AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸಾರಕ್ಕೆ ಹುಳಿ ಹಿಂಡಿದ ಕೊರೊನಾ.. ಸೌದಿಗೆ ವಾಪಸ್ ಹೋಗದಿದ್ದಕ್ಕೆ ಗಂಡನ ಜೊತೆ ಪತ್ನಿಯ ನಿರಂತರ ಫೈಟಿಂಗ್, ಆತ್ಮಹತ್ಯೆಗೆ ಯತ್ನಿಸಿ ಪತಿ ಆಸ್ಪತ್ರೆ ಪಾಲು

ಆತ ಮದುವೆಯಾಗಿ 18 ವರ್ಷವಾಗಿತ್ತು. ಕುಟುಂಬಕ್ಕಾಗಿ ವಿದೇಶದಲ್ಲಿ ದುಡಿದು ಜೀವನ ಸವೆಸಿದ್ದ. ಆದರೆ ಲಾಕ್ಡೌನ್ ಕಾರಣ ವಾಪಸ್ ಸೌದಿಗೆ ಹೋಗಲು ಆಗಿರಲಿಲ್ಲ. ಈ ನಡುವೆ ದಂಪತಿ ಮಧ್ಯೆ ಭಿನ್ನಾಭಿಪ್ರಾಯ ಶುರುವಾಯ್ತು. ಕಡೆಗೆ ಪತ್ನಿ ಎದುರಲ್ಲೇ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಷ್ಟಕ್ಕೂ ಅವರ ದಾಂಪತ್ಯದಲ್ಲಿ ಆಗಿದ್ದಾದ್ರು ಏನು?

ಸಂಸಾರಕ್ಕೆ ಹುಳಿ ಹಿಂಡಿದ ಕೊರೊನಾ.. ಸೌದಿಗೆ ವಾಪಸ್ ಹೋಗದಿದ್ದಕ್ಕೆ ಗಂಡನ ಜೊತೆ ಪತ್ನಿಯ ನಿರಂತರ ಫೈಟಿಂಗ್, ಆತ್ಮಹತ್ಯೆಗೆ ಯತ್ನಿಸಿ ಪತಿ ಆಸ್ಪತ್ರೆ ಪಾಲು
ಮೆಗ್ಗಾನ್ ಆಸ್ಪತ್ರೆ
ಆಯೇಷಾ ಬಾನು
ಆಯೇಷಾ ಬಾನು|

Updated on:Mar 25, 2021 | 8:02 AM

Share

ಶಿವಮೊಗ್ಗದ ಆರ್​ಎಂಎಲ್ ನಗರದ ನಿವಾಸಿ ಫಯಾಜ್ ಅಹ್ಮದ್ ಸೌದಿಯಲ್ಲಿ ದುಡಿದು ಕುಟುಂಬಕ್ಕೆ ಬೆನ್ನೆಲುಬಾಗಿದ್ದ. ಸುಖ ಸಂಸಾರಕ್ಕೆ 1 ಗಂಡು ಹಾಗೂ 1 ಹೆಣ್ಣು ಮಗುವಿದೆ. ಪತ್ನಿ ಜೊತೆ ಸಂಸಾರವು ಇಷ್ಟು ವರ್ಷ ಚೆನ್ನಾಗಿಯೇ ಇತ್ತು. ಆದರೆ ಪತಿರಾಯ ಕೊವಿಡ್ ಹಿನ್ನೆಲೆ ವಾಪಸ್ ಸೌದಿಗೆ ಹೋಗಲು ಆಗಿರಲಿಲ್ಲ. ಈ ಒಂದೇ ಒಂದು ಕಾರಣಕ್ಕೆ ಸುಖವಾಗಿದ್ದ ಸಂಸಾರದಲ್ಲಿ ಕಿರಿಕಿರಿ, ಭಿನ್ನಾಭಿಪ್ರಾಯ ಶುರುವಾಗಿದೆ.

ಅಷ್ಟಕ್ಕೂ ಅಂತರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತವಾಗಿತ್ತು. ಸೌದಿಯಲ್ಲಿ ಲಾಕ್​ಡೌನ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಫಯಾಜ್ ಅಹ್ಮದ್ ಶಿವಮೊಗ್ಗದಲ್ಲೇ ಕಳೆದ ಕೆಲವು ತಿಂಗಳಿಂದ ಪತ್ನಿ ಜೊತೆ ಇದ್ದ. ಈ ನಡುವೆ ಪತಿ ಪತ್ನಿ ನಡುವೆ ಗಲಾಟೆ ಶುರುವಾಗಿದೆ. ಪತ್ನಿಯು ಪತಿ ಹೆಸರಿನಲ್ಲಿದ್ದ 2 ಸೈಟ್ ಮತ್ತು ಮನೆ ಹಾಗೂ 1 ಶಾಲೆ ಕಟ್ಟಡವು ಪತ್ನಿ ಹೆಸರಿಗೆ ವರ್ಗಾವಣೆಯಾಗಿದೆ. ಪತಿ ಆಸ್ತಿಯನ್ನ ಪತ್ನಿ ಹೆಸರಿನಲ್ಲಿ ಮಾಡಿದ್ರೂ ಪತ್ನಿಗೆ ಅದ್ಯಾಕೋ ಗಂಡನ ಮೇಲೆ ಸಿಟ್ಟು. ಗಂಡ ವಾಪಸ್ ಸೌದಿಗೆ ಹೋಗಿದ್ದರೆ ಎಲ್ಲವೂ ಚೆನ್ನಾಗಿತ್ತು. ಆದ್ರೆ ಪತಿ ಕೆಲವು ತಿಂಗಳನಿಂದ ಪತ್ನಿಯ ಜೊತೆಗೆ ವಾಸವಾಗಿದ್ದೇ ಯಡವಟ್ಟಾಗಿತ್ತು. ಪತ್ನಿಗೆ ಪತಿ ಮನೆಯಲ್ಲಿ ಇರುವುದು ಇಷ್ಟವಿರಲಿಲ್ಲ. ಪದೇಪದೆ ಪತಿ ಜೊತೆ ಗಲಾಟೆ ಮಾಡುತ್ತಿದ್ದಳು ಕೊನೆಗೆ ಮಹಿಳಾ ಠಾಣೆಯ ಮೆಟ್ಟಿಲೂ ಸಹ ಹತ್ತಿದ್ದಳು. ಹೆಂಡತಿಯೇ ಪತಿಗೆ ವಿಷಕೊಟ್ಟು ಸಾಯೋದಕ್ಕೆ ಪ್ರಚೋದನೆ ಕೊಟ್ಟಿದ್ದಳಂತೆ. ಹೀಗಾಗಿ ಪತಿರಾಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗ್ತಿದೆ.

ಅಷ್ಟಕ್ಕೂ 18 ವರ್ಷಗಳ ಕಾಲ ಚೆನ್ನಾಗಿದ್ದ ಸಂಸಾರದಲ್ಲಿ ಏನಾಯ್ತೋ ಗೊತ್ತಿಲ್ಲ. ಮಕ್ಕಳು ಕೂಡ ಅಪ್ಪನ ಜತೆಯಲ್ಲಿ ಅಷ್ಟಾಗಿ ನಂಟು ಹೊಂದಿಲ್ಲವಂತೆ. ಇದೇ ಕಾರಣಕ್ಕೆ ಪತಿಯೇ ಬೇಡ ಎಂಬಂತೆ ಪತ್ನಿ ವರ್ತಿಸುತ್ತಿದ್ದಳು ಎಂಬ ಅರೋಪ ಕೇಳಿಬಂದಿದೆ. ವಿಷ ಸೇವಿಸಿದ್ದ ಫಯಾಜ್​ಗೆ ಸದ್ಯ ಚಿಕಿತ್ಸೆ ಮುಂದುವರಿದಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುವಂತಾಗಿದೆ.

ಇಷ್ಟೆಲ್ಲಾ ನಡೆದಿದ್ದರೂ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಲು ಪತ್ನಿ ನಿರಾಕರಿಸಿದ್ದು, ಪತಿ ಮನೆಯವರು ಹಲವಾರು ಆರೋಪಗಳನ್ನ ಮಾಡುತ್ತಿದ್ದಾರೆ. ಸೂಕ್ತ ತನಿಖೆ ನಡೆಸಿ ಪತ್ನಿಗೆ ಸೂಕ್ತ ಶಿಕ್ಷೆ ಕೊಡಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಆದ್ರೆ ಕುಟುಂಬಕ್ಕಾಗಿ ಇಷ್ಟು ವರ್ಷ ದುಡಿದವನ ಪರಿಸ್ಥಿತಿ ಮಾತ್ರ ಚಿಂತಾಜನಕವಾಗಿದೆ.

ಇದನ್ನೂ ಓದಿ: ಪತಿ- ಪತ್ನಿ ಜಗಳದಲ್ಲಿ ಪತಿರಾಯನ ಕಿವಿ ಕಟ್: ಬುದ್ಧಿವಾದ ಹೇಳಿದ ಪತಿಗೆ, ಪತ್ನಿ ಕುಟುಂಬದವರಿಂದ ಹಲ್ಲೆ

Published On - 7:59 am, Thu, 25 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ