AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ವರ್ಷದ ಅಂಕಲ್​ಗೆ ಹುಟ್ತು ಮದುವೆ ಆಸೆ; ಮದುವೆಯಾಗಲು ಬಂದಿದ್ದ ಆಂಟಿ ತಾಳಿ, ಆಭರಣ ಸಮೇತ ಎಸ್ಕೇಪ್‌

ಒಂಟಿತನದಿಂದ ಹೊರಬರಲು ಮದುವೆಯಾಗೋಕೆ ಹೊರಟಿದ್ದ ನಂಜುಂಡಪ್ಪ, ಆಂಟಿಯಿಂದ ಮೋಸ ಹೋಗಿದ್ರೆ, ಮದುವೆಯಾಗ್ತೀನಿ ಅಂತಾ ಬಂದಿದ್ದ ಚಂದ್ರಿಕಾ ಆಭರಣ ಬಟ್ಟೆಯೊಂದಿಗೆ ಜೂಟ್‌ ಆಗಿದ್ದಾರೆ.

60 ವರ್ಷದ ಅಂಕಲ್​ಗೆ ಹುಟ್ತು ಮದುವೆ ಆಸೆ; ಮದುವೆಯಾಗಲು ಬಂದಿದ್ದ ಆಂಟಿ ತಾಳಿ, ಆಭರಣ ಸಮೇತ ಎಸ್ಕೇಪ್‌
ನಂಜುಂಡಪ್ಪ
TV9 Web
| Edited By: |

Updated on: Dec 09, 2021 | 9:21 AM

Share

ಶಿವಮೊಗ್ಗ: ಆತನಿಗೆ 60 ವರ್ಷ ವಯಸ್ಸು. 7 ತಿಂಗಳ ಹಿಂದೆ ಪತ್ನಿಯನ್ನ ಕಳೆದುಕೊಂಡಿದ್ದ ಆತನಿಗೆ ಒಂಟಿತನ ಕಾಡ್ತಿತ್ತು. ಹೀಗಾಗಿ ಎರಡನೇ ಮದುವೆಯ ಆಸೆ ಕಂಡಿದ್ದ. ಕನ್ನಡ ಮ್ಯಾಟ್ರಿಮೊನಿಯಲ್ಲಿ ಆಂಟಿಯನ್ನೂ ನೋಡಿಕೊಡಿದ್ದ. ತಾಳಿ ಕಟ್ಟಿಸಿಕೊಳ್ಳಬೇಕಿದ್ದ ಆಂಟಿ ಅದೇ ತಾಳಿಯೊಂದಿಗೆ ಎಸ್ಕೇಪ್ ಆಗಿದ್ದಾಳೆ.

60 ವರ್ಷದ ಅಂಕಲ್‌ಗೆ ಮದುವೆಯ ಆಸೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದ 60 ವರ್ಷದ ನಂಜುಂಡಪ್ಪ ಕೃಷಿಕರಾಗಿದ್ದು, ಮದುವೆಯಾಗಿ 30 ವರ್ಷವಾಗಿದೆ. ಒಂದು ಗಂಡು ಎರಡು ಹೆಣ್ಣು ಮಕ್ಕಳಿದ್ದೂ ಎಲ್ರಿಗೂ ಮದುವೆಯಾಗಿ ಮಕ್ಕಳಿವೆ. ಈ ನಡುವೆ 7 ತಿಂಗಳ ಹಿಂದೆ ನಂಜುಂಡಪ್ಪನ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ರು. ಆ ಬಳಿಕ ನಂಜುಂಡಪ್ಪನಿಗೆ ಒಂಟಿತನ ಕಾಡೋಕೆ ಶುರುವಾಗಿತ್ತು. ಹೀಗಾಗಿ ಮತ್ತೊಂದು ಮದುವೆಯಾಗಲು ನಿರ್ಧರಿಸಿದ ನಂಜುಂಡಪ್ಪ, ಈ ಇಳಿವಯಸ್ಸಿನಲ್ಲೂ ಕನ್ನಡ ಮ್ಯಾಟ್ರಿಮೊನಿ ಮೊರೆ ಹೋಗಿದ್ದ.

ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರೋ ಕನ್ನಡ ಮ್ಯಾಟ್ರಿಮೊನಿಯಲ್ಲಿ ಮೂರುವರೆ ಸಾವಿರ ಹಣ ಕೊಟ್ಟು ನೋಂದಣಿ ಮಾಡಿಕೊಂಡಿದ್ದ. ಆ ಬಳಿಕ ಬೆಂಗಳೂರಿನ ಯಲಹಂಕದ ಚಂದ್ರಿಕಾ ಅನ್ನೋ ಮಹಿಳೆ ನಂಜುಂಡಪ್ಪನನ್ನ ಒಪ್ಪಿಕೊಂಡು ಮದುವೆಗೆ ಗ್ರೀನ್‌ಸಿಗ್ನಲ್‌ ಕೊಟ್ಟಿದ್ಲು. ಹೀಗೆ ಮದುವೆಯಾಗ್ತೀನಿ ಅಂತಾ ಬಂದಿದ್ದ ಚಂದ್ರಿಕಾ ಆಕಾಶದಲ್ಲಿನ ಚಂದ್ರನನ್ನ ತೋರಿಸಿ ಎಸ್ಕೇಪ್‌ ಆಗಿದ್ದಾಳೆ.

ಅಷ್ಟಕ್ಕೂ ಚಂದ್ರಿಕಾ ಗ್ರೀನ್‌ಸಿಗ್ನಲ್‌ ಕೊಡ್ತಿದ್ದಂತೆ ಮದುವೆಗೆ ದಿನಾಂಕ ಕೂಡಾ ಫಿಕ್ಸ್‌ ಆಗಿತ್ತು. ಅದ್ರಂತೆ ನವೆಂಬರ್‌ 15 ರಂದು ಸಿಗಂದೂರು ದೇವಸ್ಥಾನದಲ್ಲಿ ಮದುವೆಗೆ ಸಿದ್ದತೆ ನಡೆದಿತ್ತು. ಸ್ನೇಹಿತರನ್ನ ಕರೆದುಕೊಂಡು ಹೋಗಿದ್ದ ನಂಜುಂಡಪ್ಪ, ಹಸೆಮಣೆ ಏರೋಕೆ ಸಿದ್ದವಾಗಿದ್ದ. ಆದ್ರೆ ಅಲ್ಲಿ ಮದುವೆಗೆ ಅವಕಾಶ ಇಲ್ಲ ಅಂತಾ ಹೇಳಿದ್ರಂತೆ. ಹೀಗಾಗಿ ವಾಪಸ್ ಶಿವಮೊಗ್ಗಕ್ಕೆ ಬಂದಿದ್ರು . ಶಿವಮೊಗ್ಗ ಬಸ್‌ ನಿಲ್ದಾಣದಲ್ಲಿ ಬೈಕ್‌ ತರ್ತೀನಿ ಅಂತಾ ನಂಜುಂಡಪ್ಪ ಹೋದ್ರೆ, ಊಟ ಮಾಡಿ ಬರ್ತೀನಿ ಅಂತಾ ಚಂದ್ರಿಕಾ ಹೋಗಿದ್ಲು. ಆದ್ರೆ ವಾಪಸ್‌ ಮಾತ್ರ ಬಂದಿಲ್ಲ. ಮದುವೆಗೆ ತಂದಿದ್ದ ಚಿನ್ನದ ತಾಳಿ, 4 ಬೆಳ್ಳಿ ಕಾಲುಂಗುರು, 2 ಬೆಳ್ಳಿ ಕಾಲು ಚೈನು, ಎರಡು ಬೆಳ್ಳಿ ಕೈ ಬಳೆ, ರೇಷ್ಮೆ ಸೀರೆಯೊಂದಿಗೆ ಜೂಟ್‌ ಆಗಿದ್ದಾಳೆ.

ಒಟ್ನಲ್ಲಿ ಒಂಟಿತನದಿಂದ ಹೊರಬರಲು ಮದುವೆಯಾಗೋಕೆ ಹೊರಟಿದ್ದ ನಂಜುಂಡಪ್ಪ, ಆಂಟಿಯಿಂದ ಮೋಸ ಹೋಗಿದ್ರೆ, ಮದುವೆಯಾಗ್ತೀನಿ ಅಂತಾ ಬಂದಿದ್ದ ಚಂದ್ರಿಕಾ ಆಭರಣ ಬಟ್ಟೆಯೊಂದಿಗೆ ಜೂಟ್‌ ಆಗಿದ್ದಾರೆ. ಇಂಥಾ ಕಿಲಾಡಿಗಳಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಬೇಕಿದೆ.

ವರದಿ: ಬಸವರಾಜ್ ಯರಗಣವಿ, ಟಿವಿ9 ಶಿವಮೊಗ್ಗ

ಇದನ್ನೂ ಓದಿ: S R Morey death: 4 ಬಾರಿ ಶಾಸಕ, ಮಾಜಿ ಸಚಿವ ಎಸ್. ಆರ್‌. ಮೋರೆ‌ ಜನ್ಮದಿನದಂದೇ ವಿಧಿವಶ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?