ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು: ಸಚಿವ ಸೋಮಣ್ಣ ಕೊಟ್ಟರು ಗುಡ್ ನ್ಯೂಸ್

| Updated By: ಗಣಪತಿ ಶರ್ಮ

Updated on: Sep 26, 2024 | 1:43 PM

ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಗುರುವಾರ ಶಿವಮೊಗ್ಗಕ್ಕೆ ಭೇಟಿ ನೀಡಿ, ನಗರದ ಹೊರವಲಯದಲ್ಲಿರುವ ಕೋಟೆ ಗಂಗೂರಿನಲ್ಲಿ ನಿರ್ಮಾಣ ಆಗುತ್ತಿರುವ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ಪರಿಶೀಲನೆ ನಡೆಸಿದರು. ನಂತರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಬಂಧ ಮಹತ್ವದ ಘೋಷಣೆ ಮಾಡಿದರು.

ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು: ಸಚಿವ ಸೋಮಣ್ಣ ಕೊಟ್ಟರು ಗುಡ್ ನ್ಯೂಸ್
ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು: ಸಚಿವ ಸೋಮಣ್ಣ ಕೊಟ್ಟರು ಗುಡ್ ನ್ಯೂಸ್
Follow us on

ಶಿವಮೊಗ್ಗ, ಸೆಪ್ಟೆಂಬರ್ 26: ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್​​ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು.

ಮೋದಿ ಮೂರನೇ ಬಾರಿ ಪ್ರಧಾನಿಯಾದ ಮೇಲೆ ರೈಲ್ವೆ ಇಲಾಖೆ ಐತಿಹಾಸಿಕ ಕಾರ್ಯಗಳನ್ನು ಮಾಡುತ್ತಿದೆ. ಕರ್ನಾಟಕದಲ್ಲಿ ಕೋಚಿಂಗ್ ಡಿಪೋ ಸಿದ್ಧವಾಗುತ್ತಿದ್ದು, ಶಿವಮೊಗ್ಗದಲ್ಲೇ ಆಗುತ್ತಿರುವುದು ಗಮನಾರ್ಹ ಎಂದು ಸೋಮಣ್ಣ ಹೇಳಿದರು. ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಅವರು ಪ್ರತಿಕ್ರಿಯೆ ನೀಡಿದರು.

ರೈಲ್ವೆ ಇಲಾಖೆಯಲ್ಲಿ ಕಳಪೆ ಕಾಮಗಾರಿ ಸಹಿಸಲ್ಲ. ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದ ಹಾಗೆ. ಇನ್ನು ಎರಡರಿಂದ ಮೂರು ತಿಂಗಳಲ್ಲಿ ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಬರಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ತುಮಕೂರು, ಹೊಸೂರು ಮಧ್ಯೆ ಮೂರು ಹೊಸ ಮೆಮು ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ

ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕೋಟೆ ಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ ನಿರ್ಮಾಣ ಆಗುತ್ತಿದೆ. ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ನಡೆಯುತ್ತಿದೆ.

ರೈಲ್ವೆ ಅಧಿಕಾರಿಗಳೊಂದಿಗೆ ಕಾಮಗಾರಿ ವಿಕ್ಷಣೆ ಮಾಡಿದ ಸೋಮಣ್ಣಗೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಶಾಸಕ ಚನ್ನಬಸಪ್ಪ, ಎಂಎಲ್​​ಸಿ ಡಿಎಸ್ ಅರುಣ್, ಡಾ. ಧನಂಜಯ ಸರ್ಜಿ ಸಾಥ್ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ