AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಇಂಪ್ಯಾಕ್ಟ್: ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ; ಶಿಕ್ಷಕ ಅಮಾನತ್ತು

ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾ.ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನು ಅಮಾನತ್ತುಗೊಳಿಸಲಾಗಿದೆ.

ಟಿವಿ9 ಇಂಪ್ಯಾಕ್ಟ್: ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ; ಶಿಕ್ಷಕ ಅಮಾನತ್ತು
ಭದ್ರಾವತಿ ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 28, 2023 | 4:06 PM

ಶಿವಮೊಗ್ಗ, ಡಿ.28: ಜಿಲ್ಲೆಯ ಭದ್ರಾವತಿ(Bhadravathi) ತಾಲೂಕಿನ ಗುಡ್ಡದ ನೇರಳೆಕೆರೆ ಗ್ರಾಮದ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣದ ವರದಿಯನ್ನು ಟಿವಿ9 ಡಿಜಿಟಲ್​ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಇದೀಗ ಗುಡ್ಡದ ನೆರಲೆಗೇರಿ ಗ್ರಾಮದ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಎಂಬುವವರನ್ನು ಅಮಾನತ್ತು ಮಾಡಿ ಡಿಡಿಪಿಐ(DDPI) ಪರಮೇಶ್ವರಪ್ಪ ಆದೇಶಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು ‘ನಿನ್ನೆ(ಡಿ.27) ಮಧ್ಯಾಹ್ನ ನನ್ನ ಗಮನಕ್ಕೆ ಬಂದಿತ್ತು. ನಾನು ಬಿಇಓ ಅವರಿಗೆ ಸೂಚನೆ ನೀಡಿದ್ದೆ, ಅವರು ಭೇಟಿ ನೀಡಿ ಪರಿಶೀಲನೆ ಮಾಡಿ ವರದಿ ನೀಡಿದ್ದಾರೆ. ವಿಡಿಯೋದಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಮುಖ್ಯೋಪಾಧ್ಯಾಯ ಅಮಾನತ್ತು  ಮಾಡಿ, ಜಿಲ್ಲೆಯ ಎಲ್ಲ ಬಿಇಓ ಗಳಿಗೆ ಯಾವುದೇ ಕಾರಣಕ್ಕೂ ಮಕ್ಕಳಿಂದ ಶಾಲಾ ಮತ್ತು ಶೌಚಾಲಯ ಸ್ವಚ್ಛಗೊಳಿಸದಂತೆ ಸೂಚಿಸಿದ್ದೇನೆ ಎಂದರು.

ಇದನ್ನೂ ಓದಿ:ಬೆಂಗಳೂರು ಆಯ್ತು ಈಗ ಶಿವಮೊಗ್ಗ: ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್

ಘಟನೆ ವಿವರ

ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್​ ಮಾಡಿಸಿದ ಅಮಾನವೀಯ ಘಟನೆ ನಡೆದಿತ್ತು.ಈ ಪ್ರಕರಣ ಮಾಸುವ ಮುನ್ನವೇ ಇದೀಗ ಇದೇ ರೀತಿಯ ಮತ್ತೊಂದು ಘಟನೆ ಶಿಕ್ಷಣ ಸಚಿವರ  ತವರು ಜಿಲ್ಲೆಯಲ್ಲೇ ಮರುಕಳಿಸಿತ್ತು. ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾ.ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದರು.  ಈ ಬಗ್ಗೆ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಎಸಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿತ್ತು. ಮಕ್ಕಳನ್ನು ದುರ್ಬಳಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸಂಘಟನೆ ಮತ್ತು ಪೋಷಕರು ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?