AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದ ಶಿವಮೊಗ್ಗದ ಶಿಕ್ಷಕಿ ಎತ್ತಂಗಡಿ, ತನಿಖೆ ಆರಂಭ

ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರ ತರಗತಿಯಲ್ಲಿ ವಿದ್ಯಾರ್ಥಿಗಳು ಜಗಳವಾಡುತ್ತಿದ್ದನ್ನು ಕಂಡ ಶಿಕ್ಷಕಿ ಕೋಪಗೊಂಡು ನೀವು ಪಾಕಿಸ್ತಾನಕ್ಕೆ ಹೋಗಿ, ಇದು ಹಿಂದೂಗಳ ದೇಶ ಎಂದು ಹೇಳಿದ್ದರಂತೆ. ಸದ್ಯ ಶಿಕ್ಷಣ ಇಲಾಖೆ ಶಿಕ್ಷಕಿ ಮಂಜುಳಾ ದೇವಿಯನ್ನು ವರ್ಗಾವಣೆ ಮಾಡಿದೆ.

ಮುಸ್ಲಿಂ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದ ಶಿವಮೊಗ್ಗದ ಶಿಕ್ಷಕಿ ಎತ್ತಂಗಡಿ, ತನಿಖೆ ಆರಂಭ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Sep 03, 2023 | 3:24 PM

Share

ಶಿವಮೊಗ್ಗ: ಐದನೇ ತರಗತಿಯ ಇಬ್ಬರು ಮುಸ್ಲಿಂ (Muslim) ವಿದ್ಯಾರ್ಥಿಗಳಿಗೆ (Students) “ಪಾಕಿಸ್ತಾನಕ್ಕೆ ಹೋಗಿ” ಎಂದು ಹೇಳುವ ಮೂಲಕ ಶಿಕ್ಷಕಿಯೊಬ್ಬರು (Teacher) ಸಂಕಷ್ಟಕ್ಕೆ ಸಿಲುಕಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಶಿಕ್ಷಣ ಇಲಾಖೆ ಶಿಕ್ಷಕಿಯನ್ನು ವರ್ಗಾವಣೆ ಮಾಡಿದ್ದು, ತನಿಖೆ ನಡೆಯುತ್ತಿದೆ. ಗುರುವಾರ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಬ್ಬರು ಜಗಳವಾಡುತ್ತಿದ್ದರು. ಇದಕ್ಕೆ ಕೋಪಗೊಂಡ ಶಿಕ್ಷಕಿ ಮಂಜುಳಾ ದೇವಿ ನೀವು ಪಾಕಿಸ್ತಾನಕ್ಕೆ ಹೋಗಿ, ಇದು ಹಿಂದೂಗಳ ದೇಶ ಎಂದು ವಿದ್ಯಾರ್ಥಿಗಳಿಗೆ ಹೇಳಿದ್ದರಂತೆ.

ಈ ವಿಚಾರವನ್ನು ಮಕ್ಕಳು ಪೋಷಕರಿಗೆ ತಿಳಿಸಿದ್ದಾರೆ. ನಂತರ ಜಾತ್ಯತೀತ ಜನತಾದಳ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎ ನಜ್ರುಲ್ಲಾ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ (DDPI) ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಇಲಾಖೆಯು ಶಿಕ್ಷಕಿಯನ್ನು ವರ್ಗಾವಣೆ ಮಾಡಿದೆ  ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್​  (ಇಂಗ್ಲಿಷ್)​ ವರದಿ ಮಾಡಿದೆ.

ಇದನ್ನೂ ಓದಿ: ಭಾರತ-ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

ಇನ್ನು ಘಟನೆಯ ಬಗ್ಗೆ ತನಿಖೆ ನಡೆಸಲು ಬಿಇಒ ಬಿ.ನಾಗರಾಜ್ ಅವರು ಶಾಲೆಗೆ ತೆರಳಿದ ವೇಳೆ, ಈ ಘಟನೆಯ ಬಗ್ಗೆ ತರಗತಿಯ ಇತರ ವಿದ್ಯಾರ್ಥಿಗಳು ಕೂಡ ತಿಳಿಸಿದ್ದಾರೆ. “ಇದು ನಿಮ್ಮ ದೇಶವಲ್ಲ, ಇದು ಹಿಂದೂಗಳ ದೇಶ. ನೀವು ಪಾಕಿಸ್ತಾನಕ್ಕೆ ಹೋಗಬೇಕು. ನೀವು ಎಂದೆಂದಿಗೂ ನಮ್ಮ ಗುಲಾಮರು” ಅಂತ ಶಿಕ್ಷಕಿ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ ಎಂದು ನಾಗರಾಜ ಹೇಳಿದರು.

ಘಟನೆಯ ಕುರಿತು ವರದಿ ಸಲ್ಲಿಸಿದ್ದು, ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಇಒ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:17 pm, Sun, 3 September 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು