AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಕೋಮು ಸಂಘರ್ಷ: ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ಮಂಗಳವಾರ ರಜೆ, ಆ. 18ರವರೆಗೆ ನಿಷೇಧಾಜ್ಞೆ

ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ನಾಳೆ ರಜೆ ಘೋಷಿಸಿ ಡಿಸಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ, ಭದ್ರಾವತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಶಿವಮೊಗ್ಗದಲ್ಲಿ ಕೋಮು ಸಂಘರ್ಷ: ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ಮಂಗಳವಾರ ರಜೆ, ಆ. 18ರವರೆಗೆ ನಿಷೇಧಾಜ್ಞೆ
ಘಟನೆ ನಡೆದ ಸ್ಥಳ
TV9 Web
| Edited By: |

Updated on:Aug 15, 2022 | 8:23 PM

Share

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೋಮು ಸಂಘರ್ಷ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ನಾಳೆ ರಜೆ ನೀಡಲಾಗಿದೆ. ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಡಿಸಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆ ಇಡೀ ದೇಶ ಈ ದಿನವನ್ನ ಅವಿಸ್ಮರಣೀಯವಾಗಿ ಆಚರಿಸಿದೆ. ಆದ್ರೆ ಶಿವಮೊಗ್ಗದಲ್ಲಿ ಕೋಮು ಸಂಘರ್ಷ ನಡೆದಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ್ ಸಾವರ್ಕರ್(Veer Savarkar) ಮತ್ತು ಟಿಪ್ಪು ಸುಲ್ತಾನ್(Tipu Sultan) ಫ್ಲೆಕ್ಸ್ ವಿಚಾರವಾಗಿ ಭಾರೀ ಗಲಾಟೆಗಳಾಗಿವೆ. ಹಾಗೂ ಶಿವಮೊಗ್ಗದಲ್ಲಿ ದುಷ್ಕರ್ಮಿಗಳು ಇಬ್ಬರು ಯುವಕರಿಗೆ ಚಾಕು ಇರಿದಿದ್ದಾರೆ(Knife Attack). ಸದ್ಯ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ನಾಳೆ ರಜೆ ಘೋಷಿಸಿ ಡಿಸಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ, ಭದ್ರಾವತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಶಿವಮೊಗ್ಗದ ಅಮೀರ್‌ ಅಹ್ಮದ್‌ ವೃತ್ತದಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆದಿತ್ತು. ಹೀಗಾಗಿ ಸರ್ಕಲ್‌ ಪಕ್ಕದಲ್ಲೇ ಮುಸ್ಲಿಂ ಸಂಘಟನೆಗಳು ವೇದಿಕೆ ರೆಡಿಮಾಡಿ ಟಿಪ್ಪು ಫೋಟೋ ಹಾಕಿದ್ರು. ವಿಷ್ಯ ಅಂದ್ರೆ ಸರ್ಕಲ್‌ನಲ್ಲಿದ್ದ ಹೈಮಾಸ್‌ ಲೈಟ್‌ ಬಳಿ ಹಿಂದೂಪರ ಸಂಘಟನೆಗಳು ವೀರ ಸಾವರ್ಕರ್‌ ಪ್ಲೆಕ್ಸ್‌ ಅಳವಡಿಸಿದ್ರು . ಆದ್ರೆ ಇದಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ರು . ಕೊನೆಗೆ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ಮುಸ್ಲಿಂ ಸಂಘಟನೆವರು ಸರ್ಕಲ್‌ನಲ್ಲೇ ಪ್ರತಿಭಟನೆ ಆರಂಭಿಸಿದ್ರು. ಸಾವರ್ಕರ್‌ ಪ್ಲೆಕ್ಸ್‌ ತೆರವಿಗೆ ಆಗ್ರಹಿಸಿದ್ರು. ಈ ವೇಳೆ ಕೆಲ ಕಿಡಿಗೇಡಿಗಳು ನೋಡನೋಡ್ತಿದ್ದಂತೆ ಸರ್ಕಲ್‌ ಒಳಗೆ ನುಗ್ಗಿ ಸಾವರ್ಕರ್‌ ಪ್ಲೆಕ್ಸ್‌ ಕಿತ್ತೆಸಿದ್ರು. ಆಗ್ಲೇ ನೋಡಿ ಲಾಠಿಚಾರ್ಜ್‌ ಶುರುವಾಗಿತ್ತು. ಪರಿಸ್ಥಿತಿ ಕೈಮೀರುತ್ತಿದೆ ಅನ್ನೋದು ಗೊತ್ತಾಗ್ತಿದ್ದಂತೆ ಪೊಲೀಸರು ಲಾಠಿಬೀಸಿದ್ರು . ಸಾವರ್ಕರ್‌ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಬಂದಿದ್ದವರನ್ನ ಚದುರಿಸಿದ್ರು.

Published On - 8:18 pm, Mon, 15 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ