AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ಶಿವಮೊಗ್ಗ ಜಿಲ್ಲೆಯಲ್ಲಿ ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮಗ

ನಗರ ಪ್ರದೇಶದಲ್ಲಿದ್ದರೂ ಇದುವರೆಗೆ ಸ್ಥಳೀಯ ಆಡಳಿತ ಚರ್ಚ್‌ ಮೌಂಟ್ ಏರಿಯಾಗೆ ರಸ್ತೆ ಸಂಪರ್ಕ ಕಲ್ಪಿಸಿಲ್ಲ. ಚರ್ಚ್ ಮೌಂಟ್ ಏರಿಯಾದಲ್ಲಿರುವ ಸುಮಾರು 20 ಮನೆಗಳಿಗೆ ಓಡಾಡಲು ರಸ್ತೆಯೇ ಇಲ್ಲ! ರಸ್ತೆ ಇಲ್ಲದಿದ್ದರಿಂದ ಯಾರಾದರೂ ಅನಾರೋಗ್ಯಕ್ಕೊಳಗಾದರೆ ಜೋಲಿ ಕಟ್ಟಿ ಹೊತ್ತುಕೊಂಡು ಬರಬೇಕಾದ ದುಃಸ್ಥಿತಿ ಇಲ್ಲಿನ ಜನರದ್ದು.

Shivamogga: ಶಿವಮೊಗ್ಗ ಜಿಲ್ಲೆಯಲ್ಲಿ ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮಗ
ಶಿವಮೊಗ್ಗ ಜಿಲ್ಲೆಯಲ್ಲಿ ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮಗ
TV9 Web
| Edited By: |

Updated on:May 31, 2022 | 2:46 PM

Share

ಶಿವಮೊಗ್ಗ: ಅನಾರೋಗ್ಯ ಪೀಡಿತರನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದರು ಎಂಬಂತಹ ಸುದ್ದಿಗಳನ್ನು ಆಗಾಗ ಬೆರೆಲ್ಲೋ ನಡೆದಿರುವ ಸುದ್ದಿಗಳನ್ನು ನೀವು ಓದಿರುತ್ತೀರಿ. ಆದರೆ ಈಗ ಹೇಳುತ್ತಿರುವ ಪ್ರಕರಣ ನಮ್ಮ ರಾಜ್ಯದಲ್ಲೆ ಅದೂ ರಾಜಕೀಯವಾಗಿ ಬಲಾಢ್ಯವಾದ ಶಿವಮೊಗ್ಗ ಜಿಲ್ಲೆಯಲ್ಲಿ ಘಟಿಸಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲೊಂದು ಇಂತಹ ಮನಕಲಕುವ ದೃಶ್ಯ ಕಣ್ಣಿಗೆ ಬಿದ್ದಿದೆ. ಅನಾರೋಗ್ಯ ಪೀಡಿತ ತಾಯಿಯನ್ನು ಮಗ ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದಿದ್ದಾನೆ.

ತಮ್ಮ ಮನೆಗೆ ರಸ್ತೆ ಇಲ್ಲದಿರುವುದರಿಂದ ವಾಹನ ವ್ಯವಸ್ಥೆಯೂ ಇಲ್ಲದ ಕಾರಣ ತಾಯಿಯನ್ನು ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದಿದ್ದಾಗಿ ಮಗ ಹೇಳಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬುವರು ಪಾರ್ಶ್ವವಾಯುಗೆ ತುತ್ತಾದರು‌. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌. ಹೀಗಾಗಿ ತಾಯಿಯನ್ನು ಉಳಿಸಿಕೊಳ್ಳಲು ಜೋಲಿ ಕಟ್ಟಿ ಕಾಲುದಾರಿಯಲ್ಲಿ ತಾಯಿಯನ್ನು ಹೊತ್ತುಕೊಂಡು ಬಂದಿದ್ದಾನೆ ಅವರ ಮಗ ಅದ್ದಮ್.

ಸುಮಾರು ಒಂದು ಕಿಲೋ ಮೀಟರ್‌ ತಾಯಿ ಅಚ್ಚಮ್ಮಳನ್ನು ಹೊತ್ತುಕೊಂಡು ಬಂದ ಮಗ ಅದ್ದಮ್, ರಸ್ತೆ ಸಿಕ್ಕ ಬಳಿಕ ಅಲ್ಲಿಂದ ಆಸ್ಪತ್ರೆಗೆ ತಾಯಿಯನ್ನು ವಾಹನದಲ್ಲಿ ಕರೆತಂದಿದ್ದಾನೆ. ಜೋಗದ ಕಾರ್ಗಲ್ ಪಟ್ಟಣ ಪಂಚಾಯತಿಗೆ ಸೇರಿರುವ ಚರ್ಚ್ ಮೌಂಟ್ ಏರಿಯಾದಲ್ಲಿ ಅಚ್ಚಮ್ಮ ಕುಟುಂಬ ವಾಸವಾಗಿದೆ.

ನಗರ ಪ್ರದೇಶದಲ್ಲಿದ್ದರೂ ಇದುವರೆಗೆ ಸ್ಥಳೀಯ ಆಡಳಿತ ಚರ್ಚ್‌ ಮೌಂಟ್ ಏರಿಯಾಗೆ ರಸ್ತೆ ಸಂಪರ್ಕ ಕಲ್ಪಿಸಿಲ್ಲ. ಚರ್ಚ್ ಮೌಂಟ್ ಏರಿಯಾದಲ್ಲಿರುವ ಸುಮಾರು 20 ಮನೆಗಳಿಗೆ ಓಡಾಡಲು ರಸ್ತೆಯೇ ಇಲ್ಲ! ರಸ್ತೆ ಇಲ್ಲದಿದ್ದರಿಂದ ಯಾರಾದರೂ ಅನಾರೋಗ್ಯಕ್ಕೊಳಗಾದರೆ ಜೋಲಿ ಕಟ್ಟಿ ಹೊತ್ತುಕೊಂಡು ಬರಬೇಕಾದ ದುಃಸ್ಥಿತಿ ಇಲ್ಲಿನ ಜನರದ್ದು. ಯಾರು ಹೇಳಿದ್ದು ರಾಜಕೀಯ ಘಟಾನುಘಟಿಗಳನ್ನೆ ಹೊಂದಿರುವ ಶಿವಮೊಗ್ಗ ಜಿಲ್ಲೆ ರಾಜಕೀಯವಾಗಿ ಬಲಾಢ್ಯ ಎಂದು?

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Also Read:

iQOO Neo 6: ಭಾರತಕ್ಕೆ ಬಂದೇ ಬಿಡ್ತು ಐಕ್ಯೂ ನಿಯೋ 6 5G: ಇಷ್ಟು ಕಡಿಮೆ ಬೆಲೆಗೆ ಎಂಥಾ ಸ್ಮಾರ್ಟ್​​ಫೋನ್ Also Read:

ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?

Published On - 2:44 pm, Tue, 31 May 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ