Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀರ್ಥಹಳ್ಳಿ: ಸ್ಥಳೀಯರ ವಿರೋಧದ ನಡುವೆಯೂ ಕಲ್ಲು ಗಣಿಗಾರಿಗೆ; ಗುಡ್ಡ ಕುಸಿತ, ಅನಾಹುತದ ಮುನ್ಸೂಚನೆ

ಕಳೆದ ಕೆಲ ದಿನಗಳಿಂದ ತೀರ್ಥಹಳ್ಳಿ ತಾಲ್ಲೂಕಿನಾದ್ಯಂದ ಭಾರೀ ಮಳೆ ಸುರಿದಿದ್ದು ಪರಿಣಾಮ ತೀರ್ಥಹಳ್ಳಿ ತಾಲ್ಲೂಕಿನ ಕಸಬಾ ಹೋಬಳಿಯ ಅಂಬಳಿಕೆ ಗ್ರಾಮದ ಗುರುಮೂರ್ತಿ ಎನ್ನುವವರಿಗೆ ಸೇರಿದ ಎರಡು ಎಕರೆ ಅಡಿಕೆ ತೋಟ ಸಂಪೂರ್ಣ ನಾಶವಾಗಿದೆ.

ತೀರ್ಥಹಳ್ಳಿ: ಸ್ಥಳೀಯರ ವಿರೋಧದ ನಡುವೆಯೂ ಕಲ್ಲು ಗಣಿಗಾರಿಗೆ; ಗುಡ್ಡ ಕುಸಿತ, ಅನಾಹುತದ ಮುನ್ಸೂಚನೆ
ಕುಸಿತದ ಚಿತ್ರಣ
Follow us
TV9 Web
| Updated By: guruganesh bhat

Updated on:Jul 29, 2021 | 10:11 PM

ತೀರ್ಥಹಳ್ಳಿ: ಒಂದೆಡೆ ವಿಪರೀತ ಮಳೆ. ಮತ್ತೊಂದೆಡೆ ಎಗ್ಗಿಲ್ಲದೆ ನಡೆಯುತ್ತಿರುವ ಕಲ್ಲು ಗಣಿಗಾರಿಕೆ. ಕಲ್ಲು ಗಣಿಗಾರಿಕೆ ಕಾರಣದಿಂದ ಗುಡ್ಡಗಳು ಸಡಿಲಗೊಂಡು ಮಳೆಗಾಲದ ಸಂದರ್ಭದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಅಂಬಳಿಕೆ ಗ್ರಾಮ ಭಾರೀ ಅನಾಹುತಗಳಿಗೆ ತುತ್ತಾಗುತ್ತಿದೆ.

ಗ್ರಾಮದ ಗುಡ್ಡಗಳಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಕಲ್ಲು ಗಣಿಗಾರಿಕೆ ನಡೆಯುತ್ತಿದೆ‌. ಪದೇ ಪದೇ ನಡೆಸಲಾಗುವ ಬ್ಲಾಸ್ಟಿಂಗ್ ಪರಿಣಾಮ ಗುಡ್ಡವು ಸಡಿಲಗೊಂಡಿದ್ದು, ಮುಂಬರುವ ದಿನಗಳಲ್ಲಿ ಭಾರೀ ಅನಾಹುತದ ಸೂಚನೆಗಳು ಸಿಗುತ್ತಿವೆ. ಕಳೆದ ಕೆಲ ದಿನಗಳಿಂದ ತೀರ್ಥಹಳ್ಳಿ ತಾಲ್ಲೂಕಿನಾದ್ಯಂದ ಭಾರೀ ಮಳೆ ಸುರಿದಿದ್ದು ಪರಿಣಾಮ ತೀರ್ಥಹಳ್ಳಿ ತಾಲ್ಲೂಕಿನ ಕಸಬಾ ಹೋಬಳಿಯ ಅಂಬಳಿಕೆ ಗ್ರಾಮದ ಗುರುಮೂರ್ತಿ ಎನ್ನುವವರಿಗೆ ಸೇರಿದ ಎರಡು ಎಕರೆ ಅಡಿಕೆ ತೋಟ ಸಂಪೂರ್ಣ ನಾಶವಾಗಿದೆ. ಅಲ್ಲದೆ ಹಳ್ಳ ತೊರೆಗಳು ಗುಡ್ಡ ಕುಸಿತದಿಂದಾಗಿ ತೋಟಗಳ ಮೇಲೆ ಹರಿದಿದ್ದು ಸುಮಾರು ಇಪ್ಪತೈದು ಎಕರೆಗೂ ಹೆಚ್ಚಿನ ಕೃಷಿ ಜಮೀನಿನಲ್ಲಿ ಹತ್ತಾರು ಅಡಿ ನೀರು ನಿಂತು ಬೆಳೆ ನಾಶವಾಗಿದೆ.

Thirthahalli Rain

ಮಳೆ ನೀರು ನಿಂತು ಅಡಿಕೆ ಬೆಳೆ ನಾಶ

ಘಟನೆ ತಿಳಿದ ನಂತರ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ತೀರ್ಥಹಳ್ಳಿಯ ತಹಸೀಲ್ದಾರ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಎರಡು ತಿಂಗಳುಗಳಿಂದ ಗಣಿಗಾರಿಗೆ ನಿಲ್ಲಿಸಿದ್ದೇವೆ ಎಂದು ಅಧಿಕಾರಿಗಳು ತೇಪೆಹಚ್ಚುವ ಕೆಲಸ ಮಾಡುತ್ತಿದ್ದು ತೆರೆಮರೆಯಲ್ಲಿ ಕಣ್ಣು ತಪ್ಪಿಸಿ ಬ್ಲಾಸ್ಟಿಂಗ್ ಮುಂದುವರೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜಿಲ್ಲಾಧಿಕಾರಿ ಭೇಟಿಯ ಬಳಿಕವಾದರೂ ಶಾಶ್ವತ ಪರಿಹಾರ ಜತೆಗೆ ಗುಡ್ಡ ಕುಸಿತದ ಆತಂಕದಿಂದ ಮುಕ್ತಿ ಸಿಗಬಹುದೇ ಎಂಬ ನಿರೀಕ್ಷೆಯಲ್ಲಿ ಸ್ಥಳೀಯರಿದ್ದಾರೆ.

ವರದಿ: ಮಾಲ್ತೇಶ್ ಜನಗಲ್, ಆಂಕರ್ ಟಿವಿ9 ಕನ್ನಡ

ಇದನ್ನೂ ಓದಿ: 

Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

Uttara Kannada Flood: ಚಿತ್ರನೋಟ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟ ಭೂಕುಸಿತಕ್ಕೊಳಗಾದ ಕಳಚೆ ಗ್ರಾಮ ಹೇಗಿದೆ?

Published On - 10:09 pm, Thu, 29 July 21

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ