ಪ್ರೀತಿಸಿದ ಹುಡುಗಿ ಮೋಸ ಮಾಡಿದ್ದಕ್ಕೆ ಮನನೊಂದ ಯುವಕ; ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣು

ಮೃತ ದುರ್ದೈವಿ ದಿಲೀಪ್ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಯುವತಿ ಪರಿಚಯವಾಗಿದ್ದಾಳೆ. ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಇಬ್ಬರು ದೂರವಾಗಿದ್ದರು.

ಪ್ರೀತಿಸಿದ ಹುಡುಗಿ ಮೋಸ ಮಾಡಿದ್ದಕ್ಕೆ ಮನನೊಂದ ಯುವಕ; ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣು
ಆತ್ಮಹತ್ಯೆಗೆ ಶರಣಾಗಿರುವ ಯುವಕ ದಿಲೀಪ್
Follow us
| Updated By: sandhya thejappa

Updated on:Jun 27, 2022 | 12:27 PM

ಶಿವಮೊಗ್ಗ: ಪ್ರೀತಿಸಿದ ಹುಡುಗಿ ಮೋಸ ಮಾಡಿದ್ದಕ್ಕೆ ಮನನೊಂದ ಯುವಕ ವಿಡಿಯೋ (Video) ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೊರಬದ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ. 26 ವರ್ಷದ ದಿಲೀಪ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಹಾಸನ ಜಿಲ್ಲೆ ಅರಸೀಕೆರೆ ಮೂಲದವನು. ಕೆಲವು ವರ್ಷಗಳಿಂದ ದಿಲೀಪ್ ಮತ್ತು ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಪ್ರೀತಿಸಿದ ಯುವತಿ ಕೆಲವು ದಿನಗಳಿಂದ ಅಂತರ ಕಾಯ್ದುಕೊಂಡಿದ್ದಳು. ಇದೇ ಕಾರಣಕ್ಕೆ ಯುವಕ ಸಾವಿನ ದಾರಿ ಹಿಡಿದಿದ್ದಾನೆ ಎಂದು ತಿಳಿದು ಬಂದಿದೆ.

ಮೃತ ದುರ್ದೈವಿ ದಿಲೀಪ್ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಯುವತಿ ಪರಿಚಯವಾಗಿದ್ದಾಳೆ. ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಇಬ್ಬರು ದೂರವಾಗಿದ್ದರು. ಬಳಿಕ ಮನೆಯವರು ಒಪ್ಪಲ್ಲ ಎಂಬ ಕಾರಣ ನೀಡಿ ಯುವತಿ ಪ್ರೀತಿ ನಿರಾಕರಿಸಿದ್ದಾಳೆ. ಕೆಲವು ದಿನಗಳಿಂದ ಯುವತಿ ಅಂತರ ಕಾಯ್ದುಕೊಂಡಿದ್ದಳು. ಇದೇ ಕಾರಣಕ್ಕೆ ಮನನೊಂದ ಯುವಕ ಬೆಟ್ಟದಕೂರ್ಲಿ ಗ್ರಾಮಕ್ಕೆ ಬಂದು ಕೆರೆಯ ಏರಿ ಮೇಲೆ ವಿಷ ಕುಡಿದಿದ್ದಾನೆ.

ವಿಷ ಕುಡಿದು ಬಿದ್ದಿದ್ದ ದಿಲೀಪ್​ನ ಕಂಡು ಸ್ಥಳೀಯರು ಶಿಕಾರಿಪುರ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳೆದಿದ್ದಾನೆ. ಆತ್ಮಹತ್ಯೆಗೆ ಮುನ್ನಾ ಯುವಕ ಮಾಡಿದ್ದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
Image
Kempegowda 513th Jayanti 2022: ಇಂದು (ಜೂನ್ 27) ವಿಧಾನಸೌಧದಲ್ಲಿ ಚೊಚ್ಚಲ ಅಂತಾರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರದಾನ
Image
India T20 Captain List: ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ 9 ನಾಯಕರು ಇವರೇ..!
Image
ರಾತ್ರಿ ಪಾಸಾದ ವಿದ್ಯಾರ್ಥಿಗಳು ಬೆಳಗಾಗುವಷ್ಟರಲ್ಲಿ ಫೇಲ್! ಬೆಂಗಳೂರು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಎಡವಟ್ಟಿಗೆ ವಿದ್ಯಾರ್ಥಿಗಳ ಆಕ್ರೋಶ
Image
Rohit Sharma: ರೋಹಿತ್ ಅಲಭ್ಯ: ಇಂಗ್ಲೆಂಡ್ ಫ್ಲೈಟ್ ಏರಿದ ಮತ್ತೊಬ್ಬ ಸ್ಟಾರ್ ಓಪನರ್: ಯಾರು ಗೊತ್ತೇ?

ಇದನ್ನೂ ಓದಿ: Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​

ಹುಬ್ಬಳ್ಳಿಯಲ್ಲಿ ಯುವಕ ನೇಣಿಗೆ ಶರಣು: ಹುಬ್ಬಳ್ಳಿ: ತಾಲೂಕಿನ ನೂಲ್ವಿ ಗ್ರಾಮದಲ್ಲಿ ಯುವಕನೊಬ್ಬ ಪ್ರೇಮ ವೈಫಲ್ಯದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕೊಟ್ರೇಶ್ ಮಠಪತಿ (20) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಯುವಕ. ಕೂಲಿ ಕೆಲಸ ಮಾಡಿಕೊಂಡಿದ್ದ ಈತ ಕಳೆದ ಎರಡೂ ದಿನಗಳ ಹಿಂದೆ ಮನೆ ಬಿಟ್ಟು ತೆರಳಿದ್ದ. ನೂಲ್ವಿ ಗ್ರಾಮದ ಹೊರ ವಲಯದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ‌.

ಇದನ್ನೂ ಓದಿ: Bank Holidays in July 2022: ಜುಲೈ ತಿಂಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ 14 ದಿನ ಬ್ಯಾಂಕ್​ ರಜಾ

Published On - 12:21 pm, Mon, 27 June 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ