AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ಶಿವಮೊಗ್ಗ ಜಿಲ್ಲೆಯಲ್ಲಿ ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮಗ

ನಗರ ಪ್ರದೇಶದಲ್ಲಿದ್ದರೂ ಇದುವರೆಗೆ ಸ್ಥಳೀಯ ಆಡಳಿತ ಚರ್ಚ್‌ ಮೌಂಟ್ ಏರಿಯಾಗೆ ರಸ್ತೆ ಸಂಪರ್ಕ ಕಲ್ಪಿಸಿಲ್ಲ. ಚರ್ಚ್ ಮೌಂಟ್ ಏರಿಯಾದಲ್ಲಿರುವ ಸುಮಾರು 20 ಮನೆಗಳಿಗೆ ಓಡಾಡಲು ರಸ್ತೆಯೇ ಇಲ್ಲ! ರಸ್ತೆ ಇಲ್ಲದಿದ್ದರಿಂದ ಯಾರಾದರೂ ಅನಾರೋಗ್ಯಕ್ಕೊಳಗಾದರೆ ಜೋಲಿ ಕಟ್ಟಿ ಹೊತ್ತುಕೊಂಡು ಬರಬೇಕಾದ ದುಃಸ್ಥಿತಿ ಇಲ್ಲಿನ ಜನರದ್ದು.

Shivamogga: ಶಿವಮೊಗ್ಗ ಜಿಲ್ಲೆಯಲ್ಲಿ ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮಗ
ಶಿವಮೊಗ್ಗ ಜಿಲ್ಲೆಯಲ್ಲಿ ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮಗ
TV9 Web
| Updated By: ಸಾಧು ಶ್ರೀನಾಥ್​|

Updated on:May 31, 2022 | 2:46 PM

Share

ಶಿವಮೊಗ್ಗ: ಅನಾರೋಗ್ಯ ಪೀಡಿತರನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದರು ಎಂಬಂತಹ ಸುದ್ದಿಗಳನ್ನು ಆಗಾಗ ಬೆರೆಲ್ಲೋ ನಡೆದಿರುವ ಸುದ್ದಿಗಳನ್ನು ನೀವು ಓದಿರುತ್ತೀರಿ. ಆದರೆ ಈಗ ಹೇಳುತ್ತಿರುವ ಪ್ರಕರಣ ನಮ್ಮ ರಾಜ್ಯದಲ್ಲೆ ಅದೂ ರಾಜಕೀಯವಾಗಿ ಬಲಾಢ್ಯವಾದ ಶಿವಮೊಗ್ಗ ಜಿಲ್ಲೆಯಲ್ಲಿ ಘಟಿಸಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲೊಂದು ಇಂತಹ ಮನಕಲಕುವ ದೃಶ್ಯ ಕಣ್ಣಿಗೆ ಬಿದ್ದಿದೆ. ಅನಾರೋಗ್ಯ ಪೀಡಿತ ತಾಯಿಯನ್ನು ಮಗ ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದಿದ್ದಾನೆ.

ತಮ್ಮ ಮನೆಗೆ ರಸ್ತೆ ಇಲ್ಲದಿರುವುದರಿಂದ ವಾಹನ ವ್ಯವಸ್ಥೆಯೂ ಇಲ್ಲದ ಕಾರಣ ತಾಯಿಯನ್ನು ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದಿದ್ದಾಗಿ ಮಗ ಹೇಳಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬುವರು ಪಾರ್ಶ್ವವಾಯುಗೆ ತುತ್ತಾದರು‌. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌. ಹೀಗಾಗಿ ತಾಯಿಯನ್ನು ಉಳಿಸಿಕೊಳ್ಳಲು ಜೋಲಿ ಕಟ್ಟಿ ಕಾಲುದಾರಿಯಲ್ಲಿ ತಾಯಿಯನ್ನು ಹೊತ್ತುಕೊಂಡು ಬಂದಿದ್ದಾನೆ ಅವರ ಮಗ ಅದ್ದಮ್.

ಸುಮಾರು ಒಂದು ಕಿಲೋ ಮೀಟರ್‌ ತಾಯಿ ಅಚ್ಚಮ್ಮಳನ್ನು ಹೊತ್ತುಕೊಂಡು ಬಂದ ಮಗ ಅದ್ದಮ್, ರಸ್ತೆ ಸಿಕ್ಕ ಬಳಿಕ ಅಲ್ಲಿಂದ ಆಸ್ಪತ್ರೆಗೆ ತಾಯಿಯನ್ನು ವಾಹನದಲ್ಲಿ ಕರೆತಂದಿದ್ದಾನೆ. ಜೋಗದ ಕಾರ್ಗಲ್ ಪಟ್ಟಣ ಪಂಚಾಯತಿಗೆ ಸೇರಿರುವ ಚರ್ಚ್ ಮೌಂಟ್ ಏರಿಯಾದಲ್ಲಿ ಅಚ್ಚಮ್ಮ ಕುಟುಂಬ ವಾಸವಾಗಿದೆ.

ನಗರ ಪ್ರದೇಶದಲ್ಲಿದ್ದರೂ ಇದುವರೆಗೆ ಸ್ಥಳೀಯ ಆಡಳಿತ ಚರ್ಚ್‌ ಮೌಂಟ್ ಏರಿಯಾಗೆ ರಸ್ತೆ ಸಂಪರ್ಕ ಕಲ್ಪಿಸಿಲ್ಲ. ಚರ್ಚ್ ಮೌಂಟ್ ಏರಿಯಾದಲ್ಲಿರುವ ಸುಮಾರು 20 ಮನೆಗಳಿಗೆ ಓಡಾಡಲು ರಸ್ತೆಯೇ ಇಲ್ಲ! ರಸ್ತೆ ಇಲ್ಲದಿದ್ದರಿಂದ ಯಾರಾದರೂ ಅನಾರೋಗ್ಯಕ್ಕೊಳಗಾದರೆ ಜೋಲಿ ಕಟ್ಟಿ ಹೊತ್ತುಕೊಂಡು ಬರಬೇಕಾದ ದುಃಸ್ಥಿತಿ ಇಲ್ಲಿನ ಜನರದ್ದು. ಯಾರು ಹೇಳಿದ್ದು ರಾಜಕೀಯ ಘಟಾನುಘಟಿಗಳನ್ನೆ ಹೊಂದಿರುವ ಶಿವಮೊಗ್ಗ ಜಿಲ್ಲೆ ರಾಜಕೀಯವಾಗಿ ಬಲಾಢ್ಯ ಎಂದು?

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Also Read:

iQOO Neo 6: ಭಾರತಕ್ಕೆ ಬಂದೇ ಬಿಡ್ತು ಐಕ್ಯೂ ನಿಯೋ 6 5G: ಇಷ್ಟು ಕಡಿಮೆ ಬೆಲೆಗೆ ಎಂಥಾ ಸ್ಮಾರ್ಟ್​​ಫೋನ್ Also Read:

ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?

Published On - 2:44 pm, Tue, 31 May 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?