವಾರಿ ಅಮ್ಮ ಎಂದು ಸ್ವಾತಿ ಡೆತ್ ನೋಟ್ ಬರೆದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.