AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ

ಹಿರಿಯ ಪತ್ರಕರ್ತ ಶಿವಾನಂದ ತಗಡೂರ ಅವರ ಕೋವಿಡ್ ಕಥೆಗಳು ಕೃತಿಗೆ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಪ್ರತಿಷ್ಠಿತ ಅಮ್ಮ ಪ್ರಶಸ್ತಿಯ ವಿಶೇಷ ಪುರಸ್ಕಾರ ಲಭಿಸಿದೆ. ಕೋವಿಡ್ ಸಮಯದಲ್ಲಿನ ನೋವು, ಸಾವು ಮತ್ತು ಪತ್ರಕರ್ತರ ಸಂಕಷ್ಟಗಳನ್ನು ಚಿತ್ರಿಸುವ ಈ ಕೃತಿಯ ಜನಪರತೆಗೆ ಈ ಪ್ರಶಸ್ತಿ ಸಂದಿದೆ.

ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ
ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ
TV9 Web
| Edited By: |

Updated on: Nov 17, 2024 | 7:12 PM

Share

ಕಲಬುರಗಿ, ನವೆಂಬರ್​ 17: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಯ ವಿಶೇಷ ಪುರಸ್ಕಾರ ಹಿರಿಯ ಪತ್ರಕರ್ತ ಶಿವಾನಂದ ತಗಡೂರು (Sivananda Tagadoor) ಅವರ ‘ಕೋವಿಡ್ ಕಥೆಗಳು ಕೃತಿಗೆ ಲಭಿಸಿದೆ. ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ್​ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್‌ನಲ್ಲಿ ಜೀವ ಕಳೆದುಕೊಂಡ ಪತ್ರಕರ್ತರ ಬದುಕಿನ ವಾಸ್ತವ ಸಂಗತಿ ಬಿಚ್ಚಿಡುವ ಪುಸ್ತಕ

ಮಾಧ್ಯಮ ರಂಗದಲ್ಲಿ ತುಂಬಾ ಪರಿಣಾಮ ಬೀರಿರುವ ಪುಸ್ತಕ ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿ ತೀರಾ ಭಿನ್ನವಾಗಿ ಮೂಡಿದೆ. ಕೋವಿಡ್ ಕಾಲಘಟ್ಟದಲ್ಲಿ ಆಗಿರುವ ಸಾವು- ನೋವು, ವಿಶೇಷವಾಗಿ ಕೋವಿಡ್‌ನಲ್ಲಿ ಜೀವ ಕಳೆದುಕೊಂಡ ಪತ್ರಕರ್ತರ ಬದುಕಿನ ವಾಸ್ತವ ಸಂಗತಿಗಳ ಕಥೆಗಳನ್ನೊಳಗೊಂಡ ಈ ಕೃತಿ, ಪತ್ರಿಕಾ ವಲಯದಲ್ಲಿ ಗಂಭೀರ ಪರಿಣಾಮವನ್ನು ಉಂಟುಮಾಡಿದೆ.

ನೊಂದ ಕುಟುಂಬಗಳ ಬದುಕು ಬೀದಿಗೆ ಬೀಳುವ ಹೊತ್ತಿನಲ್ಲಿ ಅವರಿಗೆ ಆರ್ಥಿಕವಾಗಿ ಆಸರೆಯಾಗಿ ನಿಂತ ನೈಜ ಘಟನೆಗಳು ಪುಸ್ತಕದಲ್ಲಿವೆ. ಕೊರೋನಾ ಸಂದರ್ಭದಲ್ಲಿ ಟಿವಿ ಸಂದರ್ಶನವೊಂದರಲ್ಲಿ ಶಿವಾನಂದ ತಗಡೂರು ಅವರ ಮಾತು ಮತ್ತು ಚಿಕಿತ್ಸೆಯ ಸಲಹೆಗಳನ್ನು ಕೇಳಿದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ತಂದೆಯವರನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗಿದೆ ಎಂದು ಹೇಳಿಕೊಂಡಿದ್ದರು.

ಇಂತಹ ಜನಪರವಾದ ಕೃತಿಗೆ ಅಮ್ಮ ವಿಶೇಷ ಪುರಸ್ಕಾರವನ್ನು ನೀಡಲಾಗುತ್ತಿದ್ದು, ಪ್ರಸ್ತುತ ವರ್ಷದಿಂದ ಪ್ರತಿ ವರ್ಷವೂ ಮಾಧ್ಯಮದವರು ಬರೆದ ಒಂದು ಪುಸ್ತಕಕ್ಕೆ ವಿಶೇಷ ಪುರಸ್ಕಾರವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: KUWJ ಹೋರಾಟದ ಫಲ: ನನಸಾದ ಪತ್ರಕರ್ತರ ಬಸ್ ಪಾಸ್ ಯೋಜನೆ, ಸಿಎಂಗೆ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು

ನವೆಂಬರ್ 26 ರಂದು ಸಂಜೆ 5.30ಕ್ಕೆ ಸೇಡಂನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ಸಮಾರಂಭದಲ್ಲಿ ‘ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿಯೇ ಈ ವಿಶೇಷ ಪುರಸ್ಕಾರವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?