AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಬೋಡಿಯಾದಲ್ಲಿ ಸಿಲುಕಿರುವ ತೀರ್ಥಹಳ್ಳಿಯ ಕಿರಣ್ ಶೆಟ್ಟಿ; ತವರಿಗೆ ಕರೆಸಿಕೊಳ್ಳಲು ಆರಗ ಜ್ಞಾನೇಂದ್ರ ಕ್ರಮ

ತೀರ್ಥಹಳ್ಳಿಯ ಸಾಫ್ಟ್​ವೇರ್ ಎಂಜಿನಿಯರ್ ಕಿರಣ್ ಶೆಟ್ಟಿ ಅವರು ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಕಾಂಬೋಡಿಯಾದಲ್ಲಿ ಬಂಧಿಯಾಗಿರವುದು ಬೆಳಕಿಗೆ ಬಂದಿದೆ. ಅವರನ್ನು ತವರಿಗೆ ಕರೆಸಿಕೊಳ್ಳುವುದಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.

ಕಾಂಬೋಡಿಯಾದಲ್ಲಿ ಸಿಲುಕಿರುವ ತೀರ್ಥಹಳ್ಳಿಯ ಕಿರಣ್ ಶೆಟ್ಟಿ; ತವರಿಗೆ ಕರೆಸಿಕೊಳ್ಳಲು ಆರಗ ಜ್ಞಾನೇಂದ್ರ ಕ್ರಮ
ಆರಗ ಜ್ಞಾನೇಂದ್ರ, ಗೃಹ ಸಚಿವರು
ಗಣಪತಿ ಶರ್ಮಾ
|

Updated on: Feb 18, 2023 | 11:21 AM

Share

ಬೆಂಗಳೂರು: ತೀರ್ಥಹಳ್ಳಿಯ (Thirthahalli) ಸಾಫ್ಟ್​ವೇರ್ ಎಂಜಿನಿಯರ್ ಕಿರಣ್ ಶೆಟ್ಟಿ ಅವರು ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಕಾಂಬೋಡಿಯಾದಲ್ಲಿ ಬಂಧಿಯಾಗಿರವುದು ಬೆಳಕಿಗೆ ಬಂದಿದೆ. ಅವರನ್ನು ತವರಿಗೆ ಕರೆಸಿಕೊಳ್ಳುವುದಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಕಿರಣ್ ಶಿಟ್ಟಿ ಅವರನ್ನು ಸುರಕ್ಷಿತವಾಗಿ ಕರೆದುಕೊಂಡು ಬರುವ ಬಗ್ಗೆ ಆರಗ ಅವರು ವಿದೇಶಾಂಗ ಸಚಿವಾಲಯ ಅಧಿಕಾರಿಗಳ ಜತೆ ಸತತ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಥಾಯ್ಲೆಂಡ್​​​ನಲ್ಲಿ ಹೆಚ್ಚಿನ ಸಂಬಳ ದೊರಕಿಸಿಕೊಡುವುದಾಗಿ ನೇಮಕಾತಿ ಏಜೆನ್ಸಿ ಆಮಿಷ ಒಡ್ಡಿತ್ತು. ಅದರಂತೆ ಕಿರಣ್ ಶೆಟ್ಟಿ ತೆರಳಿದ್ದರು. ಸದ್ಯ ಅವರು ಕಾಂಬೋಡಿಯಾದಲ್ಲಿ ಖಾಸಗಿ ಸಂಸ್ಥೆಯೊಂದರ ವಶದಲ್ಲಿದ್ದಾರೆ.

ಕೇಂದ್ರ ಸಚಿವರ ಜತೆಗೂ ಜ್ಞಾನೇಂದ್ರ ಮಾತುಕತೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹಾಗೂ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ. ಮುರಳೀಧರನ್ ಅವರ ಕಚೇರಿ ಜತೆ ಸಂಪರ್ಕಿಸಿ ಬಿಡುಗಡೆ ಕುರಿತು ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಜತೆಗೆ, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೂ ಇಂಜಿನಿಯರ್ ಸುರಕ್ಷಿತ ವಾಪಸಾತಿ ಬಗ್ಗೆ ಚರ್ಚಿಸಿದ್ದಾರೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊದಲ ವಿಮಾನ ಪ್ರಧಾನಿ ಮೋದಿಯವರದ್ದು; ಸಂಸದ ಬಿ ವೈ ರಾಘವೇಂದ್ರ

ಕಿರಣ್ ಶೆಟ್ಟಿ ಅವರನ್ನು ಕರೆಸಿಕೊಳ್ಳಬೇಕೆಂದು ಅವರ ಸಹೋದರ ಪವನ್ ಶೆಟ್ಟಿ ಗೃಹ ಸಚಿವರಿಗೆ ಮನವಿ ಮಾಡಿದ್ದರು. ಕಿರಣ್ ಶೆಟ್ಟಿ ವಾಪಸಾತಿಗಾಗಿ ಅವರ ಪತ್ನಿ ನಾಲ್ಕು ತಿಂಗಳ ಮಗು ಹಾಗೂ ಕುಟುಂಬದವರ ಜತೆ ತೀರ್ಥಹಳ್ಳಿಯಲ್ಲಿ ಕಾಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
W,W,W,W,W: 254 ವರ್ಷಗಳ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ
W,W,W,W,W: 254 ವರ್ಷಗಳ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ
ದೆಹಲಿಯ ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ
ದೆಹಲಿಯ ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಜೂ ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್
ಬೆಂಗಳೂರಿನಲ್ಲಿ ಜೂ ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್
ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಸಿಂಹ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ನೋಡಿ!
ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ನೋಡಿ!
ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್
ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು
ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು
ಬೇಸಿಗೆಯಲ್ಲೂ ಕಾಶ್ಮೀರದಂತೆ ಕಂಡ ಕೊಪ್ಪಳ: ಎಲ್ಲೆಡೆ ಮಂಜೋ ಮಂಜು
ಬೇಸಿಗೆಯಲ್ಲೂ ಕಾಶ್ಮೀರದಂತೆ ಕಂಡ ಕೊಪ್ಪಳ: ಎಲ್ಲೆಡೆ ಮಂಜೋ ಮಂಜು
ಕೊನೆಗೂ ಹಿಮೋಫಿಲಿಯಾ ಫೀಡಿತರಿಗೆ ಅಂಗವಿಕಲತೆಯಿಂದ ಮುಕ್ತಿ!
ಕೊನೆಗೂ ಹಿಮೋಫಿಲಿಯಾ ಫೀಡಿತರಿಗೆ ಅಂಗವಿಕಲತೆಯಿಂದ ಮುಕ್ತಿ!