AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೇ ಗಮನಿಸಿ: ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ

ಹುಲಿಕಲ್ ಘಾಟ್‌ನಲ್ಲಿ ಮತ್ತೆ ಭೂಕುಸಿತ ಉಂಟಾದ ಕಾರಣ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಸ್ತೆಯ ಸುರಕ್ಷತಾ ಕಾಮಗಾರಿ ಮುಗಿಯುವವರೆಗೆ ಈ ನಿರ್ಬಂಧ ಅನ್ವಯವಾಗಲಿದೆ. ಎಲ್ಲಾ ವಾಹನಗಳಿಗೂ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಇತ್ತೀಚೆಗೆ ಇದೇ ಮಾರ್ಗದಲ್ಲಿ ನಡೆದ ಭೂಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಪ್ರಯಾಣಿಕರೇ ಗಮನಿಸಿ: ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ
ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​
Basavaraj Yaraganavi
| Edited By: |

Updated on: Apr 12, 2026 | 11:14 AM

Share

ಶಿವಮೊಗ್ಗ, ಏಪ್ರಿಲ್​​ 12: ಹುಲಿಕಲ್ ಘಾಟಿಯಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಉಂಟಾದ ಹಿನ್ನೆಲೆ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅಲ್ಲಲ್ಲಿ ಬಿರುಕುಗಳು ಕಂಡು ಬಂದ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್​​ನ ಹೇರ್‌ಪಿನ್ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿಯೂ ಪೂರ್ಣಗೊಳ್ಳುವವರೆಗೆ ಈ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೂ ಇದು ಅನ್ವಯವಾಗಲಿದೆ. ಪರ್ಯಾಯ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ಸಂಚರಿಸಲು ಸೂಚಿಸಲಾಗಿದೆ.

ಪರ್ಯಾಯ ಮಾರ್ಗಗಳು

  • ತೀರ್ಥಹಳ್ಳಿ ಕಡೆಯಿಂದ ಕುಂದಾಪುರ ಕಡೆಗೆ ತೆರಳುವ ವಾಹನಗಳು, ತೀರ್ಥಹಳ್ಳಿ-ರಾವೆ-ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ತೆರಳಬೇಕು.
  • ತೀರ್ಥಹಳ್ಳಿಯಿಂದ ಯಡೂರು, ಹುಲಿಕಲ್​​ ಮಾರ್ಗವಾಗಿ ತೆರಳುವವರು ತೀರ್ಥಹಳ್ಳಿ-ಯಡೂರು, ಮಾಸ್ತಿಕಟ್ಟೆ- ಕಾನುಗೋಡು-ನಗರ-ಕೊಲ್ಲೂರು ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು.
  • ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರ ಮೂಲಕ ತೆರಳುವವರು ಶಿವಮೊಗ್ಗ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳಿ ಭಟ್ಕಳ-ಬೈಂದೂರು ಮಾರ್ಗವಾಗಿ ಕುಂದಾಪುರಕ್ಕೆ ತೆರಳಬೇಕು.

ಇದನ್ನೂ ಓದಿ: ಗಂಡನ ಮನೆಯವರ ಕಿರುಕುಳಕ್ಕೆ ಜೀವಬಿಟ್ಟ 4 ತಿಂಗಳ ಗರ್ಭಿಣಿ: ಪತಿ ಮನೆಯವರಿಂದಲೇ ಕೊಲೆಯೆಂದು ಪೋಷಕರ ಆರೋಪ

ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿದು ಮೃತಪಟ್ಟಿದ್ದ ಮೂವರು

ಹುಲಿಕಲ್ ಘಾಟ್​ನಲ್ಲಿ ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಮೃತಪಟ್ಟಿರುವ ಘಟನೆ ಮೊನ್ನೆ ಮೊನ್ನೆಯಷ್ಟೇ ನಡೆದಿತ್ತು. ಅವಘಡದಲ್ಲಿ ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತಪಟ್ಟಿದ್ದರು. ಸುಮಂತ ಮತ್ತು ಪರಮೇಶ್​ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ರಸ್ತೆಯ ಕೆಲವೆಡೆ ಅಪಾಯದ ಮುನ್ಸೂಚನೆ ಸಿಕ್ಕ ಹಿನ್ನೆಲೆ ಜಿಲ್ಲಅಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us