AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ನಿರ್ಧಾರವಾಗುವ ಮೊದಲೇ ಟ್ವಿಟರ್ ಹಿಸ್ಟರಿ ಡಿಲೀಟ್ ಮಾಡಿದ ಶೋಭಾ ಕರಂದ್ಲಾಜೆ

ಅವರು ಈ ಹಿಂದೆ ಮಾಡಿದ್ದ ಹಿಂದಿನ ಎಲ್ಲ ಟ್ವೀಟ್​ಗಳೂ ಅಳಿಸಿ ಹೋಗಿವೆ. ಹಿಂದುತ್ವ, ಪಕ್ಷ, ಧರ್ಮಕ್ಕೆ ಸಂಬಂಧಿಸಿದ ಹಲವು ಟ್ವೀಟ್​ಗಳು ಕಾಣಿಸುತ್ತಿಲ್ಲ. ಟ್ವಿಟರ್ ಖಾತೆಯ ಹಿಸ್ಟರಿ ಡಿಲೀಟ್ ಮಾಡಿರುವ ಶೋಭಾ ಅವರ ನಡೆ ಅಚ್ಚರಿ ಮೂಡಿಸಿದೆ.

ಖಾತೆ ನಿರ್ಧಾರವಾಗುವ ಮೊದಲೇ ಟ್ವಿಟರ್ ಹಿಸ್ಟರಿ ಡಿಲೀಟ್ ಮಾಡಿದ ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 09, 2021 | 3:44 PM

Share

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈಗ ಕೇಂದ್ರ ಸಚಿವರಾಗುವ ಸುಯೋಗ. ಪ್ರಮಾಣ ವಚನ ಸ್ವೀಕರಿಸಿದ ನಂತರ ತಮ್ಮ ಟ್ವಿಟರ್​ ಖಾತೆಯಲ್ಲಿ ಹಿಸ್ಟರಿ ಡಿಲೀಟ್ ಮಾಡಿದ್ದಾರೆ. ಅವರು ಈ ಹಿಂದೆ ಮಾಡಿದ್ದ ಹಿಂದಿನ ಎಲ್ಲ ಟ್ವೀಟ್​ಗಳೂ ಅಳಿಸಿ ಹೋಗಿವೆ. ಹಿಂದುತ್ವ, ಪಕ್ಷ, ಧರ್ಮಕ್ಕೆ ಸಂಬಂಧಿಸಿದ ಹಲವು ಟ್ವೀಟ್​ಗಳು ಕಾಣಿಸುತ್ತಿಲ್ಲ. ಟ್ವಿಟರ್ ಖಾತೆಯ ಹಿಸ್ಟರಿ ಡಿಲೀಟ್ ಮಾಡಿರುವ ಶೋಭಾ ಅವರ ನಡೆ ಅಚ್ಚರಿ ಮೂಡಿಸಿದೆ.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ದೆಹಲಿಯಲ್ಲಿ ಟಿವಿ9 ಕನ್ನಡ ಪ್ರತಿನಿಧಿಯೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಆಗಸ್ಟ್ 15ರವರೆಗೂ ದೆಹಲಿಯಲ್ಲಿಯೇ ಇರಲು ಪ್ರಧಾನಿ ಸೂಚಿಸಿದ್ದಾರೆ. ನನಗೆ ಯಾವ ಖಾತೆ ನೀಡಲಿದ್ದಾರೆ ಎನ್ನುವುದು ಇಂದು ರಾತ್ರಿ ಗೊತ್ತಾಗಲಿದೆ ಎಂದು ಶೋಭಾ ಕರಂದ್ಲಾಜೆ ನುಡಿದರು.

ಸದಾನಂದಗೌಡರ ಬದಲಿಗೆ ನಾನು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿಲ್ಲ. ಡಿ.ವಿ.ಸದಾನಂದಗೌಡರಿಗೆ ಹೆಚ್ಚಿನ ಅನುಭವವಿದೆ. ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ನನಗೆ ಯಾವುದೇ ಕೋಟಾದಿಂದ ಸಚಿವಸ್ಥಾನ ಸಿಕ್ಕಿಲ್ಲ. ಬಹುಶಃ ಪಕ್ಷನಿಷ್ಠೆಯಿಂದ ಸಚಿವ ಸ್ಥಾನ ಸಿಕ್ಕಿರಬಹುದು ಎಂದು ಹೇಳಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಯಡಿಯೂರಪ್ಪ ಅವರ ಆಪ್ತೆ. ಬಿಜೆಪಿ ಕರ್ನಾಟಕ ಘಟಕದ ಉಪಾಧ್ಯಕ್ಷೆ. ಈ ಹಿಂದೆ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದಾಗ ಬಿಗಿ ಆಡಳಿತದಿಂದ ಹೆಸರುವಾಸಿಯಾಗಿದ್ದರು. ಹಲವು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದರು. ಹಿಂದುತ್ವ ಪರ ಚಿಂತನೆ, ಆರ್​ಎಸ್​ಎಸ್​ಗೆ ಅಚಲ ನಿಷ್ಠೆಯಿಂದಲೂ ಶೋಭಾ ಕರಂದ್ಲಾಜೆ ಅವರನ್ನು ಗುರುತಿಸಲಾಗುತ್ತದೆ.

ಶೋಭಾ ಕರಂದ್ಲಾಜೆ ಅವರ ಪರಿಚಯ ಶೋಭಾ ಕರಂದ್ಲಾಜೆ ಅವರು ಮೇ 2014ರಿಂದಲೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಚಾರ್ವಾಕದಲ್ಲಿ 23ನೇ ಅಕ್ಟೋಬರ್ 1966ರಲ್ಲಿ ಜನನ. ಅಮ್ಮ ಪೂವಮ್ಮ, ಅಪ್ಪ ಮೋನಪ್ಪ ಗೌಡ. ಸಮಾಜ ಶಾಸ್ತ್ರ ಮತ್ತು ಸಾಮಾಜಿಕ ಕಾರ್ಯ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರದ ಅತ್ಯಂತ ಪರಿಚಿತ ನಗು ಮುಖ ಶೋಭಾ ಕರಂದ್ಲಾಜೆ ಅವರದು. ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನಿಂದ ಬಿಎ ಪದವಿ ಮುಗಿಸಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸಮಾಜಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದಾರೆ.

ದಬ್ಬಾಳಿಕೆಯ ಸಂಪ್ರದಾಯಗಳ ವಿರುದ್ಧ ಸೆಟೆದು ನಿಲ್ಲುವ ಮನೋಭಾವವು ಶೋಭಾ ಕರಂದ್ಲಾಜೆಗೆ ಮುಂಚಿನಿಂದಲೇ ಇತ್ತು. ಅವರು ಬಹಳ ಚಿಕ್ಕ ವಯಸ್ಸಿನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಸೇರಿದರು. ಸಂಘ ಪರಿವಾರದ ಪೂರ್ಣಾವಧಿ ಕಾರ್ಯಕರ್ತೆಯಾದರು.

ಶೋಭಾ ಕರಂದ್ಲಾಜೆ ಅವರ ರಾಜಕೀಯ ಪಯಣಕ್ಕೆ ಪ್ರೇರೇಪಿಸಿದ ಅನೇಕ ಆದರ್ಶಗಳಲ್ಲಿ, ಮಹಿಳಾ ಸಬಲೀಕರಣವು ಪ್ರಮುಖವಾದುದು. ಬದಲಾವಣೆಯನ್ನು ಬಯಸುವ ಗ್ರಾಮೀಣ ಮಹಿಳೆಯರಿಗೆ ಪ್ರೋತ್ಸಾಹ ನೀಡಲು ಅವರು ಸದಾ ಶ್ರಮಿಸುತ್ತಿದ್ದಾರೆ. ಅವರ ರಾಜಕೀಯ ಮತ್ತು ವೈಯಕ್ತಿಕ ಬೆಳವಣಿಗೆಯು ಗ್ರಾಮೀಣ ಭಾರತೀಯ ಮಹಿಳೆಯೊಬ್ಬರು ಪ್ರಮುಖ ನಾಯಕಿಯಾಗಲು ಸಮರ್ಥರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ.

(Shobha Karandlaje Deletes All Her Tweets After Sworn in as Central Minister)

ಇದನ್ನೂ ಓದಿ: Shobha Karandlaje: ನಗುಮುಖದ ಗಟ್ಟಿಗಿತ್ತಿ, ಹಿಂದುತ್ವ ಪರ ಚಿಂತನೆಯ ಮಹಿಳಾ ದನಿ ಶೋಭಾ ಕರಂದ್ಲಾಜೆ

ಇದನ್ನೂ ಓದಿ: ಶೋಭಾ ಕರಂದ್ಲಾಜೆಗಿಂತಲೂ ಮೊದಲು ಕೇಂದ್ರದಲ್ಲಿ ಮಂತ್ರಿಗಿರಿ ಪಡೆದ ಕರ್ನಾಟಕದ ಮಹಿಳಾ ರಾಜಕಾರಣಿಗಳು ಇವರು..

Published On - 9:42 pm, Wed, 7 July 21

Follow Us
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ