AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. ತುಮಕೂರಿನಿಂದ ಮದುವೆ ಆರತಕ್ಷತೆ ಕಾರ್ಯಕ್ರಮ ಮುಗಿಸಿ ಪಾವಗಡಕ್ಕೆ ವಾಪಸ್ಸು ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.

ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: May 12, 2024 | 12:23 PM

Share

ತುಮಕೂರು, (ಮೇ 12): ಜಿಲ್ಲೆಯ (Tumkur) ಪಾವಗಡ ತಾಲೂಕಿನಲ್ಲಿ ಕಾರೊಂದು (Pavagada Accident) ಪಲ್ಟಿಯಾಗಿದ್ದು, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್‌ ಬಳಿ ಕಾರು ಪಲ್ಟಿಯಾಗಿದೆ. ನಾಲ್ವರೂ ತುಮಕೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ಪಾವಗಡಕ್ಕೆ ತೆರಳುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿದೆ. ಕಾರು ಪಲ್ಟಿಯಾದ ತೀವ್ರತೆಗೆ ಒ. ಧನಂಜಯ ಹಾಗೂ ಶ್ರೀಕೃಷ್ಣ ಅವರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ನರಸಿಂಹ ಹಾಗೂ ವೆಂಕಟಾಚಲಪತಿ ಎಂಬುವರ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಬೆಂಗಳೂರಿನ (Bengaluru) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಒ. ಧನಂಜಯ ಅವರು ಪಾವಗಡ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರಾಗಿದ್ದರು. ಇನ್ನು ಶ್ರೀಕೃಷ್ಣ ಅವರು ಪಾವಗಡ ತಾಲೂಕಿನ ಗೌಡೇಟಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿದ್ದರು. ಪಲ್ಟಿಯಾದ ತೀವ್ರತೆಗೆ ಕಾರು ಕೂಡ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ