AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು; ಸಿಎಂ ಸಿದ್ದರಾಮಯ್ಯ ಘೋಷಣೆ

Allama Prabhu Name For Shivamogga Freedom Park: ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಈ ಬಗ್ಗೆ ಯಾರಿಗೂ ಸಮಸ್ಯೆ ಇಲ್ಲವೆಂದಾದರೆ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು; ಸಿಎಂ ಸಿದ್ದರಾಮಯ್ಯ ಘೋಷಣೆ
ಸಿದ್ದರಾಮಯ್ಯ
TV9 Web
| Edited By: |

Updated on: Jan 12, 2024 | 4:23 PM

Share

ಶಿವಮೊಗ್ಗ, (ಜನವರಿ 12): ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ (Shivamogga Freedom Park) ಅಲ್ಲಮ ಪ್ರಭು (Allama Prabhu) ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿಂದು ನಡೆದ  ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ(Siddaramaiah), ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುತ್ತೇವೆ. ಯಾಕಂದ್ರೆ, ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರೇ. ಅಲ್ಲದೇ ಅವರು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭುರವರ ಹೆಸರು ಸೂಕ್ತ ಎಂದು ಘೋಷಿಸಿದರು.

ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇದನ್ನೂ ಓದಿ: Yuvanidhi Scheme Launch: ಯುವ ನಿಧಿಗೆ ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ

ಮಧು ಬಂಗಾರಪ್ಪ ಮನವಿ

ಸಿಎಂ ಭಾಷಣಕ್ಕೂ ಮೊದಲು ಮಾತನಾಡಿ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 12ನೇ ಶತಮಾನದಲ್ಲಿ ಒಬ್ಬ ಪ್ರಸಿದ್ಧ ಕವಿ, ಹೆಸರಾಂತ ತತ್ವಜ್ಞಾನಿಯಾಗಿದ್ದ ಅಲ್ಲಮ ಪ್ರಭುಗಳು ನಮ್ಮ ಶಿವಮೊಗ್ಗ ಜಿಲ್ಲೆಯವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಹೀಗಾಗಿ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರಿಡಬೇಕು ಎಂದು ವೇದಿಕೆ ಮೇಲಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು ಈ ವೇಳೆ ಬಿಜೆಪಿ ಶಾಸಕ ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹೋರಾಟಗಾರ ಚಂದ್ರಶೇಖರ್ ಅಜಾದ್ ಹೆಸರಿಡಬೇಕು. ಈ ಹಿಂದೆಯೇ ಬಿಎಸ್‌ವೈ ಪ್ರಸ್ತಾಪಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ಈ ಫ್ರೀಡಂ ಪಾರ್ಕ್‌ಗೆ ಚಂದ್ರಶೇಖರ್‌ ಅಜಾದ್ ಹೆಸರಿಡಿ ಎಂದರು. ಈ ವೇಳೆ ಬೇಡ ಬೇಡ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಕಾರ್ಯಕರ್ತರು ಕೂಗಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ನಗರದಲ್ಲಿ ಈ ಫ್ರೀಡಂ ಪಾರ್ಕ್ ಮಾಡಿದ್ದೆ. ಶಾಸಕರಾದ ಚೆನ್ನಬಸಪ್ಪನವರೇ, ಅಲ್ಲಮ ಪ್ರಭು ನಿಮ್ಮ ಜಿಲ್ಲೆಯವರು. ನಿಮ್ಮ ಊರಿನವರು ಕಣ್ರೀ, ಈಗ ನೀವೇ ಹೇಳಿ ಈ ಫ್ರೀಡಂ ಪಾರ್ಕ್‌ಗೆ ಯಾರ ಹೆಸರಿಡಬೇಕು? ನನಗಂತೂ ಮಧು ಬಂಗಾರಪ್ಪ ಅವರು ಹೇಳಿದಂತೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ಟಾಂಗ್ ಕೊಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!