AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಬೋಡಿಯಾದಲ್ಲಿ ಸಿಲುಕಿರುವ ತೀರ್ಥಹಳ್ಳಿಯ ಕಿರಣ್ ಶೆಟ್ಟಿ; ತವರಿಗೆ ಕರೆಸಿಕೊಳ್ಳಲು ಆರಗ ಜ್ಞಾನೇಂದ್ರ ಕ್ರಮ

ತೀರ್ಥಹಳ್ಳಿಯ ಸಾಫ್ಟ್​ವೇರ್ ಎಂಜಿನಿಯರ್ ಕಿರಣ್ ಶೆಟ್ಟಿ ಅವರು ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಕಾಂಬೋಡಿಯಾದಲ್ಲಿ ಬಂಧಿಯಾಗಿರವುದು ಬೆಳಕಿಗೆ ಬಂದಿದೆ. ಅವರನ್ನು ತವರಿಗೆ ಕರೆಸಿಕೊಳ್ಳುವುದಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.

ಕಾಂಬೋಡಿಯಾದಲ್ಲಿ ಸಿಲುಕಿರುವ ತೀರ್ಥಹಳ್ಳಿಯ ಕಿರಣ್ ಶೆಟ್ಟಿ; ತವರಿಗೆ ಕರೆಸಿಕೊಳ್ಳಲು ಆರಗ ಜ್ಞಾನೇಂದ್ರ ಕ್ರಮ
ಆರಗ ಜ್ಞಾನೇಂದ್ರ, ಗೃಹ ಸಚಿವರು
ಗಣಪತಿ ಶರ್ಮಾ
|

Updated on: Feb 18, 2023 | 11:21 AM

Share

ಬೆಂಗಳೂರು: ತೀರ್ಥಹಳ್ಳಿಯ (Thirthahalli) ಸಾಫ್ಟ್​ವೇರ್ ಎಂಜಿನಿಯರ್ ಕಿರಣ್ ಶೆಟ್ಟಿ ಅವರು ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಕಾಂಬೋಡಿಯಾದಲ್ಲಿ ಬಂಧಿಯಾಗಿರವುದು ಬೆಳಕಿಗೆ ಬಂದಿದೆ. ಅವರನ್ನು ತವರಿಗೆ ಕರೆಸಿಕೊಳ್ಳುವುದಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಕಿರಣ್ ಶಿಟ್ಟಿ ಅವರನ್ನು ಸುರಕ್ಷಿತವಾಗಿ ಕರೆದುಕೊಂಡು ಬರುವ ಬಗ್ಗೆ ಆರಗ ಅವರು ವಿದೇಶಾಂಗ ಸಚಿವಾಲಯ ಅಧಿಕಾರಿಗಳ ಜತೆ ಸತತ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಥಾಯ್ಲೆಂಡ್​​​ನಲ್ಲಿ ಹೆಚ್ಚಿನ ಸಂಬಳ ದೊರಕಿಸಿಕೊಡುವುದಾಗಿ ನೇಮಕಾತಿ ಏಜೆನ್ಸಿ ಆಮಿಷ ಒಡ್ಡಿತ್ತು. ಅದರಂತೆ ಕಿರಣ್ ಶೆಟ್ಟಿ ತೆರಳಿದ್ದರು. ಸದ್ಯ ಅವರು ಕಾಂಬೋಡಿಯಾದಲ್ಲಿ ಖಾಸಗಿ ಸಂಸ್ಥೆಯೊಂದರ ವಶದಲ್ಲಿದ್ದಾರೆ.

ಕೇಂದ್ರ ಸಚಿವರ ಜತೆಗೂ ಜ್ಞಾನೇಂದ್ರ ಮಾತುಕತೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹಾಗೂ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ. ಮುರಳೀಧರನ್ ಅವರ ಕಚೇರಿ ಜತೆ ಸಂಪರ್ಕಿಸಿ ಬಿಡುಗಡೆ ಕುರಿತು ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಜತೆಗೆ, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೂ ಇಂಜಿನಿಯರ್ ಸುರಕ್ಷಿತ ವಾಪಸಾತಿ ಬಗ್ಗೆ ಚರ್ಚಿಸಿದ್ದಾರೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊದಲ ವಿಮಾನ ಪ್ರಧಾನಿ ಮೋದಿಯವರದ್ದು; ಸಂಸದ ಬಿ ವೈ ರಾಘವೇಂದ್ರ

ಕಿರಣ್ ಶೆಟ್ಟಿ ಅವರನ್ನು ಕರೆಸಿಕೊಳ್ಳಬೇಕೆಂದು ಅವರ ಸಹೋದರ ಪವನ್ ಶೆಟ್ಟಿ ಗೃಹ ಸಚಿವರಿಗೆ ಮನವಿ ಮಾಡಿದ್ದರು. ಕಿರಣ್ ಶೆಟ್ಟಿ ವಾಪಸಾತಿಗಾಗಿ ಅವರ ಪತ್ನಿ ನಾಲ್ಕು ತಿಂಗಳ ಮಗು ಹಾಗೂ ಕುಟುಂಬದವರ ಜತೆ ತೀರ್ಥಹಳ್ಳಿಯಲ್ಲಿ ಕಾಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು