Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ

ಹಿರಿಯ ಪತ್ರಕರ್ತ ಶಿವಾನಂದ ತಗಡೂರ ಅವರ ಕೋವಿಡ್ ಕಥೆಗಳು ಕೃತಿಗೆ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಪ್ರತಿಷ್ಠಿತ ಅಮ್ಮ ಪ್ರಶಸ್ತಿಯ ವಿಶೇಷ ಪುರಸ್ಕಾರ ಲಭಿಸಿದೆ. ಕೋವಿಡ್ ಸಮಯದಲ್ಲಿನ ನೋವು, ಸಾವು ಮತ್ತು ಪತ್ರಕರ್ತರ ಸಂಕಷ್ಟಗಳನ್ನು ಚಿತ್ರಿಸುವ ಈ ಕೃತಿಯ ಜನಪರತೆಗೆ ಈ ಪ್ರಶಸ್ತಿ ಸಂದಿದೆ.

ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ
ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 17, 2024 | 7:12 PM

ಕಲಬುರಗಿ, ನವೆಂಬರ್​ 17: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಯ ವಿಶೇಷ ಪುರಸ್ಕಾರ ಹಿರಿಯ ಪತ್ರಕರ್ತ ಶಿವಾನಂದ ತಗಡೂರು (Sivananda Tagadoor) ಅವರ ‘ಕೋವಿಡ್ ಕಥೆಗಳು ಕೃತಿಗೆ ಲಭಿಸಿದೆ. ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ್​ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್‌ನಲ್ಲಿ ಜೀವ ಕಳೆದುಕೊಂಡ ಪತ್ರಕರ್ತರ ಬದುಕಿನ ವಾಸ್ತವ ಸಂಗತಿ ಬಿಚ್ಚಿಡುವ ಪುಸ್ತಕ

ಮಾಧ್ಯಮ ರಂಗದಲ್ಲಿ ತುಂಬಾ ಪರಿಣಾಮ ಬೀರಿರುವ ಪುಸ್ತಕ ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿ ತೀರಾ ಭಿನ್ನವಾಗಿ ಮೂಡಿದೆ. ಕೋವಿಡ್ ಕಾಲಘಟ್ಟದಲ್ಲಿ ಆಗಿರುವ ಸಾವು- ನೋವು, ವಿಶೇಷವಾಗಿ ಕೋವಿಡ್‌ನಲ್ಲಿ ಜೀವ ಕಳೆದುಕೊಂಡ ಪತ್ರಕರ್ತರ ಬದುಕಿನ ವಾಸ್ತವ ಸಂಗತಿಗಳ ಕಥೆಗಳನ್ನೊಳಗೊಂಡ ಈ ಕೃತಿ, ಪತ್ರಿಕಾ ವಲಯದಲ್ಲಿ ಗಂಭೀರ ಪರಿಣಾಮವನ್ನು ಉಂಟುಮಾಡಿದೆ.

ನೊಂದ ಕುಟುಂಬಗಳ ಬದುಕು ಬೀದಿಗೆ ಬೀಳುವ ಹೊತ್ತಿನಲ್ಲಿ ಅವರಿಗೆ ಆರ್ಥಿಕವಾಗಿ ಆಸರೆಯಾಗಿ ನಿಂತ ನೈಜ ಘಟನೆಗಳು ಪುಸ್ತಕದಲ್ಲಿವೆ. ಕೊರೋನಾ ಸಂದರ್ಭದಲ್ಲಿ ಟಿವಿ ಸಂದರ್ಶನವೊಂದರಲ್ಲಿ ಶಿವಾನಂದ ತಗಡೂರು ಅವರ ಮಾತು ಮತ್ತು ಚಿಕಿತ್ಸೆಯ ಸಲಹೆಗಳನ್ನು ಕೇಳಿದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ತಂದೆಯವರನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗಿದೆ ಎಂದು ಹೇಳಿಕೊಂಡಿದ್ದರು.

ಇಂತಹ ಜನಪರವಾದ ಕೃತಿಗೆ ಅಮ್ಮ ವಿಶೇಷ ಪುರಸ್ಕಾರವನ್ನು ನೀಡಲಾಗುತ್ತಿದ್ದು, ಪ್ರಸ್ತುತ ವರ್ಷದಿಂದ ಪ್ರತಿ ವರ್ಷವೂ ಮಾಧ್ಯಮದವರು ಬರೆದ ಒಂದು ಪುಸ್ತಕಕ್ಕೆ ವಿಶೇಷ ಪುರಸ್ಕಾರವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: KUWJ ಹೋರಾಟದ ಫಲ: ನನಸಾದ ಪತ್ರಕರ್ತರ ಬಸ್ ಪಾಸ್ ಯೋಜನೆ, ಸಿಎಂಗೆ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು

ನವೆಂಬರ್ 26 ರಂದು ಸಂಜೆ 5.30ಕ್ಕೆ ಸೇಡಂನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ಸಮಾರಂಭದಲ್ಲಿ ‘ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿಯೇ ಈ ವಿಶೇಷ ಪುರಸ್ಕಾರವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ