AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡಾಪ್ಲರ್ ವೆದರ್​ ರಾಡಾರ್​ ಸ್ಥಾಪಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಶೋಭಾ ಕರಂದ್ಲಾಜೆ ಮನವಿ

ಬೆಂಗಳೂರಿನಲ್ಲಿ ಹವಾಮಾನದ ಮುನ್ಸೂಚನೆಯಿಲ್ಲದೆ ಅವಘಡ ಸಂಭವಿಸುತ್ತಿವೆ. ಹೆಚ್ಚಿನ ಮಳೆ‌, ದಿಢೀರ್ ಪ್ರವಾಹ ಪರಿಸ್ಥಿತಿಯಿಂದ‌ ಜನರು ತೊಂದರೆಗೆ ಈಡಾಗುತ್ತಿದ್ದಾರೆ. ಪ್ರತಿಕೂಲತೆ ತಗ್ಗಿಸಲು ಸುಧಾರಿತ ಹವಾಮಾನ ಮುನ್ಸೂಚನೆ ವ್ಯವಸ್ಥೆ ಬೇಕಿದೆ. ಹೀಗಾಗಿ ಡಾಪ್ಲರ್ ವೆದರ್ ರಾಡಾರ್ ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಕೇಂದ್ರದ ಎಂಎಸ್ಎಂಇ & ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಡಾಪ್ಲರ್ ವೆದರ್​ ರಾಡಾರ್​ ಸ್ಥಾಪಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಶೋಭಾ ಕರಂದ್ಲಾಜೆ ಮನವಿ
ಬೆಂಗಳೂರಿನಲ್ಲಿ ಡಾಪ್ಲರ್ ವೆದರ್​ ರಾಡಾರ್​ ಸ್ಥಾಪಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಶೋಭಾ ಕರಂದ್ಲಾಜೆ ಮನವಿ
ಗಂಗಾಧರ​ ಬ. ಸಾಬೋಜಿ
|

Updated on: Jul 01, 2024 | 7:54 PM

Share

ಬೆಂಗಳೂರು, ಜುಲೈ 01: ಬೆಂಗಳೂರಿನಲ್ಲಿ ಡಾಪ್ಲರ್ ವೆದರ್​ ರಾಡಾರ್​ (Doppler Weather Radar) ಸ್ಥಾಪಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಕೇಂದ್ರದ ಎಂಎಸ್ಎಂಇ & ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮನವಿ ಮಾಡಿದ್ದಾರೆ. ಬೆಂಗಳೂರು ಮಹಾನಗರ ಸಿಲಿಕಾನ್ ವ್ಯಾಲಿ ಎಂದೇ ಹೆಸರಾಗಿದೆ. ಡಾಪ್ಲರ್ ವೆದರ್ ರಾಡಾರ್ ಸ್ಪಾಪಿಸಲು ಬೆಂಗಳೂರಿನ ವ್ಯವಸ್ಥೆ ಪೂರಕವಾಗಿದೆ. ಹೀಗಾಗಿ ಡಾಪ್ಲರ್ ವೆದರ್ ರಾಡರ್ ಸ್ಥಾಪನೆ ಮಾಡುವಂತೆ ಪತ್ರ ಬರೆದಿದ್ದಾರೆ.

ನಗರದಲ್ಲಿ ಹವಾಮಾನದ ಮುನ್ಸೂಚನೆಯಿಲ್ಲದೆ ಅವಘಡ ಸಂಭವಿಸುತ್ತಿವೆ. ಹೆಚ್ಚಿನ ಮಳೆ‌, ದಿಢೀರ್ ಪ್ರವಾಹ ಪರಿಸ್ಥಿತಿಯಿಂದ‌ ಜನರು ತೊಂದರೆಗೆ ಈಡಾಗುತ್ತಿದ್ದಾರೆ. ಪ್ರತಿಕೂಲತೆ ತಗ್ಗಿಸಲು ಸುಧಾರಿತ ಹವಾಮಾನ ಮುನ್ಸೂಚನೆ ವ್ಯವಸ್ಥೆ ಬೇಕಿದೆ. ಹೀಗಾಗಿ ಡಾಪ್ಲರ್ ವೆದರ್ ರಾಡಾರ್ ಸ್ಥಾಪಿಸುವುದು ಅಗತ್ಯವಾಗಿದೆ. ರಾಡಾರ್ ಸ್ಥಾಪಿಸಲು ತಮ್ಮ ಸಚಿವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಿ ಎಂದು ಮನವಿ ಮಾಡಿದ್ದಾರೆ.

ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್​ 

ಡಾಪ್ಲರ್ ವೆದರ್ ರಾಡಾರ್ ಹೊಂದಲು ಸೂಕ್ತವೆಂದು ಪರಿಗಣಿಸಲಾಗಿದೆ, ಇದು ಹವಾಮಾನ ಮುನ್ಸೂಚನೆಗಳ ನಿಖರತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ, ಇದರಿಂದಾಗಿ ಗುಡುಗು, ಭಾರೀ ಮಳೆ ಮತ್ತು ಚಂಡಮಾರುತಗಳಂತಹ ತೀವ್ರ ಹವಾಮಾನ ಪರಿಸ್ಥಿತಿಗಳ ಮುಂಚಿನ ಎಚ್ಚರಿಕೆಗಳನ್ನು ನೀಡುತ್ತದೆ. ಇದಲ್ಲದೆ, ಈ ವ್ಯವಸ್ಥೆಯು ಕರ್ನಾಟಕದ ಜನರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುತ್ತದೆ. ಜೊತೆಗೆ ಇದು ರಾಜ್ಯ ಮೂಲಸೌಕರ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ರಕ್ಷಿಸುತ್ತದೆ. ಹಾಗಾಗಿ ಇದು ಪ್ರದೇಶ ಮತ್ತು ರಾಷ್ಟ್ರಕ್ಕೆ ಪ್ರಮುಖವಾಗಿದೆ.

ಇದನ್ನೂ ಓದಿ: ಕೇಂದ್ರ ಜಾರಿಗೆ ತಂದಿರುವ ಹೊಸ ಕಾನೂನುಗಳಿಗೆ ತಿದ್ದುಪಡಿ ತರಲು ಸಿದ್ದರಾಮಯ್ಯ ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ಈ ರಾಡಾರ್‌ನ ಸ್ಥಾಪನೆಯು ಅಸ್ತಿತ್ವದಲ್ಲಿರುವ ಹವಾಮಾನ ಮೂಲಸೌಕರ್ಯಕ್ಕೆ ಪೂರಕವಾಗಿದೆ ಮತ್ತು ಕರ್ನಾಟಕದಲ್ಲಿ ಹವಾಮಾನ ಮೇಲ್ವಿಚಾರಣಾ ವ್ಯವಸ್ಥೆಗಳ ಹೆಚ್ಚು ಸಮಗ್ರ ಜಾಲವನ್ನು ಒದಗಿಸುತ್ತದೆ. ಇದಲ್ಲದೆ, ಈ ಉಪಕ್ರಮವು ಸಾಮಾಜಿಕ ಪ್ರಯೋಜನ ಮತ್ತು ವಿಪತ್ತು ನಿರ್ವಹಣೆಗಾಗಿ ವೈಜ್ಞಾನಿಕ ಪ್ರಗತಿಯನ್ನು ನಿಯಂತ್ರಿಸುವ ನಮ್ಮ ರಾಷ್ಟ್ರದ ಬದ್ಧತೆಗೆ ಹೊಂದಿಕೆಯಾಗುತ್ತದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ