AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಆಂಟಿಯ ಹಿಂದೆ ಬಿದ್ದಿದ್ದ ಆಟೋ ಡ್ರೈವರ್​ನ ಬರ್ಬರ ಹತ್ಯೆ; ಆರೋಪಿ ಅರೆಸ್ಟ್​

ಶಿವಮೊಗ್ಗ ನಗರದಲ್ಲಿ ಆಟೋ ಡ್ರೈವರ್​ನ ಬರ್ಬರ ಹತ್ಯೆಯಾಗಿತ್ತು. ಚಾಕುವಿನಿಂದ ಇರಿದು ಯುವಕನ ಹತ್ಯೆ ಮಾಡಿದ ಹಂತಕನು ಕೆಲವೇ ಗಂಟೆಯಲ್ಲಿ ಅಂದರ್ ಆಗಿದ್ದ. ಆಟೋ ಡ್ರೈವರ್ ನನ್ನು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದು ಯಾಕೇ, ಆತನಿಗೆ ಏನು ದ್ವೇಷ ಇತ್ತು ಅಂತೀರಾ? ಈ ಸ್ಟೋರಿ ನೋಡಿ.

Shivamogga News: ಆಂಟಿಯ ಹಿಂದೆ ಬಿದ್ದಿದ್ದ ಆಟೋ ಡ್ರೈವರ್​ನ ಬರ್ಬರ ಹತ್ಯೆ; ಆರೋಪಿ ಅರೆಸ್ಟ್​
ಶಿವಮೊಗ್ಗ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 17, 2023 | 2:51 PM

Share

ಶಿವಮೊಗ್ಗ: ನಗರದ ಇಲಿಯಾಸ್ ನಗರದ 100 ಅಡಿ ರಸ್ತೆಯಲ್ಲಿ ಜೂ.14ರ ರಾತ್ರಿ ಆಸೀಫ್ ಎನ್ನುವ 25 ವರ್ಷದ ಯುವಕನ ಕೊಲೆ(Murder) ಆಗಿತ್ತು. ಇದೀಗ ಕೊಲೆ ಮಾಡಿದ ಆರೋಪಿ ಜಬೀ ಎಂಬಾತ ಸಿಕ್ಕಿದ್ದಾನೆ. ಇನ್ನು ಮೃತ ಆಸೀಫ್​ ಶಿವಮೊಗ್ಗದ ಟಿಪ್ಪು ನಗರದ ವಾಸಿಯಾಗಿದ್ದು, ಆಟೋ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಆಟೋ ಡ್ರೈವರ್ ಕೆಲಸ ಬಿಟ್ಟು ಪೇಟಿಂಗ್ ಕೆಲಸಕ್ಕೆ ಮುಂದಾಗಿದ್ದನು. ಶಿವಮೊಗ್ಗ(Shivamogga)ನಗರದ ಇಲಿಯಾಜ್ ನಗರದ ವಾಸಿ ಆಗಿರುವ ಆರೋಪಿ ಜಬೀ, ತನ್ನ ಅಂಟಿ ಮಗುವನ್ನು ಮನೆಯಿಂದ ಶಾಲೆಗೆ ಪಿಕ್ ಮತ್ತು ಡ್ರಾಪ್​ಗೆಂದು ಆಸೀಫ್​ನನ್ನು ಆಟೋ ಡ್ರೈವರ್​ಗೆ ನೇಮಕ ಮಾಡಿದ್ದರು. ಮಗುವನ್ನು ಬೆಳಿಗ್ಗೆ ಶಾಲೆಗೆ ಹಾಗೂ ಸಂಜೆ ಮನೆಗೆ ಕರೆದುಕೊಂಡು ಹೋಗಿ ಬರುವುದು ಮಾಡುತ್ತಿದ್ದ. ಈ ವೇಳೆ ಆಸೀಫ್ ಕಣ್ಣು ಆ ಮನೆಯಲ್ಲಿರುವ ಮಹಿಳೆಯ ಮೇಲೆ ಬಿದ್ದಿತ್ತು. ಇದೇ ಇತನ ಸಾವಿಗೆ ಕಾರಣವಾಗಿದೆ.

ಹೌದು ಮಹಿಳೆಯ ನಂಬರ್ ಪಡೆದುಕೊಂಡ ಆಸೀಫ್ ಮೊಬೈಲ್ ಕಾಲ್ ಮತ್ತು ಚಾಟಿಂಗ್ ಶುರು ಮಾಡಿದ್ದನು. ಈ ಕುರಿತು ಕುಟುಂಬಸ್ಥರಿಗೆ ಮಹಿಳೆಯು ಮಾಹಿತಿ ಕೊಟ್ಟಿದ್ದಳು. ಇದರಿಂದ ಕೋಪಗೊಂಡ ಅಂಟಿ ಕುಟಂಬಸ್ಥರು ಆಸೀಫ್ ಗೆ, ನಮ್ಮ ತಂಟೆಗೆ ಬರದಂತೆ ಖಡಕ್ ವಾರ್ನಿಂಗ್ ಮಾಡಿದ್ದರು. ಆದ್ರೆ, ಆಸೀಫ್ ಮಾತ್ರ ತನ್ನ ಬುದ್ದಿ ಬದಲಿಸಲಿಲ್ಲ. ಮತ್ತೆ ಮಹಿಳೆಯ ಜೊತೆ ಕಾಲಿಂಗ್​, ಚಾಟಿಂಗ್ ಶುರು ಹಚ್ಚಿಕೊಂಡಿದ್ದನು. ಈ ವಿಚಾರ ಜಬೀ ಗಮನಕ್ಕೆ ಬಂದಿತ್ತು. ಈ ಹಿನ್ನಲೆಯಲ್ಲಿ ಜೂ.14 ರ ರಾತ್ರಿ ಜಬೀ ಅಂಟಿಗೆ ತೊಂದರೆಕೊಡುತ್ತಿದ್ದ ಅಟೋ ಡ್ರೈವರ್ ಆಸೀಫ್ ನನ್ನು ಜಬೀ ಮತ್ತು ಆತನ ಸಹಚರರು ಸೇರಿಕೊಂಡು ಚಾಕುವಿನಿಂದ ಇರಿದು ಮರ್ಡರ್ ಮಾಡಿ ಎಸ್ಕೇಪ್ ಆಗಿದ್ದರು.

ಇದನ್ನೂ ಓದಿ:ಉಜಿರೆ ಸೌಜನ್ಯ ಅತ್ಯಾಚಾರ, ಕೊಲೆ ಕೇಸ್: 2012 ಅ.9ರಿಂದ 2023 ಜೂ.16ರ ವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಟೈಮ್​ಲೈನ್

ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮರ್ಡರ್ ಕೇಸ್ ದಾಖಲಾಗಿತ್ತು. ಕೊಲೆಯಾದ ಅಸೀಫ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸುತ್ತಾರೆ. ಕೇವಲ ಒಂದು ಮಹಿಳೆಯ ವಿಚಾರಕ್ಕಾಗಿ ಜಬೀ ಒಂದು ಕೊಲೆಗೆ ಮುಂದಾಗಿದ್ದು ಮಾತ್ರ ನಗರದ ಎಲ್ಲರಿಗೂ ಆತಂಕ ಮೂಡಿಸಿದೆ. ಸದ್ಯ ದೊಡ್ಡಪೇಟೆ ಪೊಲೀಸರು ಪ್ರಮುಖ ಆರೋಪಿ ಜಬೀಯನ್ನು ಬಂಧಿಸಿದ್ದಾರೆ. ಈ ಘಟನೆಯಿಂದ ಮತ್ತೆ ಸಾರ್ವಜನಿಕ ವಲಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಇನ್ನು ಕೇವಲ 25 ವಯಸ್ಸಿನ ಮಗನನ್ನು ಕಳೆದುಕೊಂಡ ಮೃತನ ಕುಟುಂಬಸ್ಥರಿಗೆ ಈಗ ದಿಕ್ಕೆ ತೋಚದಂತಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್