ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‌ಗೆ ಸ್ಪೈಸ್‌ಜೆಟ್ ನೇರ ವಿಮಾನ ಸೇವೆ: ಇಲ್ಲಿದೆ ವೇಳಾಪಟ್ಟಿ

ಶಿವಮೊಗ್ಗ ಜನತೆಗೆ ಹಾಗೂ ಬೇರೆ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಪ್ರವಾಸ ಬರುವವರಿಗೆ ಸಂಸದ ಬಿವೈ ರಾಘವೇಂದ್ರ ಹಾಗೂ ಸ್ಪೈಸ್​ಜೆಟ್ ವಿಮಾನಯಾನ ಸಂಸ್ಥೆ ಅಧಿಕಾರಿಗಳು ಗುಡ್ ನ್ಯೂಸ್ ನೀಡಿದ್ದಾರೆ. ಶಿವಮೊಗ್ಗದಿಂದ ಚೆನ್ನೈ ಹಾಗೂ ಹೈದರಾಬಾದ್​ಗೆ ಅಕ್ಟೋಬರ್ 10ರಿಂದ ನೇರ ವಿಮಾನ ಸಂಚಾರ ಆರಂಭವಾಗಲಿದೆ. ವೇಳಾಪಟ್ಟಿ ಇಲ್ಲಿದೆ.

ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‌ಗೆ ಸ್ಪೈಸ್‌ಜೆಟ್ ನೇರ ವಿಮಾನ ಸೇವೆ: ಇಲ್ಲಿದೆ ವೇಳಾಪಟ್ಟಿ
ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‌ಗೆ ಸ್ಪೈಸ್‌ಜೆಟ್ ವಿಮಾನ ಸೇವೆ (ಸಾಂದರ್ಭಿಕ ಚಿತ್ರ)
Follow us
|

Updated on: Sep 24, 2024 | 9:08 AM

ಬೆಂಗಳೂರು, ಸೆಪ್ಟೆಂಬರ್ 24: ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ನೇರ ವಿಮಾನ ಸೇವೆಯನ್ನು ಸ್ಪೈಸ್‌ಜೆಟ್ ಪರಿಚಯಿಸಲಿದ್ದು, ಅಕ್ಟೋಬರ್ 10 ರಿಂದ ಆರಂಭವಾಗಲಿವೆ. ವಿಮಾನಾಯನ ಸಂಸ್ಥೆಯ ಅಧಿಕೃತ ವೆಬ್​ಸೈಟ್​​ನಲ್ಲಿ ಬುಕ್ಕಿಂಗ್ ಆರಂಭಿಸಲಾಗಿದೆ.

ಈ ಬಗ್ಗೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಕೂಡ ಎಕ್ಸ್​​ ಸಂದೇಶದ ಮೂಲಕ ಮಾಹಿತಿ ನೀಡಿದ್ದು, ವಿಮಾನ ಆಗಮನ, ನಿರ್ಗಮನ ಸಮಯ ಮತ್ತಿತರ ವಿವರಗಳನ್ನು ನೀಡಿದ್ದಾರೆ.

‘‘ಶಿವಮೊಗ್ಗಕ್ಕೆ ಮತ್ತೊಂದು ಮಹತ್ವದ ಸುದ್ದಿ! ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದಿಂದ ಎರಡು ಹೊಸ ವಿಮಾನ ಮಾರ್ಗಗಳನ್ನು ಸೇವೆಗೆ ಸೇರಿಸಲಿದೆ! ಅಕ್ಟೋಬರ್ 10ರಿಂದ ಪ್ರಾರಂಭವಾಗುವಂತೆ ಚೆನ್ನೈ ಮತ್ತು ಹೈದರಾಬಾದ್‌ಗೆ ನೇರ ವಿಮಾನಯಾನ ಸೇವೆ ದೊರೆಯಲಿದೆ’’ ಎಂದು ರಾಘವೇಂದ್ರ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ರಾಘವೇಂದ್ರ ಎಕ್ಸ್ ಸಂದೇಶ

ಸ್ಪೈಸ್​​ಜೆಟ್ ವಿಮಾನಗಳ ವೇಳಾಪಟ್ಟಿ

ಸ್ಪೈಸ್​​ಜೆಟ್ ವಿಮಾನ ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40 ಕ್ಕೆ ಹೊರಟು ಮಧ್ಯಾಹ್ನ 12.10 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35 ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್ ತಲುಪಲಿವೆ.

ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40 ಕ್ಕೆ ಹೊರಡಲಿದ್ದು, ಸಂಜೆ 4.10 ಕ್ಕೆ ಶಿವಮೊಗ್ಗ ತಲುಪಲಿದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ಚೆನ್ನೈ ತಲುಪಲಿದೆ.

ಇದನ್ನೂ ಓದಿ: ಶಿವಮೊಗ್ಗ: ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಪ್ಲೆಕ್ಸ್, ಕ್ರಮಕ್ಕೆ ಮಾಜಿ ಗೃಹ ಸಚಿವ ಆಗ್ರಹ

ಈ ಹೊಸ ವಿಮಾನ ಸೇವೆ ಶಿವಮೊಗ್ಗದ ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ಉತ್ತೇಜನವನ್ನು ನೀಡುತ್ತದೆ ಮತ್ತು ಸಂಪರ್ಕವನ್ನು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಸಂಸದ ಬಿವೈ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗಕ್ಕೆ ಸೇವೆಗಳನ್ನು ವಿಸ್ತರಿಸಿದ್ದಕ್ಕಾಗಿ ಅವರು ಸ್ಪೈಸ್‌ಜೆಟ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ
‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ