AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ನಿಗೂಢ ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬಡವರಿಗೆ ತಮ್ಮ ಮಕ್ಕಳ ವಿದ್ಯಾಭ್ಯಾಸದ್ದೆ ದೊಡ್ಡ ಚಿಂತೆ ಸದಾ ಕಾಡುತ್ತಿರುತ್ತದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಬಡವರಿಗೆ ದೊಡ್ಡ ಸವಾಲು. ಅದರಂತೆ ಇಲ್ಲೊಂದು ಕುಟುಂಬ ಮಗಳ ವಿದ್ಯಾಭ್ಯಾಸಕ್ಕೆಂದು ಖಾಸಗಿ ವಸತಿ ಶಾಲೆಗೆ ದಾಖಲು ಮಾಡಿದ್ದರು. ವಸತಿ ಶಾಲೆಗ ಹೋಗಿ ಕೆಲವೇ ದಿನವಾಗಿತ್ತು. ಈ ನಡುವೆ ವಿದ್ಯಾರ್ಥಿನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ.

Shivamogga News: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ನಿಗೂಢ ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಮೃತ ಬಾಲಕಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 10, 2023 | 8:40 AM

ಶಿವಮೊಗ್ಗ: ಜಿಲ್ಲೆಯ ಸಾಗರ(Sagara) ತಾಲ್ಲೂಕಿನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ 13 ವರ್ಷದ ತೇಜಸ್ವಿನಿ ಎಂಬ ಬಾಲಕಿ 8ನೇ ಕ್ಲಾಸ್ ನಲ್ಲಿ ವ್ಯಾಸ್ಯಾಂಗ ಮಾಡುತ್ತಿದ್ದಳು. ವಸತಿ ಶಾಲೆಯಲ್ಲಿ ಬಾಲಕಿಯ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ವಿದ್ಯಾರ್ಥಿ ಮೃತಪಟ್ಟಿದ್ದು, ವಿದ್ಯಾರ್ಥಿನಿಯು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆಂದು ಪೋಷಕರು, ಮೃತಳ ಸಂಬಂಧಿಗಳು ಆರೋಪಿಸುತ್ತಿದ್ದಾರೆ. ಹೌದು ಮದ್ಯಾಹ್ನ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಖಾಸಗಿ ವಸತಿ ಶಾಲೆಯ ಸಿಬ್ಬಂದಿಗಳು ಕೂಡಲೇ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಸ್ಪತ್ರೆಗೆ ದಾಖಲಿಸುವ ಮೊದಲೇ ವಿದ್ಯಾರ್ಥಿನಿಯು ಮೃತಪಟ್ಟಿರುವ ಕುರಿತು ವೈದ್ಯರು ದೃಢಪಡಿಸಿದ್ದಾರೆ. ಇದರಿಂದ ಕುಟುಂಬಸ್ಥರಿಗೆ ದೊಡ್ಡ ಅಚ್ಚರಿ ಮತ್ತು ಆಘಾತವಾಗಿದೆ.

ಆರೋಗ್ಯವಾಗಿದ್ದ ಮಗಳು, ವಸತಿ ಶಾಲೆಗೆ ಹೋದ ಕೆಲವೇ ದಿನದಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಹೇಗೆ?. ಈ ಕುರಿತು ವಸತಿ ಶಾಲೆಯವರು ಯಾವುದೇ ಮಾಹಿತಿಯನ್ನು ಪೋಷಕರಿಗೆ ಕೊಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತಳ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಹಾಸ್ಟೇಲ್ ನಲ್ಲಿರುವ ಅವ್ಯವಸ್ಥೆಯಿಂದಲೇ ವಿದ್ಯಾರ್ಥಿನಿಯು ಮೃತಪಟ್ಟಿದ್ಧಾಳೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಫ್ಯಾನ್​ಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್​ ಸಿಬ್ಬಂದಿ ವಿರುದ್ಧ ಮೃತ ವರ್ಷಿತಾ ಪೋಷಕರ ಆರೋಪ

ಸಾಗರ ತಾಲೂಕಿನ ವನಶ್ರೀ ಎನ್ನುವ ವಸತಿ ಶಾಲೆಯಲ್ಲಿ ನೂರಾರು ಮಕ್ಕಳು ವ್ಯಾಸ್ಯಾಂಗ ಮಾಡುತ್ತಿದ್ದಾರೆ. ಅದರಲ್ಲೂ ಬಡ ಮಕ್ಕಳಿಗೆ ಇಲ್ಲಿ ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಹೆಚ್ಚು ಹೊರ ರಾಜ್ಯದ ಬಡಮಕ್ಕಳು ವನಶ್ರೀಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ. ಸ್ಥಳೀಯವಾಗಿ ಬಡ ಹೆಣ್ಣು ಮಕ್ಕಳಿಗೆ ಇಲ್ಲಿ ಉಚಿತವಾಗಿ ಶಿಕ್ಷಣದ ವ್ಯವಸ್ಥೆ ಮಾಡಲಾಗಿದೆ. ಈ ನಡುವೆ ಸೊರಬ ತಾಲೂಕಿನ ಶಿವಪುರ ಗ್ರಾಮದ ತೇಜಸ್ವಿನಿಯನ್ನು ಕಳೆದ ಮೂರು ನಾಲ್ಕು ದಿನಗಳ ಹಿಂದೆ ವಸತಿ ಶಾಲೆಗೆ ಸೇರಿಸಲಾಗಿತ್ತು. ಈ ನಡುವೆ ಹಠಾತ್ ಆಗಿ ತೇಜಸ್ವಿನಿ ಮೃತಪಟ್ಟಿದ್ದು, ಪೋಷಕರಿಗೆ ದಿಕ್ಕೇ ತೋಚದಂತಾಗಿದೆ.

ಎಸ್ಸಿ ಸಮಾಜಕ್ಕೆ ಸೇರಿದ ವಿದ್ಯಾರ್ಥಿನಿಯ ಉತ್ತಮ ಭವಿಷ್ಯಕ್ಕಾಗಿ ಖಾಸಗಿ ವಸತಿ ಶಾಲೆಯಲ್ಲಿ ದಾಖಲು ಮಾಡಲಾಗಿತ್ತು. ಶಾಲೆಯ ಆರಂಭದ ಕೆಲವೇ ದಿನದಲ್ಲಿ ವಿದ್ಯಾರ್ಥಿನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ಹಾಸ್ಟೇಲ್​ನಲ್ಲಿ ವಿದ್ಯಾರ್ಥಿನಿಗೆ ಸಮಸ್ಯೆ ಆಗಿದೆ. ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರಪೇರು ಆಗಿದೆ. ಕೂಡಲೇ ವಿದ್ಯಾರ್ಥಿನಿಯ ಪೋಷಕರಿಗೆ ಮಾಹಿತಿ ಕೊಟ್ಟು, ಅವಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಿತ್ತು. ಇಲ್ಲಿ ಆರೋಗ್ಯ ಸಮಸ್ಯೆ ಆದ್ರೂ, ಹಾಸ್ಟೇಲ್​ನಲ್ಲಿರುವ ಸಿಬ್ಬಂದಿಗಳು ಮತ್ತು ವಾರ್ಡ್ ನ್​ಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ಸಾವು ಹಾಸ್ಟೇಲ್​ನಲ್ಲೇ ಆಗಿದೆ ಎನ್ನುವುದು ಕುಟುಂಬಸ್ಥರ ಆರೋಪವಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಅನುಮಾನಸ್ಪದ ಸಾವು ಕುರಿತು ಕೇಸ್ ದಾಖಲಾಗಿದೆ.

ಇದನ್ನೂ ಓದಿ:ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿ ಮೇಲೆ ವಿದ್ಯಾರ್ಥಿ ಮೃತದೇಹ ಪತ್ತೆ, ಆತ್ಮಹತ್ಯೆಯಲ್ಲ ಕೊಲೆ ಎಂದ ಪೋಷಕರು

ಹಾಸ್ಟೇಲ್​ಗೆ ಹೋಗಿ ಕೇವಲ ಮೂರು ನಾಲ್ಕು ದಿನಗಳಾಗಿತ್ತು. ಅಷ್ಟರಲ್ಲೇ ವಿದ್ಯಾರ್ಥಿನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ಮಗಳ ಸಾವಿನಿಂದ ಪೋಷಕರು ಕಂಗಾಲು ಆಗಿದ್ದಾರೆ. ಸೂಕ್ತ ತನಿಖೆಯ ಬಳಿಕವಷ್ಟೇ ವಿದ್ಯಾರ್ಥಿನಿಯ ಸಾವಿನ ರಹಸ್ಯ ಬಯಲಾಗಬೇಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:38 am, Sat, 10 June 23

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ