AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗಂದೂರು ಸೇತುವೆಗೆ ”ಚೌಡೇಶ್ವರಿ ದೇವಿ” ಹೆಸರು ನಾಮಕರಣ: ನಿತಿನ್​ ಗಡ್ಕರಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. ಈ ಸೇತುವೆಯ ನಿರ್ಮಾಣದಿಂದ ಪ್ರಯಾಣ ಸುಲಭವಾಗಲಿದೆ ಎಂದು ಅವರು ಹೇಳಿದರು. ಸಿಗಂದೂರು ಸೇತುವೆಗೆ ಚೌಡೇಶ್ವರಿ ದೇವಿ ಹೆಸರು ನಾಮಕರಣ ಮಾಡಿದರು. ಅಲ್ಲದೆ, ರಾಜ್ಯದಲ್ಲಿ ನಡೆಯುತ್ತಿರುವ ಇತರ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಮಾಹಿತಿ ನೀಡಿದರು.

ಸಿಗಂದೂರು ಸೇತುವೆಗೆ ''ಚೌಡೇಶ್ವರಿ ದೇವಿ ಹೆಸರು ನಾಮಕರಣ: ನಿತಿನ್​ ಗಡ್ಕರಿ
ಸಿಗಂದೂರು ಚೌಡೇಶ್ವರಿ, ಸಿಗಂದೂರು ಸೇತುವೆ
Basavaraj Yaraganavi
| Edited By: ವಿವೇಕ ಬಿರಾದಾರ|

Updated on:Jul 14, 2025 | 4:46 PM

Share

ಶಿವಮೊಗ್ಗ, ಜುಲೈ 14: ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆಯನ್ನು (Sigandur Bridge) ಕೇಂದ್ರ ಸಚಿವ ನಿತಿನ್​ ಗಡ್ಕರಿ (Nitin Gadkari) ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಬಳಿಕ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್​ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ (Sigandur Chowdeshwari Devi) ಸೇತುವೆ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು.

ಸಾಗರ ಪಟ್ಟಣದ ನೆಹರು ಮೈದಾನದಲ್ಲಿ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಸಚಿವ ನಿತಿನ್​ ಗಡ್ಕರಿ ಮಾತನಾಡಿದರು. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂತನ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ ಆಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ
Image
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
Image
ಸಿಗಂದೂರು ಸೇತುವೆಯ ವಿಶೇಷತೆಗಳೇನು? ಕೇಬಲ್ ಬ್ರಿಡ್ಜ್​ನಿಂದ ಹಲವು ಪ್ರಯೋಜನ
Image
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
Image
ಸಿಗಂದೂರು ಸೇತುವೆ ಲೋಕಾರ್ಪಣೆ ಕ್ಷಣಗಣನೆ: ಅಚ್ಚರಿ ಮೂಡಿಸಿದ ಸಿಎಂ ಪತ್ರ

5000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಗುರಿ ಹೊಂದಿದ್ದೇವೆ. 1300 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹಾಸನದಿಂದ ರಾಯಚೂರಿಗೆ ಸಂಪರ್ಕ ಕಲ್ಪಿಸುವ ನಾಲ್ಕು ಲೈನ್​ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದ ಪ್ರಯಾಣದ ಸಮಯ ಅರ್ಧದಷ್ಟು ಕಡಿಮೆಯಾಗಲಿದೆ. ಬೆಂಗಳೂರು-ಚೆನೈ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ ಎಂದರು.

ಇದನ್ನೂ ಓದಿ: ನಿಮ್ಮ ಅಧ್ಯಕ್ಷತೆಯಲ್ಲೇ ಕಾರ್ಯಕ್ರಮ ಆಗಬೇಕು: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿದ್ದರಾಮಯ್ಯಗೆ 2 ಬಾರಿ ಆಹ್ವಾನಿಸಿದ್ದ ಗಡ್ಕರಿ

ಬೆಂಗಳೂರಿನಲ್ಲಿ ಟ್ರಾಫಿಕ್​ ಸಮಸ್ಯೆ ನಿವಾರಣೆಗೆ 15 ಸಾವಿರ ಕೋಟಿ ರೂ. ವೆಚ್ಚದಲ್ಲಿ ರಿಂಗ್ ರೋಡ್ ಕಾಮಗಾರಿ ನಡೆಯುತ್ತಿದೆ. ಶೇ 40 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರದಲ್ಲೇ ಉಳಿದ ಕಾಮಗಾರಿಯೂ ಪೂರ್ಣಗೊಳ್ಳಲಿದೆ ಎಂದರು.

ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಲು ಸದ್ಯ 40 ನಿಮಿಷ ಸಮಯ ಬೇಕಾಗುತ್ತದೆ. ಹೆದ್ದಾರಿ ಕಾಮಗಾರಿ ಪೂರ್ಣಗೊಂಡ ಬಳಿಕ ಕೇವಲ 20 ನಿಮಿಷದಲ್ಲಿ ಹುಬ್ಬಳ್ಳಿಯಿಂದ ಧಾರವಾಡಕ್ಕೆ ತಲುಪಬಹುದು. ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:44 pm, Mon, 14 July 25

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್