AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಬೋಡಿಯಾದಲ್ಲಿ ಸಿಲುಕಿರುವ ತೀರ್ಥಹಳ್ಳಿಯ ಕಿರಣ್ ಶೆಟ್ಟಿ; ತವರಿಗೆ ಕರೆಸಿಕೊಳ್ಳಲು ಆರಗ ಜ್ಞಾನೇಂದ್ರ ಕ್ರಮ

ತೀರ್ಥಹಳ್ಳಿಯ ಸಾಫ್ಟ್​ವೇರ್ ಎಂಜಿನಿಯರ್ ಕಿರಣ್ ಶೆಟ್ಟಿ ಅವರು ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಕಾಂಬೋಡಿಯಾದಲ್ಲಿ ಬಂಧಿಯಾಗಿರವುದು ಬೆಳಕಿಗೆ ಬಂದಿದೆ. ಅವರನ್ನು ತವರಿಗೆ ಕರೆಸಿಕೊಳ್ಳುವುದಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.

ಕಾಂಬೋಡಿಯಾದಲ್ಲಿ ಸಿಲುಕಿರುವ ತೀರ್ಥಹಳ್ಳಿಯ ಕಿರಣ್ ಶೆಟ್ಟಿ; ತವರಿಗೆ ಕರೆಸಿಕೊಳ್ಳಲು ಆರಗ ಜ್ಞಾನೇಂದ್ರ ಕ್ರಮ
ಆರಗ ಜ್ಞಾನೇಂದ್ರ, ಗೃಹ ಸಚಿವರು
Ganapathi Sharma
|

Updated on: Feb 18, 2023 | 11:21 AM

Share

ಬೆಂಗಳೂರು: ತೀರ್ಥಹಳ್ಳಿಯ (Thirthahalli) ಸಾಫ್ಟ್​ವೇರ್ ಎಂಜಿನಿಯರ್ ಕಿರಣ್ ಶೆಟ್ಟಿ ಅವರು ಅಕ್ರಮ ನೇಮಕಾತಿ ಜಾಲಕ್ಕೆ ಸಿಲುಕಿ ಕಾಂಬೋಡಿಯಾದಲ್ಲಿ ಬಂಧಿಯಾಗಿರವುದು ಬೆಳಕಿಗೆ ಬಂದಿದೆ. ಅವರನ್ನು ತವರಿಗೆ ಕರೆಸಿಕೊಳ್ಳುವುದಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಕಿರಣ್ ಶಿಟ್ಟಿ ಅವರನ್ನು ಸುರಕ್ಷಿತವಾಗಿ ಕರೆದುಕೊಂಡು ಬರುವ ಬಗ್ಗೆ ಆರಗ ಅವರು ವಿದೇಶಾಂಗ ಸಚಿವಾಲಯ ಅಧಿಕಾರಿಗಳ ಜತೆ ಸತತ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಥಾಯ್ಲೆಂಡ್​​​ನಲ್ಲಿ ಹೆಚ್ಚಿನ ಸಂಬಳ ದೊರಕಿಸಿಕೊಡುವುದಾಗಿ ನೇಮಕಾತಿ ಏಜೆನ್ಸಿ ಆಮಿಷ ಒಡ್ಡಿತ್ತು. ಅದರಂತೆ ಕಿರಣ್ ಶೆಟ್ಟಿ ತೆರಳಿದ್ದರು. ಸದ್ಯ ಅವರು ಕಾಂಬೋಡಿಯಾದಲ್ಲಿ ಖಾಸಗಿ ಸಂಸ್ಥೆಯೊಂದರ ವಶದಲ್ಲಿದ್ದಾರೆ.

ಕೇಂದ್ರ ಸಚಿವರ ಜತೆಗೂ ಜ್ಞಾನೇಂದ್ರ ಮಾತುಕತೆ ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹಾಗೂ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ. ಮುರಳೀಧರನ್ ಅವರ ಕಚೇರಿ ಜತೆ ಸಂಪರ್ಕಿಸಿ ಬಿಡುಗಡೆ ಕುರಿತು ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಜತೆಗೆ, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೂ ಇಂಜಿನಿಯರ್ ಸುರಕ್ಷಿತ ವಾಪಸಾತಿ ಬಗ್ಗೆ ಚರ್ಚಿಸಿದ್ದಾರೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊದಲ ವಿಮಾನ ಪ್ರಧಾನಿ ಮೋದಿಯವರದ್ದು; ಸಂಸದ ಬಿ ವೈ ರಾಘವೇಂದ್ರ

ಕಿರಣ್ ಶೆಟ್ಟಿ ಅವರನ್ನು ಕರೆಸಿಕೊಳ್ಳಬೇಕೆಂದು ಅವರ ಸಹೋದರ ಪವನ್ ಶೆಟ್ಟಿ ಗೃಹ ಸಚಿವರಿಗೆ ಮನವಿ ಮಾಡಿದ್ದರು. ಕಿರಣ್ ಶೆಟ್ಟಿ ವಾಪಸಾತಿಗಾಗಿ ಅವರ ಪತ್ನಿ ನಾಲ್ಕು ತಿಂಗಳ ಮಗು ಹಾಗೂ ಕುಟುಂಬದವರ ಜತೆ ತೀರ್ಥಹಳ್ಳಿಯಲ್ಲಿ ಕಾಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ