AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಆಂಟಿಯ ಹಿಂದೆ ಬಿದ್ದಿದ್ದ ಆಟೋ ಡ್ರೈವರ್​ನ ಬರ್ಬರ ಹತ್ಯೆ; ಆರೋಪಿ ಅರೆಸ್ಟ್​

ಶಿವಮೊಗ್ಗ ನಗರದಲ್ಲಿ ಆಟೋ ಡ್ರೈವರ್​ನ ಬರ್ಬರ ಹತ್ಯೆಯಾಗಿತ್ತು. ಚಾಕುವಿನಿಂದ ಇರಿದು ಯುವಕನ ಹತ್ಯೆ ಮಾಡಿದ ಹಂತಕನು ಕೆಲವೇ ಗಂಟೆಯಲ್ಲಿ ಅಂದರ್ ಆಗಿದ್ದ. ಆಟೋ ಡ್ರೈವರ್ ನನ್ನು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದು ಯಾಕೇ, ಆತನಿಗೆ ಏನು ದ್ವೇಷ ಇತ್ತು ಅಂತೀರಾ? ಈ ಸ್ಟೋರಿ ನೋಡಿ.

Shivamogga News: ಆಂಟಿಯ ಹಿಂದೆ ಬಿದ್ದಿದ್ದ ಆಟೋ ಡ್ರೈವರ್​ನ ಬರ್ಬರ ಹತ್ಯೆ; ಆರೋಪಿ ಅರೆಸ್ಟ್​
ಶಿವಮೊಗ್ಗ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 17, 2023 | 2:51 PM

Share

ಶಿವಮೊಗ್ಗ: ನಗರದ ಇಲಿಯಾಸ್ ನಗರದ 100 ಅಡಿ ರಸ್ತೆಯಲ್ಲಿ ಜೂ.14ರ ರಾತ್ರಿ ಆಸೀಫ್ ಎನ್ನುವ 25 ವರ್ಷದ ಯುವಕನ ಕೊಲೆ(Murder) ಆಗಿತ್ತು. ಇದೀಗ ಕೊಲೆ ಮಾಡಿದ ಆರೋಪಿ ಜಬೀ ಎಂಬಾತ ಸಿಕ್ಕಿದ್ದಾನೆ. ಇನ್ನು ಮೃತ ಆಸೀಫ್​ ಶಿವಮೊಗ್ಗದ ಟಿಪ್ಪು ನಗರದ ವಾಸಿಯಾಗಿದ್ದು, ಆಟೋ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಆಟೋ ಡ್ರೈವರ್ ಕೆಲಸ ಬಿಟ್ಟು ಪೇಟಿಂಗ್ ಕೆಲಸಕ್ಕೆ ಮುಂದಾಗಿದ್ದನು. ಶಿವಮೊಗ್ಗ(Shivamogga)ನಗರದ ಇಲಿಯಾಜ್ ನಗರದ ವಾಸಿ ಆಗಿರುವ ಆರೋಪಿ ಜಬೀ, ತನ್ನ ಅಂಟಿ ಮಗುವನ್ನು ಮನೆಯಿಂದ ಶಾಲೆಗೆ ಪಿಕ್ ಮತ್ತು ಡ್ರಾಪ್​ಗೆಂದು ಆಸೀಫ್​ನನ್ನು ಆಟೋ ಡ್ರೈವರ್​ಗೆ ನೇಮಕ ಮಾಡಿದ್ದರು. ಮಗುವನ್ನು ಬೆಳಿಗ್ಗೆ ಶಾಲೆಗೆ ಹಾಗೂ ಸಂಜೆ ಮನೆಗೆ ಕರೆದುಕೊಂಡು ಹೋಗಿ ಬರುವುದು ಮಾಡುತ್ತಿದ್ದ. ಈ ವೇಳೆ ಆಸೀಫ್ ಕಣ್ಣು ಆ ಮನೆಯಲ್ಲಿರುವ ಮಹಿಳೆಯ ಮೇಲೆ ಬಿದ್ದಿತ್ತು. ಇದೇ ಇತನ ಸಾವಿಗೆ ಕಾರಣವಾಗಿದೆ.

ಹೌದು ಮಹಿಳೆಯ ನಂಬರ್ ಪಡೆದುಕೊಂಡ ಆಸೀಫ್ ಮೊಬೈಲ್ ಕಾಲ್ ಮತ್ತು ಚಾಟಿಂಗ್ ಶುರು ಮಾಡಿದ್ದನು. ಈ ಕುರಿತು ಕುಟುಂಬಸ್ಥರಿಗೆ ಮಹಿಳೆಯು ಮಾಹಿತಿ ಕೊಟ್ಟಿದ್ದಳು. ಇದರಿಂದ ಕೋಪಗೊಂಡ ಅಂಟಿ ಕುಟಂಬಸ್ಥರು ಆಸೀಫ್ ಗೆ, ನಮ್ಮ ತಂಟೆಗೆ ಬರದಂತೆ ಖಡಕ್ ವಾರ್ನಿಂಗ್ ಮಾಡಿದ್ದರು. ಆದ್ರೆ, ಆಸೀಫ್ ಮಾತ್ರ ತನ್ನ ಬುದ್ದಿ ಬದಲಿಸಲಿಲ್ಲ. ಮತ್ತೆ ಮಹಿಳೆಯ ಜೊತೆ ಕಾಲಿಂಗ್​, ಚಾಟಿಂಗ್ ಶುರು ಹಚ್ಚಿಕೊಂಡಿದ್ದನು. ಈ ವಿಚಾರ ಜಬೀ ಗಮನಕ್ಕೆ ಬಂದಿತ್ತು. ಈ ಹಿನ್ನಲೆಯಲ್ಲಿ ಜೂ.14 ರ ರಾತ್ರಿ ಜಬೀ ಅಂಟಿಗೆ ತೊಂದರೆಕೊಡುತ್ತಿದ್ದ ಅಟೋ ಡ್ರೈವರ್ ಆಸೀಫ್ ನನ್ನು ಜಬೀ ಮತ್ತು ಆತನ ಸಹಚರರು ಸೇರಿಕೊಂಡು ಚಾಕುವಿನಿಂದ ಇರಿದು ಮರ್ಡರ್ ಮಾಡಿ ಎಸ್ಕೇಪ್ ಆಗಿದ್ದರು.

ಇದನ್ನೂ ಓದಿ:ಉಜಿರೆ ಸೌಜನ್ಯ ಅತ್ಯಾಚಾರ, ಕೊಲೆ ಕೇಸ್: 2012 ಅ.9ರಿಂದ 2023 ಜೂ.16ರ ವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಟೈಮ್​ಲೈನ್

ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮರ್ಡರ್ ಕೇಸ್ ದಾಖಲಾಗಿತ್ತು. ಕೊಲೆಯಾದ ಅಸೀಫ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸುತ್ತಾರೆ. ಕೇವಲ ಒಂದು ಮಹಿಳೆಯ ವಿಚಾರಕ್ಕಾಗಿ ಜಬೀ ಒಂದು ಕೊಲೆಗೆ ಮುಂದಾಗಿದ್ದು ಮಾತ್ರ ನಗರದ ಎಲ್ಲರಿಗೂ ಆತಂಕ ಮೂಡಿಸಿದೆ. ಸದ್ಯ ದೊಡ್ಡಪೇಟೆ ಪೊಲೀಸರು ಪ್ರಮುಖ ಆರೋಪಿ ಜಬೀಯನ್ನು ಬಂಧಿಸಿದ್ದಾರೆ. ಈ ಘಟನೆಯಿಂದ ಮತ್ತೆ ಸಾರ್ವಜನಿಕ ವಲಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಇನ್ನು ಕೇವಲ 25 ವಯಸ್ಸಿನ ಮಗನನ್ನು ಕಳೆದುಕೊಂಡ ಮೃತನ ಕುಟುಂಬಸ್ಥರಿಗೆ ಈಗ ದಿಕ್ಕೆ ತೋಚದಂತಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ