AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ಶಿವಮೊಗ್ಗ, ತಾಳಗುಪ್ಪಕ್ಕೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ

ಮುಂಗಾರು ಮಳೆಯಿಂದಾಗಿ ಮಲೆನಾಡು ಪ್ರವಾಸೋದ್ಯಮ ಚುರುಕಾಗಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆ ಬೆಂಗಳೂರಿನಿಂದ ತಾಳಗುಪ್ಪಕ್ಕೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಜುಲೈ 25 ಮತ್ತು 26 ರಂದು ಚಲಿಸುವ ಈ ರೈಲಿನ ವೇಳಾಪಟ್ಟಿ, ಮಾರ್ಗ ಮತ್ತು ಬೋಗಿಗಳ ವಿವರಗಳನ್ನು ಈ ಲೇಖನ ಒಳಗೊಂಡಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ಶಿವಮೊಗ್ಗ, ತಾಳಗುಪ್ಪಕ್ಕೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ
ತಾಳಗುಪ್ಪ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on:Jul 20, 2025 | 9:25 AM

Share

ಬೆಂಗಳೂರು, ಜುಲೈ 20: ಮುಂಗಾರು ಮಳೆ (Monsoon) ಆರಂಭವಾಗಿದ್ದು, ಮಲೆನಾಡು ಭಾಗದಲ್ಲಿನ ಜಲಪಾತಗಳು ಮೈದುಂಬಿ ಧುಮ್ಮುಕ್ಕುತ್ತಿವೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಜಿಲ್ಲೆಗಳಿಗೆ ಪ್ರಯಾಣಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಪ್ರವಾಸಿಗರ ಬೇಡಿಕೆ ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು (South Western Railway) ಬೆಂಗಳೂರಿನ (Bengaluru) ಯಶವಂತಪುರದಿಂದ ಶಿವಮೊಗ್ಗ ಮಾರ್ಗವಾಗಿ ತಾಳಗುಪ್ಪಗೆ (Talguppa) ಒಂದು ಟ್ರಿಪ್​ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/0658) ಒಂದು ಟ್ರಿಪ್​ ವಿಶೇಷ ಎಕ್ಸ್​ಪ್ರೆಸ್​ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ಈ ರೈಲು ಜುಲೈ 25 ಮತ್ತು 26 ರಂದು ಸಂಚಾರ ನಡೆಸಲಿದೆ.

ಇದನ್ನೂ ಓದಿ
Image
ತಿರುಪತಿಗೆ ತೆರಳುವ ಭಕ್ತರಿಗೆ ಗುಡ್​ ನ್ಯೂಸ್​: ಕರ್ನಾಟಕದಿಂದ ನೂತನ ರೈಲು
Image
ವಿಜಯಪುರ-ಮಂಗಳೂರು ರೈಲು ಸಂಚಾರ ಅವಧಿ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ
Image
ಬೆಳಗಾವಿ ಮಂದಿಗೆ ಗುಡ್​ ನ್ಯೂಸ್​: ನಿಮ್ಮೂರಿಗೂ ಬರಲಿದೆ ವಂದೇ ಭಾರತ್​ ರೈಲು
Image
ಬೆಂಗಳೂರು ಜನರಿಗೆ ಸಿಹಿ ಸುದ್ದಿ: 2 ಹೊಸ ರೈಲು ನಿಲ್ದಾಣ ನಿರ್ಮಾಣ!

ಬೆಂಗಳೂರು-ತಾಳಗಪ್ಪ ರೈಲು ವೇಳಪಟ್ಟಿ

  • ರೈಲು ಸಂಖ್ಯೆ 06587 ಯಶವಂತಪುರ- ತಾಳಗುಪ್ಪ ಎಕ್ಸ್‌ಪ್ರೆಸ್ ವಿಶೇಷ ರೈಲು ಜುಲೈ 25 ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ. ಈ ರೈಲು ತುಮಕೂರು (11:18/11:20 PM), ತಿಪಟೂರು (12:13/12:15 AM), ಅರಸೀಕೆರೆ (12:33/12:38 AM) ಬೀರೂರು (01:13/01:15 AM), ತರಿಕೇರೆ (1:43/1:45 AM), ಭದ್ರಾವತಿ (02:00/02:02 AM), ಶಿವಮೊಗ್ಗ ಟೌನ್​ (02:20/02:25 AM), ಆನಂದಪುರಂ (03:10/03:12 AM) ಮತ್ತು ಜಂಬಗಾರು (03:35/03:37 AM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ತಾಳಗುಪ್ಪ-ಬೆಂಗಳೂರು ರೈಲು ವೇಳಾಪಟ್ಟಿ

  • ರೈಲು ಸಂಖ್ಯೆ 06588 ತಾಳಗುಪ್ಪ-ಯಶವಂತಪುರ ಎಕ್ಸ್​ಪ್ರೆಸ್ ವಿಶೇಷ ರೈಲು ಜುಲೈ 26 ರಂದು ಬೆಳಿಗ್ಗೆ 8:15ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 4:50ಕ್ಕೆ ಯಶವಂತಪುರ ತಲುಪಲಿದೆ. ಮಾರ್ಗ ಮಧ್ಯೆ ಈ ರೈಲು ಸಾಗರ ಜಂಬಗಾರು (08:30/08:32 AM), ಆನಂದಪುರಂ (09:00/09:02 AM), ಶಿವಮೊಗ್ಗ ಟೌನ್​ (09:45/09:50 AM), ಭದ್ರಾವತಿ (10:15/10:17 AM), ತರೀಕೆರೆ (10:30/10:32 AM), ಬೀರೂರು (11:00/11:02 AM), ಅರಸೀಕೆರೆ (12:00/12:10 PM), ತಿಪಟೂರು (12:28/12:30 PM) ಮತ್ತು ತುಮಕೂರು (03:18/03:20 PM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ಇದನ್ನೂ ಓದಿ: ಚಿಕ್ಕಮಗಳೂರು-ತಿರುಪತಿ ರೈಲು ಸೇವೆ: ಹಿಂದೂ-ಮುಸ್ಲಿಮರ ನಡುವೆ ಶುರುವಾದ ವಿವಾದವೇನು?

ನೈಋತ್ಯ ರೈಲ್ವೆ ಪತ್ರಿಕಾ ಪ್ರಕಟಣೆ

ಈ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿದೆ. ಇದರಲ್ಲಿ 01 ಎಸಿ ಟು ಟೈರ್​, 02 ಎಸಿ ತ್ರಿ ಟೈರ್​, 10 ಸ್ಲೀಪರ್ ​ಕ್ಲಾಸ್, 05 ಜನರಲ್​ ಸೆಕೆಂಡ್​ ಕ್ಲಾಸ್​ ಮತ್ತು 02 ಸೆಕೆಂಡ್​ ಕ್ಲಾಸ್​ ಲಗೇಜ್​-ಕಮ್​-ಬ್ರೇಕ್​ ವ್ಯಾನ್​ ಬೋಗಿಗಳು ಇರಲಿವೆ.​

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:03 am, Sun, 20 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ