AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಚಲಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಬೆಂಕಿಗಾಹುತಿ

ಸೊರಬ ತಾಲೂಕು ಚಿಕ್ಕಚೌಟಿಯಿಂದ ಆನವಟ್ಟಿಗೆ ಹೊರಟಿದ್ದ ರಾಜು ಎಂಬುವರ ಸ್ವಿಫ್ಟ್ ಡಿಸೈರ್ ವಾಹನ ಈ ಅಗ್ನಿ ಅವಗಡದಲ್ಲಿ ಆಹುತಿಯಾಗಿದೆ.

ಶಿವಮೊಗ್ಗ: ಚಲಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಬೆಂಕಿಗಾಹುತಿ
ಸ್ವಿಫ್ಟ್ ಕಾರ್ ಬೆಂಕಿಗಾಹುತಿ
TV9 Web
| Edited By: |

Updated on:Sep 03, 2021 | 9:59 PM

Share

ಶಿವಮೊಗ್ಗ: ಚಲಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಬೆಂಕಿ ಹತ್ತಿ ಉರಿದಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ. ಮೊದಲಿಗೆ ಬ್ಯಾನೆಟ್ ನಲ್ಲಿ ಕಪ್ಪು ಹೊಗೆ ಕಾಣಿಸಿಕೊಂಡಿತ್ತು. ನಂತರ ಇಡೀ ವಾಹನ ಬೆಂಕಿಗೆ ಆಹುತಿ ಆಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಸೊರಬ ತಾಲೂಕು ಚಿಕ್ಕಚೌಟಿಯಿಂದ ಆನವಟ್ಟಿಗೆ ಹೊರಟಿದ್ದ ರಾಜು ಎಂಬುವರ ಸ್ವಿಫ್ಟ್ ಡಿಸೈರ್ ವಾಹನ ಈ ಅಗ್ನಿ ಅವಗಡದಲ್ಲಿ ಆಹುತಿಯಾಗಿದೆ. ಮೊದಲಿಗೆ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ರಾಜು ಅವರೇ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದು ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿದ್ದಾರೆ.

ಕಾರು ನಿಲ್ಲಿಸಿದ ಕ್ಷಣ ಮಾತ್ರದಲ್ಲಿ ಇಡೀ ವಾಹನಕ್ಕೆ ಬೆಂಕಿ ಹತ್ತಿಕೊಂಡಿದೆ. ಧಗ ಧಗನೇ ಬೆಂಕಿಗೆ ವಾಹನ ಸಂಪೂರ್ಣ ಹೊತ್ತಿ ಉರಿದಿದೆ. ಅಕ್ಕ ಪಕ್ಕದ ತೋಟದ ಮನೆಯವರು ಬಂದು ಬೆಂಕಿ ಆರಿಸಲು ಯತ್ನಿಸಿದ್ದಾರೆ.

ಆದರೆ ಬೆಂಕಿ ನಂದಿಸುವ ಕಾರ್ಯದಿಂದ ಯಾವುದೇ ಪ್ರಯೋಜನವಾಗಿಲ್ಲ. ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಜು ಅವರು ಉಳ್ಳಿ ಗ್ರಾಮಸ್ಥರಾಗಿದ್ದು ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ ಆಗಿದ್ದಾರೆ. ಸ್ವಿಫ್ಟ್ ಡಿಸೈರ್ ಖರೀದಿಸಿ ಕೇವಲ ಒಂದೂವರೆ ವರ್ಷ ಕಳೆದಿದೆ. ಅದನ್ನು ಹೊಸ ಕಾರ್ ಎಂದರೂ ತಪ್ಪಾಗಲಾರದು. ಹೊಸ ವಾಹನವೇ ಹೀಗೆ ಬೆಂಕಿಗೆ ಆಹುತಿ ಆಗಿರುವುದು ಆಶ್ಚರ್ಯ ಹಾಗೂ ಆತಂಕವನ್ನೂ ಮೂಡಿಸಿದೆ. ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಶಿವಮೊಗ್ಗ: ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಬೆಂಜ್ ಕಾರು; ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರು

ಇದನ್ನೂ ಓದಿ: ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕುಡಿದು ಪುಂಡಾಟ, ಕಾರು ಅಪಘಾತ; ಬಂಧಿಸಿ ಜೈಲಿಗಟ್ಟಿದ ಪೊಲೀಸರು

Published On - 9:56 pm, Fri, 3 September 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ