Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗದಳ ಕಾರ್ಯಕರ್ತ ಹರ್ಷ ಮೃತದೇಹ ಮೆರವಣಿಗೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ; ಮತ್ತೆ ಬಿಗು ವಾತಾವರಣ ನಿರ್ಮಾಣ

ಕಲ್ಲು ತೂರಾಟದಿಂದ ಹಲವು ಮಂದಿಗೆ ಗಾಯವಾಗಿದ್ದು, ಓರ್ವನಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಪ್ರಹಾರ ನಡೆಸಲಾಗಿದ್ದು, ಕೆಲವು ಕಡೆಗಳಲ್ಲಿ ಟಿಯರ್ ಗ್ಯಾಸ್ ಪ್ರಯೋಗ ಮಾಡಲಾಗಿದೆ.

ಬಜರಂಗದಳ ಕಾರ್ಯಕರ್ತ ಹರ್ಷ ಮೃತದೇಹ ಮೆರವಣಿಗೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ; ಮತ್ತೆ ಬಿಗು ವಾತಾವರಣ ನಿರ್ಮಾಣ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Feb 21, 2022 | 3:56 PM

ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಹರ್ಷ ಮೃತದೇಹ ಮೆರವಣಿಗೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗದ ಕೆ.ಆರ್.ಪುರಂನ ಸಿದ್ದಯ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಕಲ್ಲು ತೂರಾಟದಲ್ಲಿ ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅಶ್ರುವಾಯು ಪ್ರಯೋಗಿಸಿ ಪರಿಸ್ಥಿತಿ ಹತೋಟಿಗೆ ತರಲು ಯತ್ನಿಸಲಾಗುತ್ತಿದೆ. ಈ ಮಧ್ಯೆ, ನಗರದ ಸಿದ್ಧಯ್ಯ ರಸ್ತೆಯಲ್ಲಿ ಮೆರವಣಿಗೆ ವೇಳೆ ಮತ್ತೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಟಿಯರ್ ಗ್ಯಾಸ್ ಬಳಕೆ ಮಾಡಲಾಗಿದೆ.

ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ ಪಾಲ್ಗೊಂಡಿದ್ದ ಮೆರವಣಿಗೆಯಲ್ಲಿ ಘಟನೆ ನಡೆದಿದೆ. ನಿನ್ನೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಅಂತಿಮ ಯಾತ್ರೆ ವೇಳೆ ಸಿದ್ದಯ್ಯ ರಸ್ತೆಯಲ್ಲಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಹರ್ಷನ ನಿವಾಸಕ್ಕೆ ಮೃತದೇಹ ತಂದ ನಂತರ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಅವರುಗಳು ಅಂತಿಮ ದರ್ಶನ ಪಡೆದಿದ್ದರು. ಆನಂತರ ಅಲ್ಲಿಂದ ರೋಟರಿ ಚಿತಾಗಾರಕ್ಕೆ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆ ಸಿದ್ಧಯ್ಯ ರಸ್ತೆ ತಲುಪುತ್ತಿದ್ದಂತೆಯೇ ಏಕಾಏಕಿ ಮತ್ತೆ ಕಲ್ಲುತೂರಾಟ ಆರಂಭವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕಲ್ಲು ತೂರಾಟದಿಂದ ಹಲವು ಮಂದಿಗೆ ಗಾಯವಾಗಿದ್ದು, ಓರ್ವನಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಪ್ರಹಾರ ನಡೆಸಲಾಗಿದ್ದು, ಕೆಲವು ಕಡೆಗಳಲ್ಲಿ ಟಿಯರ್ ಗ್ಯಾಸ್ ಪ್ರಯೋಗ ಮಾಡಲಾಗಿದೆ.

ಹರ್ಷ ಮನೆಯಿಂದ ಚಿತಾಗಾರದವರೆಗೆ ಮೆರವಣಿಗೆ ನಡೆಯುತ್ತಿತ್ತು. ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲು ಯೋಜಿಸಲಾಗಿತ್ತು. ಶಿವಮೊಗ್ಗದ ಗಾಂಧಿಬಜಾರ್, ಬಿ.ಹೆಚ್.ರಸ್ತೆ, ಹೊಳೆ ಬಸ್‌ ನಿಲ್ದಾಣ ಮಾರ್ಗವಾಗಿ ಮೆರವಣಿಗೆ ಸಾಗುತ್ತಿತ್ತು. 5 ಕಿ.ಮೀ. ಮೆರವಣಿಗೆಯಲ್ಲಿ ಮೃತದೇಹ ಸಾಗಲಿತ್ತು. ಶಿವಮೊಗ್ಗ ನಗರದಲ್ಲಿ ಹರ್ಷ ಮೃತದೇಹ ಅಂತಿಮಯಾತ್ರೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ನೂರಾರು ಜನ ಭಾಗಿ ಆಗಿದ್ದಾರೆ.

ಶಿವಮೊಗ್ಗದಿಂದ ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆಗಮಿಸಿದ್ದಾರೆ. ರೇಸ್‌ಕೋರ್ಸ್ ನಿವಾಸದಲ್ಲಿ ಸಿಎಂ ಭೇಟಿ ಸಾಧ್ಯತೆ ಇದೆ. ಇತ್ತ, ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಸ್​ಕೋರ್ಸ್​ ರಸ್ತೆಯ ಸಿಎಂ ನಿವಾಸಕ್ಕೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗಮಿಸಿದ್ದಾರೆ. ಶಿವಮೊಗ್ಗ ಘಟನೆ ಸಂಬಂಧ ಚರ್ಚಿಸಲು ಮುತಾಲಿಕ್​ ಭೇಟಿ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಳಗ್ಗೆಯಿಂದ ಪ್ರಯತ್ನ ನಡೆಸಲಾಗುತ್ತಿದೆ. ಖುದ್ದು ನಾನೇ ರಸ್ತೆಗಿಳಿದು ಎಲ್ಲರ ಜತೆ ಚರ್ಚೆ ಮಾಡುತ್ತಿದ್ದೇನೆ. ಕೆಲ ಹೊತ್ತಿನಲ್ಲೇ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿದೆ. ಖುದ್ದು ಎಡಿಜಿಪಿ ಭೇಟಿ ನೀಡಿ ಸಲಹೆ ಸೂಚನೆ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Shivamogga murder: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ! ಬೆಚ್ಚಿಬಿದ್ದ ಮಲೆನಾಡು ಜನ

ಇದನ್ನೂ ಓದಿ: ಶಿವಮೊಗ್ಗನಲ್ಲಿ ‘ಮುಗ್ಧ ಮಕ್ಕಳು’ ಕೇಸರಿ ಧ್ವಜ ಹಾರಿಸಿದ್ದು ತಪ್ಪಲ್ಲ ಅನ್ನುತ್ತಾರೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ!!

Published On - 3:12 pm, Mon, 21 February 22

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ