AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದ ಶಿವಮೊಗ್ಗದ ಶಿಕ್ಷಕಿ ಎತ್ತಂಗಡಿ, ತನಿಖೆ ಆರಂಭ

ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರ ತರಗತಿಯಲ್ಲಿ ವಿದ್ಯಾರ್ಥಿಗಳು ಜಗಳವಾಡುತ್ತಿದ್ದನ್ನು ಕಂಡ ಶಿಕ್ಷಕಿ ಕೋಪಗೊಂಡು ನೀವು ಪಾಕಿಸ್ತಾನಕ್ಕೆ ಹೋಗಿ, ಇದು ಹಿಂದೂಗಳ ದೇಶ ಎಂದು ಹೇಳಿದ್ದರಂತೆ. ಸದ್ಯ ಶಿಕ್ಷಣ ಇಲಾಖೆ ಶಿಕ್ಷಕಿ ಮಂಜುಳಾ ದೇವಿಯನ್ನು ವರ್ಗಾವಣೆ ಮಾಡಿದೆ.

ಮುಸ್ಲಿಂ ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದ ಶಿವಮೊಗ್ಗದ ಶಿಕ್ಷಕಿ ಎತ್ತಂಗಡಿ, ತನಿಖೆ ಆರಂಭ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Sep 03, 2023 | 3:24 PM

Share

ಶಿವಮೊಗ್ಗ: ಐದನೇ ತರಗತಿಯ ಇಬ್ಬರು ಮುಸ್ಲಿಂ (Muslim) ವಿದ್ಯಾರ್ಥಿಗಳಿಗೆ (Students) “ಪಾಕಿಸ್ತಾನಕ್ಕೆ ಹೋಗಿ” ಎಂದು ಹೇಳುವ ಮೂಲಕ ಶಿಕ್ಷಕಿಯೊಬ್ಬರು (Teacher) ಸಂಕಷ್ಟಕ್ಕೆ ಸಿಲುಕಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಶಿಕ್ಷಣ ಇಲಾಖೆ ಶಿಕ್ಷಕಿಯನ್ನು ವರ್ಗಾವಣೆ ಮಾಡಿದ್ದು, ತನಿಖೆ ನಡೆಯುತ್ತಿದೆ. ಗುರುವಾರ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಬ್ಬರು ಜಗಳವಾಡುತ್ತಿದ್ದರು. ಇದಕ್ಕೆ ಕೋಪಗೊಂಡ ಶಿಕ್ಷಕಿ ಮಂಜುಳಾ ದೇವಿ ನೀವು ಪಾಕಿಸ್ತಾನಕ್ಕೆ ಹೋಗಿ, ಇದು ಹಿಂದೂಗಳ ದೇಶ ಎಂದು ವಿದ್ಯಾರ್ಥಿಗಳಿಗೆ ಹೇಳಿದ್ದರಂತೆ.

ಈ ವಿಚಾರವನ್ನು ಮಕ್ಕಳು ಪೋಷಕರಿಗೆ ತಿಳಿಸಿದ್ದಾರೆ. ನಂತರ ಜಾತ್ಯತೀತ ಜನತಾದಳ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎ ನಜ್ರುಲ್ಲಾ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ (DDPI) ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಇಲಾಖೆಯು ಶಿಕ್ಷಕಿಯನ್ನು ವರ್ಗಾವಣೆ ಮಾಡಿದೆ  ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್​  (ಇಂಗ್ಲಿಷ್)​ ವರದಿ ಮಾಡಿದೆ.

ಇದನ್ನೂ ಓದಿ: ಭಾರತ-ಪಾಕಿಸ್ತಾನ ವಿಭಜನೆಯಾದಾಗ ನೀವೇಕೆ ಪಾಕಿಸ್ತಾನಕ್ಕೆ ಹೋಗಲಿಲ್ಲ ಎಂದು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

ಇನ್ನು ಘಟನೆಯ ಬಗ್ಗೆ ತನಿಖೆ ನಡೆಸಲು ಬಿಇಒ ಬಿ.ನಾಗರಾಜ್ ಅವರು ಶಾಲೆಗೆ ತೆರಳಿದ ವೇಳೆ, ಈ ಘಟನೆಯ ಬಗ್ಗೆ ತರಗತಿಯ ಇತರ ವಿದ್ಯಾರ್ಥಿಗಳು ಕೂಡ ತಿಳಿಸಿದ್ದಾರೆ. “ಇದು ನಿಮ್ಮ ದೇಶವಲ್ಲ, ಇದು ಹಿಂದೂಗಳ ದೇಶ. ನೀವು ಪಾಕಿಸ್ತಾನಕ್ಕೆ ಹೋಗಬೇಕು. ನೀವು ಎಂದೆಂದಿಗೂ ನಮ್ಮ ಗುಲಾಮರು” ಅಂತ ಶಿಕ್ಷಕಿ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ ಎಂದು ನಾಗರಾಜ ಹೇಳಿದರು.

ಘಟನೆಯ ಕುರಿತು ವರದಿ ಸಲ್ಲಿಸಿದ್ದು, ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಇಒ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:17 pm, Sun, 3 September 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ