AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿಗೆ ಕಾಶ್ಮೀರ, ಪಾಕಿಸ್ತಾನದ ಉಗ್ರರು ಬಂದಿದ್ದಾರಾ? ಸಂಸದೆ ಶೋಭಾಗೆ ಈ ಡೌಟು ಯಾಕೆ ಬಂತು ಅಂದ್ರೆ..

ಮಂಗಳೂರಿಗೆ ಕಾಶ್ಮೀರ, ಪಾಕಿಸ್ತಾನದ ಉಗ್ರರು ಬಂದಿದ್ದಾರಾ? ಗೋಡೆ ಮೇಲೆ ಬರೆದಿರುವವರು ಯಾರೆಂದು ಪತ್ತೆ ಹಚ್ಚಬೇಕು ಎಂದು ಮಂಗಳೂರಲ್ಲಿ ಲಷ್ಕರ್​ ಉಗ್ರ ಸಂಘಟನೆ ಪರ ಬರಹ ವಿಚಾರವಾಗಿ ಉಡುಪಿಯಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿಗೆ ಕಾಶ್ಮೀರ, ಪಾಕಿಸ್ತಾನದ ಉಗ್ರರು ಬಂದಿದ್ದಾರಾ? ಸಂಸದೆ ಶೋಭಾಗೆ ಈ ಡೌಟು ಯಾಕೆ ಬಂತು ಅಂದ್ರೆ..
ಶೋಭಾ ಕರಂದ್ಲಾಜೆ (ಸಂಗ್ರಹ ಚಿತ್ರ)
KUSHAL V
|

Updated on:Nov 27, 2020 | 6:14 PM

Share

ಉಡುಪಿ: ಮಂಗಳೂರಿಗೆ ಕಾಶ್ಮೀರ, ಪಾಕಿಸ್ತಾನದ ಉಗ್ರರು ಬಂದಿದ್ದಾರಾ? ಗೋಡೆ ಮೇಲೆ ಬರೆದಿರುವವರು ಯಾರೆಂದು ಪತ್ತೆ ಹಚ್ಚಬೇಕು ಎಂದು ಮಂಗಳೂರಲ್ಲಿ ಲಷ್ಕರ್​ ಉಗ್ರ ಸಂಘಟನೆ ಪರ ಬರಹ ವಿಚಾರವಾಗಿ ಉಡುಪಿಯಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

ಇವರು ಮಂಗಳೂರಿನವರಾ? ಕೇರಳದವರಾ? ಕಾಶ್ಮೀರಿಗಳಾ? ಅವರು ಯಾರೆಂದು ರಾಜ್ಯ ಸರ್ಕಾರವೇ ಕಂಡುಹಿಡಿಯಬೇಕು. ಗೃಹ ಇಲಾಖೆ ತಕ್ಷಣ ಕಟ್ಟೆಚ್ಚರ ವಹಿಸಬೇಕೆಂದು ಒತ್ತಾಯ ಮಾಡುತ್ತೇನೆ. ಇದರ ಬಗ್ಗೆ ಕೇಂದ್ರ ಗೃಹ ಸಚಿವರು ಗಮನ ಹರಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಕಡಲ ನಗರಿಯಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹ, ಲಷ್ಕರ್ ಉಗ್ರರನ್ನ ಕರೆಸುವುದಾಗಿ ಬೆದರಿಕೆ..

‘ಗೋಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು’ ಗೋವುಗಳನ್ನು ಅಮಾನವೀಯವಾಗಿ ಸಾಗಿಸಲಾಗುತ್ತಿದೆ. ಅಂತಹವರಿಗೆ ಕಠಿಣ ಶಿಕ್ಷೆ ಕೊಡುವಂಥ ಕಾನೂನು ಬರಬೇಕು. ಮುಂದಿನ ವಿಧಾನಸಭೆ ಅಧಿವೇಶವನದಲ್ಲಿ ಕಾಯ್ದೆ ಜಾರಿಯಾಗಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಗೋಹತ್ಯೆ ನಿಷೇಧ ಕಾನೂನು ನಮ್ಮ ಹಳೆಯ ಕಾನೂನು. 2008 ರಲ್ಲೂ ಈ ಕಾನೂನನ್ನು ನಾವು‌‌ ಮಾಡಿದ್ದೆವು. ಆದರೆ ಅಂದಿನ ರಾಜ್ಯಪಾಲರು ಅದನ್ನು ತಿರಸ್ಕರಿಸಿದ್ದರು. ಗೋಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು ಎಂದು ಹೇಳಿದರು.

‘ಲವ್ ಜಿಹಾದ್ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಅನ್ಯಾಯವಾಗ್ತಿದೆ’ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿ ಇದರ ಬಗ್ಗೆ ಸಮಗ್ರವಾದ ತನಿಖೆಯಾಗಬೇಕೆಂದು ಆಗ್ರಹಿಸುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಲವ್ ಜಿಹಾದ್ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಅನ್ಯಾಯವಾಗ್ತಿದೆ. ಹೆಣ್ಣುಮಕ್ಕಳಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕಿದೆ. ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ ಮಾಡಲಿದೆ. ರಾಜ್ಯ ಸರ್ಕಾರ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Published On - 6:09 pm, Fri, 27 November 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?