AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಪ್ರಕರಣ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು, ಆಡು ಮೇಯಿಸಲು ಹೋಗಿದ್ದ ಯುವಕ ನದಿಯಲ್ಲಿ ‌ಮುಳುಗಿ ಸಾವು ಶಂಕೆ

ಶಿವಮೊಗ್ಗ ತಾಲೂಕಿನ ಕೆಸವಿನಕಟ್ಟೆ ಗ್ರಾಮದ ಮ್ಯಾದಿನ ಕೆರೆಯಲ್ಲಿ ಶನಿವಾರ ಸಂಜೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.

ಪ್ರತ್ಯೇಕ ಪ್ರಕರಣ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು, ಆಡು ಮೇಯಿಸಲು ಹೋಗಿದ್ದ ಯುವಕ ನದಿಯಲ್ಲಿ ‌ಮುಳುಗಿ ಸಾವು ಶಂಕೆ
ಸಾಂದರ್ಭಿಕ ಚಿತ್ರ
Basavaraj Yaraganavi
| Edited By: ವಿವೇಕ ಬಿರಾದಾರ|

Updated on: Sep 17, 2023 | 12:47 PM

Share

ಶಿವಮೊಗ್ಗ ಸೆ.17: ಶಿವಮೊಗ್ಗ (Shivamogga) ತಾಲೂಕಿನ ಕೆಸವಿನಕಟ್ಟೆ ಗ್ರಾಮದ ಮ್ಯಾದಿನ ಕೆರೆಯಲ್ಲಿ ಶನಿವಾರ ಸಂಜೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ (Drowned). ಸೈಯದ್ (13), ಫೈಸಲ್ (13) ಮೃತ ಬಾಲಕರು. ಮೃತ ಇಬ್ಬರು ಬಾಲಕರು ಹಾರನಹಳ್ಳಿಯ ಸರಕಾರಿ ಉರ್ದು ಶಾಲೆಯ 8 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಘಟನೆ ಕುರಿತು‌ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಡು ಮೇಯಿಸಲು ಹೋಗಿದ್ದ ಯುವಕ ನದಿಯಲ್ಲಿ ‌ಮುಳುಗಿ ಸಾವು, ಶಂಕೆ

ಬಾಗಲಕೋಟೆ: ಆಡು ಮೇಯಿಸಲು ಹೋಗಿದ್ದ ಯುವಕ ಇಳಕಲ್ ತಾಲ್ಲೂಕಿನ ಮುರುಡಿ ಗ್ರಾಮದ ಬಳಿಯ ಘಟಪ್ರಭಾ ನದಿಯಲ್ಲಿ ‌ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಂಕಪ್ಪ ಭೀಮಪ್ಪ ಬಾರ್ಕಿ (22) ಮೃತ ಯುವಕ. ಮಾಚಕನೂರು ಗ್ರಾಮದ ನಿವಾಸಿ ಯಂಕಪ್ಪ ಭೀಮಪ್ಪ ಬಾರ್ಕಿ ಶನಿವಾರ ಮಧ್ಯಾಹ್ನ ಆಡುಗಳಿಗೆ ನೀರು ಕುಡಿಸಲು ಘಟಪ್ರಭಾ ನದಿಗೆ ಹೋದಾಗ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ರವಿವಾರ ಬೆಳಿಗ್ಗೆ ನದಿ ತಂಡದಲ್ಲಿ ಯುವಕನ ಶವ ಪತ್ತೆಯಾಗಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಕೆಲಸ ಅರಸಿ ಬಂದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು

ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಇನ್ನು ಇದೇ ಮುರುಡಿ ಗ್ರಾಮದ ಶರಣಪ್ಪ ರಾಜೂರ ಅವರ ಹೊಲದ ಬಳಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅಂದಾಜು 35 ರಿಂದ 40 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಹೊಡೆದು ಕೊಲೆ ಮಾಡಿ, ನಂತರ ಮೈಮೇಲೆ ಪೆಟ್ರೋಲ್ ಅಥವಾ ಸೀಮೆ ಎಣ್ಣೆ ಸುರಿದು ದೇಹ ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!