AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್

ಅಶ್ಲೀಲ ವಿಡಿಯೋ ವೈರಲ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ತೀರ್ಥಹಳ್ಳಿಯ ವಿದ್ಯಾರ್ಥಿ ಸಂಘಟನೆಯ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್
ಬಂಧಿತ ಆರೋಪಿ
ರಮೇಶ್ ಬಿ. ಜವಳಗೇರಾ
|

Updated on: Jun 18, 2023 | 12:00 PM

Share

ಮುಖ್ಯಾಂಶಗಳು

  • ಸಾಮಾಜಿಕ‌ ಜಾಲ ತಾಣದಲ್ಲಿ ಅಶ್ಲೀಲ ವಿಡಿಯೋ ಹರಿದಾಡಿದ ವಿಚಾರ
  • ವಿಡಿಯೋದಲ್ಲಿ ಪ್ರತಿಷ್ಠಿತ ಕಾಲೇಜೊಂದರ ಯುವಕ - ಯುವತಿಯ ಕಾಮದಾಟ
  • ಅಶ್ಲೀಲ ‌ವಿಡಿಯೋದಲ್ಲಿದ್ದ ವಿದ್ಯಾರ್ಥಿ ನಾಯಕನ ಬಂಧನ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಪ್ರತಿಷ್ಠಿತ ಕಾಲೇಜೊಂದರ ಯುವಕ-ಯುವತಿಯ ಕಾಮದಾಟ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ‌ವಿಡಿಯೋದಲ್ಲಿದ್ದ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ (ಎಬಿವಿಪಿ) ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿವೆ.

ಆರೋಪಿ ಬಂಧನದ ಬಳಿಕ ವಿಡಿಯೋ ವೈರಲ್‌ ಬಗ್ಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದೆ. ಅಶ್ಲೀಲ ಫೋಟೊ, ವಿಡಿಯೋಗಳನ್ನು ವಾಟ್ಸಪ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುತ್ತಿರುವುದು ಗೊತ್ತಾಗಿದೆ. ಈ ರೀತಿ ಷೇರ್‌ ಮಾಡುವುದು ಮತ್ತು ಸ್ಟೋರ್‌ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ 67 (E) ಅಡಿ ಶಿಕ್ಷಾರ್ಹ ಅಪರಾಧ. ಆರೋಪ ಸಾಬೀತಾದರೆ 5 ವರ್ಷದವರೆಗೆ ಜೈಲು ಮತ್ತು ದಂಡ ವಿಧಿಸಲಾಗುತ್ತದೆ. ಈ ಕುರಿತು ಗ್ರೂಪ್‌ ಅಡ್ಮಿನ್‌ಗಳು ಕೂಡ ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.

ಇನ್ನು ಈ ಬಗ್ಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಅವನು ಯಾವ ಸಂಘಟನೆ ಮುಖಂಡನೋ, ಅವನೊಬ್ಬ ಕೊಳಕು ಮನುಷ್ಯ. ನಾನು ಈ ಬಗ್ಗೆ ಪೊಲೀಸ್ ಅಧಿಕಾರಿ ಜೊತೆ ಮಾತನಾಡ್ತೇನೆ.ಅವನ ಬಗ್ಗೆ ಏನು ಬೇಕಾದರೂ ಕ್ರಮ ಕೈಗೊಳ್ಳಲಿ. ಗಾಂಜಾ, ಅಫೀಮು ಆರಂಭವಾಗಿದೆ. ಇದನ್ನು ಮಟ್ಟ ಹಾಕಲು ಪೋಷಕರು ಗಮನ ಹರಿಸಬೇಕು. 3-4 ದಿನದಲ್ಲಿ ಶಾಲಾ ಕಾಲೇಜು ಮುಖ್ಯಸ್ಥರು ಪೊಲೀಸರ ಸಭೆ ಕರೆದು ಚರ್ಚೆ ಮಾಡ್ತೇನೆ. ಕೇವಲ ತೀರ್ಥಹಳ್ಳಿ ಅಲ್ಲ, ರಾಜ್ಯದ ಎಲ್ಲಾ ಕಡೆ ಇದು ಇದೆ ಎಂದರು.

ಯುತಿಯರೊಂದಿಗೆ ನಗ್ನವಾಗಿ ವಿಡಿಯೋ ಕಾಲ್ ಮಾಡಿ ರೆಕಾರ್ಡಿಂಗ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಂಡಿರುವ ಬಗ್ಗೆ ಯುವಕನ ವಿರುದ್ಧ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ವಿದ್ಯಾರ್ಥಿ ಮುಖಂಡ ಹಾಗೂ ಬಿಜೆಪಿ ಕಾರ್ಯಕರ್ತನ (BJP Activist) ಕರ್ಮಕಾಂಡ ಬಯಲಾಗಿದೆ ಎಂದು ಕಾಂಗ್ರೆಸ್ (Congress) ಟ್ವೀಟ್ ಮಾಡಿದೆ.

ಇನ್ನು, ಎಬಿವಿಪಿ ನಾಯಕನ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಬೇಕು ಎಂದು ಎನ್‌ಎಸ್‌ಯುಐ ಸಂಘಟನೆ ಕಾರ್ಯಕರ್ತರು ತೀರ್ಥಹಳ್ಳಿ ಡಿವೈಎಸ್‌ಪಿಗೆ ದೂರು ನೀಡಿದ್ದರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ