AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಕಪ್ಪಾ ನೀನು ಬೇಲ್ ಮೇಲೆ ಹೊರಗೆ ಇದ್ದೀಯಾ? ತಿಹಾರ್ ಜೈಲಿಗೆ ಪುಕ್ಸಟ್ಟೆ ಕಳುಹಿಸುತ್ತಾರೆಯೇ? ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ರೆ ನಂಬುತ್ತಾರಾ? ಭ್ರಷ್ಟಾಚಾರದ ಮಾಡಿದರೆ ಜನರು ನಿಮ್ಮನ್ನು ನಂಬುತ್ತಾರೆಯೇ? ಸಿಎಂ ಆಗಬೇಕೆಂಬ ಕಾರಣಕ್ಕೆ ಈ ಎಲ್ಲಾ ಆಟ ಆಡುತ್ತಿದ್ದೀರಿ.

ಯಾಕಪ್ಪಾ ನೀನು ಬೇಲ್ ಮೇಲೆ ಹೊರಗೆ ಇದ್ದೀಯಾ? ತಿಹಾರ್ ಜೈಲಿಗೆ ಪುಕ್ಸಟ್ಟೆ ಕಳುಹಿಸುತ್ತಾರೆಯೇ? ಕೆ.ಎಸ್.ಈಶ್ವರಪ್ಪ ವಾಗ್ದಾಳಿ
ಮಾಜಿ ಸಚಿವ ಕೆ ಎಸ್ ಈಶ್ವರಪ್ಪ
TV9 Web
| Edited By: |

Updated on:Sep 05, 2022 | 3:40 PM

Share

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ D.K.ಶಿವಕುಮಾರ್ ಬೇಲ್ ಮೇಲೆ ಇರುವ ವ್ಯಕ್ತಿ. ಯಾಕಪ್ಪಾ..ನೀನು ಬೇಲ್ ಮೇಲೆ ಹೊರಗೆ ಇದ್ದೀಯಾ? ದೆಹಲಿಯ ತಿಹಾರ್ ಜೈಲಿಗೆ ಪುಕ್ಸಟ್ಟೆ ಕಳುಹಿಸುತ್ತಾರೆಯೇ? ಕೋಟಿ ಕೋಟಿ ಹಣ ಡಿಕೆಶಿ ಬಳಿ ಸಿಕ್ಕಿದ್ದು ಸತ್ಯ ತಾನೇ? ಸತ್ಯ ಹರಿಶ್ಚಂದ್ರ ಮಾತನಾಡಿದ್ದಂತೆ ನಿತ್ಯ ಮಾತನಾಡುತ್ತಿದ್ದೀರಾ ಎಂದು ಮಾಜಿ ಸಚಿವ ಈಶ್ವರಪ್ಪ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ರೆ ನಂಬುತ್ತಾರಾ? ಭ್ರಷ್ಟಾಚಾರದ ಮಾಡಿದರೆ ಜನರು ನಿಮ್ಮನ್ನು ನಂಬುತ್ತಾರೆಯೇ? ಸಿಎಂ ಆಗಬೇಕೆಂಬ ಕಾರಣಕ್ಕೆ ಈ ಎಲ್ಲಾ ಆಟ ಆಡುತ್ತಿದ್ದೀರಿ. ಇಡೀ ದೇಶದಲ್ಲೇ ಕಾಂಗ್ರೆಸ್ ನಿರ್ನಾಮ ಆಗಿದೆ. ಅನೇಕ ಕಾಂಗ್ರೆಸ್​ ನಾಯಕರು ಬಿಜೆಪಿ ಪಕ್ಷಕ್ಕೆ ಬರಲಿದ್ದಾರೆ. ಅನೇಕ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದರು.

ಶಿವಮೊಗ್ಗದಲ್ಲಿ ಪ್ರೇಮ್​ಸಿಂಗ್​ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಪೊಲೀಸರು ಜಬೀವುಲ್ಲಾನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ವಿಚಾರಣೆ ವೇಳೆ ಉಗ್ರರ ಜೊತೆ ಲಿಂಗ್ ಇರುವುದು ಪತ್ತೆಯಾಗಿದೆ. ಸಮಾಜದಲ್ಲಿ ಯಾರು ಕೆಟ್ಟ ಕೆಲಸಗಳನ್ನು ಮಾಡುತ್ತಿದ್ದಾರೆ ಅಂಥವರನ್ನು ಠಾಣೆಗೆ ಕರೆದೊಯ್ದು ರುಬ್ಬಿದಾಗ ಬಾಯಿ ಬಿಡ್ತಾರೆ.

ಕೆಂಪಣ್ಣರನ್ನ ಬಿಟ್ಟುಬಿಡಿ ಅವರಿಗೆ ಕೆಟ್ಟ ಹೆಸರು ತರಬೇಡಿ

ಕೆಂಪಣ್ಣ ಈವರೆಗೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ. ಸುಮ್ಮನೆ 40 ಪರ್ಸೆಂಟ್​ ಕಮಿಷನ್ ಅಂದ್ರೆ ಯಾರು ನಂಬಲ್ಲ. ಯಾವುದೇ ದಾಖಲೆ ನೀಡದೆ ಪುಕ್ಸಟೆ ಹೇಳಿಕೆ ನೀಡಿದರೆ ನಂಬಲ್ಲ. ಕಾಂಗ್ರೆಸ್​ನವರು ಭ್ರಷ್ಟಾಚಾರ ಮಾಡಿದ್ದಕ್ಕೆ ಅಧಿಕಾರ ಕಳೆದುಕೊಂಡ್ರು. ಆದರೂ ಭಂಡತನದಿಂದ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಕೆಂಪಣ್ಣರಂತಹ ಯಜಮಾನರನ್ನ ಬಿಟ್ಟುಬಿಡಿ ಅವರಿಗೆ ಕೆಟ್ಟ ಹೆಸರು ತರಬೇಡಿ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:40 pm, Mon, 5 September 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ