AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sulebail: ಶಿವಮೊಗ್ಗದ ಸೂಳೆಬೈಲಿನಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ

ಅಜೀಜ್, ಬಾಬು, ಅಬ್ದುಲ್ ಸತ್ತರ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Sulebail: ಶಿವಮೊಗ್ಗದ ಸೂಳೆಬೈಲಿನಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ
ಶಿವಮೊಗ್ಗದ ಸೂಳೆಬೈಲಿನಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ
TV9 Web
| Edited By: |

Updated on: Jan 13, 2023 | 12:53 PM

Share

ಶಿವಮೊಗ್ಗ: ಶಿವಮೊಗ್ಗ (shivamogga) ಹೊರವಲಯದ ಸೂಳೇಬೈಲಿನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ವೇಳೆ ಭೀಕರ ಕೃತ್ಯ ಬೆಳಕಿಗೆ ಬಂದಿದೆ. ಇಲ್ಲಿನ ಅಕ್ರಮ ಕಸಾಯಿ ಖಾನೆಯಲ್ಲಿ (cow slaughterhouse) 7 ಹಸುಗಳ (cow) ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ಇಂದು ಬೆಳಗಿನ ಜಾವ 5.30 ಕ್ಕೆ ದಾಳಿ ತುಂಗಾನಗರ ಪೊಲೀಸರು ಮಾಡಿದ್ದರು.

ತುಂಗಾನಗರ ಠಾಣೆ ಪೊಲೀಸ್ ಇನ್ಸ್​ಪೆಕ್ಟರ್​​ ಮಂಜುನಾಥ್ ನೇತೃತ್ವದಲ್ಲಿ (Tunga nagar police) ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಈ ದಾಳಿ ನಡೆದಿತ್ತು. ಪೊಲೀಸರ ದಾಳಿಗೂ ಮುನ್ನವೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ. ಸೂಳೆಬೈಲಿನ ಅಜೀಜ್ ಎಂಬುವರ ಮನೆ ಹಿಂಭಾಗದ ಶೆಡ್ ನಲ್ಲಿ ಮಾಂಸಕ್ಕಾಗಿ ಈ ಗೋವುಗಳ ಹತ್ಯೆ ಮಾಡಲಾಗಿದೆ. ಆದರೆ ಕಸಾಯಿ ಖಾನೆಯಲ್ಲಿ ಉಳಿದುಕೊಂಡಿದ್ದ ಇನ್ನೂ 10 ಹಸುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಗೋವುಗಳನ್ನು ರಕ್ಷಣೆ ಮಾಡಿ, ಗೋಶಾಲೆಗೆ ಶಿಫ್ಟ್ ಮಾಡಿದ್ದೇವೆ. ದಾಳಿ ಬೆನ್ನಲ್ಲೆ ಆರೋಪಿಗಳು ಪರಾರಿಯಾಗಿದ್ದು, ಅವರುಗಳ ಪತ್ತೆಗಾಗಿ ಬಲೆ ಬೀಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಜೀಜ್, ಬಾಬು, ಅಬ್ದುಲ್ ಸತ್ತರ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಇನ್ನಷ್ಟು  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​