AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್‌ಗೂ ಈ ಕೊಲೆಗೂ ಲಿಂಕ್ ಇಲ್ಲ ಅನಿಸುತ್ತಿದೆ, ಆರೋಪಿಗಳು ಯಾರು ಅಂತಾ ಗೊತ್ತಾಗಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಹಿಜಾಬ್‌ಗೂ ಈ ಕೊಲೆಗೂ ಲಿಂಕ್ ಇದೆ ಎಂದು ಅನಿಸುತ್ತಿಲ್ಲ. ಆ ಬಗ್ಗೆಯೂ ನಮ್ಮ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿ 9 ರಿಂದ 9.15ರ ಸುಮಾರಿಗೆ ಬಜರಂಗದಳ ಕಾರ್ಯಕರ್ತನ ಕೊಲೆಯಾಗಿದೆ. ಮೃತನ ಕುಟುಂಬಸ್ಥರ ಜತೆ ಮಾತಾಡಿ ಸಾಂತ್ವನ ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಹಿಜಾಬ್‌ಗೂ ಈ ಕೊಲೆಗೂ ಲಿಂಕ್ ಇಲ್ಲ ಅನಿಸುತ್ತಿದೆ,  ಆರೋಪಿಗಳು ಯಾರು ಅಂತಾ ಗೊತ್ತಾಗಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಅರಗ ಜ್ಞಾನೇಂದ್ರ
TV9 Web
| Edited By: |

Updated on:Feb 21, 2022 | 10:44 AM

Share

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga jnanendra) ಪ್ರತಿಕ್ರಿಯೆ ನೀಡಿದ್ದು, ಹಿಜಾಬ್‌ಗೂ ಈ ಕೊಲೆಗೂ(Murder) ಲಿಂಕ್ ಇದೆ ಎಂದು ಅನಿಸುತ್ತಿಲ್ಲ. ಆ ಬಗ್ಗೆಯೂ ನಮ್ಮ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿ 9 ರಿಂದ 9.15ರ ಸುಮಾರಿಗೆ ಬಜರಂಗದಳ ಕಾರ್ಯಕರ್ತನ ಕೊಲೆಯಾಗಿದೆ. ಮೃತನ ಕುಟುಂಬಸ್ಥರ(Family) ಜತೆ ಮಾತಾಡಿ ಸಾಂತ್ವನ ಹೇಳಿದ್ದೇನೆ. ಮೃತನ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಕುಟುಂಬಸ್ಥರು ಕೇಳಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದ್ದೇನೆ. ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ, ಮಾಹಿತಿ ಪಡೆದಿದ್ದೇನೆ. ಕೊಲೆ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ ಎಂದು ತಿಳಿಸಿದ್ದಾರೆ.

ಹರ್ಷನನ್ನು ಕೊಲೆ ಮಾಡಿದವರು ಯಾರೆಂದು ಗೊತ್ತಾಗಿದೆ. 4 ರಿಂದ 5 ಜನ ಕೊಲೆ ಮಾಡಿರುವುದಾಗಿ ಮಾಹಿತಿ ಇದೆ. ಆರೋಪಿಗಳು ಯಾರು ಎಂದು ಗೊತ್ತಾಗಿರುವುದು ಸಮಾಧಾನಕರ ಸಂಗತಿ. ಈ ಪ್ರಕರಣದಲ್ಲಿ ನಾವು ಏನೆಂದು ಸ್ಪಷ್ಟ ಸಂದೇಶ ಕೊಡ್ತೇವೆ. ದಯವಿಟ್ಟು ಎಲ್ಲರೂ ಶಾಂತಿಯುತವಾಗಿ ಇರಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಶಿವಮೊಗ್ಗದ ಜನರು ಸಹಕರಿಸಬೇಕು. ಕೊಲೆಗೆ ಸರಿಯಾದ ಕಾರಣ ತನಿಖೆಯಿಂದ ಹೊರಬರುತ್ತದೆ. ಕೊಲೆಯಾದ ಯುವಕನ ಮೇಲೆ ಒಂದೆರಡು ಪ್ರಕರಣಗಳಿವೆ. ಒಂದೆರಡು ಪ್ರಕರಣಗಳು ಇರುವ ಬಗ್ಗೆ ಈಗಾಗಲೇ ಮಾಹಿತಿ ಸಿಕ್ಕಿದೆ. ಮೃತ ಹರ್ಷ ಹಿಂದೂ ಕಾರ್ಯಕರ್ತನಾಗಿದ್ದ. ಸದ್ಯ ಶಿವಮೊಗ್ಗದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಆದರೆ ಜನರು ಆಕ್ರೋಶಭರಿತರಾಗಬಾರದು ಎದು ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಘಟನೆಯನ್ನು ಖಂಡಿಸಿ ನಿನ್ನೆ ಕಲ್ಲು ತೂರಾಟ ನಡೆದಿದೆ.  ಒಂದರೆಡು ಬೈಕ್‌ಗೆ ಬೆಂಕಿ ಹಚ್ಚಿರುವ ಮಾಹಿತಿ ಇದೆ. ಇದರ ಹಿಂದೆ ಯಾವ ಸಂಘಟನೆ ಇದೆ ಎಂಬ ಮಾಹಿತಿ ಇಲ್ಲ. ಸದ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಸಿಎಂ ಜತೆ ಚರ್ಚಿಸುವೆ. ಘಟನೆಯ ಬಗ್ಗೆ ಸಿಎಂ ಬೊಮ್ಮಾಯಿಗೆ ಈಗಾಗಲೇ ಮಾಹಿತಿ ನೀಡಿದ್ದೇನೆ. ಸಿಎಂ ಕೂಡ ಹಿರಿಯ ಅಧಿಕಾರಿಗಳ ಸಂಪರ್ಕದಲ್ಲಿದ್ದಾರೆ ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಗಾಂಜಾ ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಮಾಹಿತಿ

ಗಾಂಜಾ ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಮಾಹಿತಿ ಹಿನ್ನೆಲೆ ನಮ್ಮ ಪೊಲೀಸರು ಅಲರ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಡ್ರಗ್ಸ್ ಜಪ್ತಿ ಮಾಡುವ ಕೆಲಸ ನಮ್ಮ ಪೊಲೀಸರು ಮಾಡಿದ್ದಾರೆ. ಆದರೂ ಇಂತಹ ಒಂದು ದುರ್ಘಟನೆ ನಡೆದುಹೋಗಿದೆ ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಬೆಸೆದುಕೊಂಡ ಅಣ್ತಂಗಿ, ತಾಯಿಯನ್ನು ಕೊಲೆ ಮಾಡಿ ಸಂಪ್​ಗೆ ತಳ್ಳಿದ್ದರು!

Shivamogga: ಮಲೆನಾಡು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ! ಬೆಚ್ಚಿಬಿದ್ದ ಮಲೆನಾಡು ಜನ

Published On - 10:11 am, Mon, 21 February 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ