ಬೆಂಗಳೂರಿನಲ್ಲಿ ಡಾಪ್ಲರ್ ವೆದರ್​ ರಾಡಾರ್​ ಸ್ಥಾಪಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಶೋಭಾ ಕರಂದ್ಲಾಜೆ ಮನವಿ

ಬೆಂಗಳೂರಿನಲ್ಲಿ ಹವಾಮಾನದ ಮುನ್ಸೂಚನೆಯಿಲ್ಲದೆ ಅವಘಡ ಸಂಭವಿಸುತ್ತಿವೆ. ಹೆಚ್ಚಿನ ಮಳೆ‌, ದಿಢೀರ್ ಪ್ರವಾಹ ಪರಿಸ್ಥಿತಿಯಿಂದ‌ ಜನರು ತೊಂದರೆಗೆ ಈಡಾಗುತ್ತಿದ್ದಾರೆ. ಪ್ರತಿಕೂಲತೆ ತಗ್ಗಿಸಲು ಸುಧಾರಿತ ಹವಾಮಾನ ಮುನ್ಸೂಚನೆ ವ್ಯವಸ್ಥೆ ಬೇಕಿದೆ. ಹೀಗಾಗಿ ಡಾಪ್ಲರ್ ವೆದರ್ ರಾಡಾರ್ ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಕೇಂದ್ರದ ಎಂಎಸ್ಎಂಇ & ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಡಾಪ್ಲರ್ ವೆದರ್​ ರಾಡಾರ್​ ಸ್ಥಾಪಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಶೋಭಾ ಕರಂದ್ಲಾಜೆ ಮನವಿ
ಬೆಂಗಳೂರಿನಲ್ಲಿ ಡಾಪ್ಲರ್ ವೆದರ್​ ರಾಡಾರ್​ ಸ್ಥಾಪಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಶೋಭಾ ಕರಂದ್ಲಾಜೆ ಮನವಿ

Updated on: Jul 01, 2024 | 7:54 PM

ಬೆಂಗಳೂರು, ಜುಲೈ 01: ಬೆಂಗಳೂರಿನಲ್ಲಿ ಡಾಪ್ಲರ್ ವೆದರ್​ ರಾಡಾರ್​ (Doppler Weather Radar) ಸ್ಥಾಪಿಸುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ಗೆ ಕೇಂದ್ರದ ಎಂಎಸ್ಎಂಇ & ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮನವಿ ಮಾಡಿದ್ದಾರೆ. ಬೆಂಗಳೂರು ಮಹಾನಗರ ಸಿಲಿಕಾನ್ ವ್ಯಾಲಿ ಎಂದೇ ಹೆಸರಾಗಿದೆ. ಡಾಪ್ಲರ್ ವೆದರ್ ರಾಡಾರ್ ಸ್ಪಾಪಿಸಲು ಬೆಂಗಳೂರಿನ ವ್ಯವಸ್ಥೆ ಪೂರಕವಾಗಿದೆ. ಹೀಗಾಗಿ ಡಾಪ್ಲರ್ ವೆದರ್ ರಾಡರ್ ಸ್ಥಾಪನೆ ಮಾಡುವಂತೆ ಪತ್ರ ಬರೆದಿದ್ದಾರೆ.

ನಗರದಲ್ಲಿ ಹವಾಮಾನದ ಮುನ್ಸೂಚನೆಯಿಲ್ಲದೆ ಅವಘಡ ಸಂಭವಿಸುತ್ತಿವೆ. ಹೆಚ್ಚಿನ ಮಳೆ‌, ದಿಢೀರ್ ಪ್ರವಾಹ ಪರಿಸ್ಥಿತಿಯಿಂದ‌ ಜನರು ತೊಂದರೆಗೆ ಈಡಾಗುತ್ತಿದ್ದಾರೆ. ಪ್ರತಿಕೂಲತೆ ತಗ್ಗಿಸಲು ಸುಧಾರಿತ ಹವಾಮಾನ ಮುನ್ಸೂಚನೆ ವ್ಯವಸ್ಥೆ ಬೇಕಿದೆ. ಹೀಗಾಗಿ ಡಾಪ್ಲರ್ ವೆದರ್ ರಾಡಾರ್ ಸ್ಥಾಪಿಸುವುದು ಅಗತ್ಯವಾಗಿದೆ. ರಾಡಾರ್ ಸ್ಥಾಪಿಸಲು ತಮ್ಮ ಸಚಿವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಿ ಎಂದು ಮನವಿ ಮಾಡಿದ್ದಾರೆ.

ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್​ 

ಡಾಪ್ಲರ್ ವೆದರ್ ರಾಡಾರ್ ಹೊಂದಲು ಸೂಕ್ತವೆಂದು ಪರಿಗಣಿಸಲಾಗಿದೆ, ಇದು ಹವಾಮಾನ ಮುನ್ಸೂಚನೆಗಳ ನಿಖರತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ, ಇದರಿಂದಾಗಿ ಗುಡುಗು, ಭಾರೀ ಮಳೆ ಮತ್ತು ಚಂಡಮಾರುತಗಳಂತಹ ತೀವ್ರ ಹವಾಮಾನ ಪರಿಸ್ಥಿತಿಗಳ ಮುಂಚಿನ ಎಚ್ಚರಿಕೆಗಳನ್ನು ನೀಡುತ್ತದೆ. ಇದಲ್ಲದೆ, ಈ ವ್ಯವಸ್ಥೆಯು ಕರ್ನಾಟಕದ ಜನರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುತ್ತದೆ. ಜೊತೆಗೆ ಇದು ರಾಜ್ಯ ಮೂಲಸೌಕರ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ರಕ್ಷಿಸುತ್ತದೆ. ಹಾಗಾಗಿ ಇದು ಪ್ರದೇಶ ಮತ್ತು ರಾಷ್ಟ್ರಕ್ಕೆ ಪ್ರಮುಖವಾಗಿದೆ.

ಇದನ್ನೂ ಓದಿ: ಕೇಂದ್ರ ಜಾರಿಗೆ ತಂದಿರುವ ಹೊಸ ಕಾನೂನುಗಳಿಗೆ ತಿದ್ದುಪಡಿ ತರಲು ಸಿದ್ದರಾಮಯ್ಯ ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ಈ ರಾಡಾರ್‌ನ ಸ್ಥಾಪನೆಯು ಅಸ್ತಿತ್ವದಲ್ಲಿರುವ ಹವಾಮಾನ ಮೂಲಸೌಕರ್ಯಕ್ಕೆ ಪೂರಕವಾಗಿದೆ ಮತ್ತು ಕರ್ನಾಟಕದಲ್ಲಿ ಹವಾಮಾನ ಮೇಲ್ವಿಚಾರಣಾ ವ್ಯವಸ್ಥೆಗಳ ಹೆಚ್ಚು ಸಮಗ್ರ ಜಾಲವನ್ನು ಒದಗಿಸುತ್ತದೆ. ಇದಲ್ಲದೆ, ಈ ಉಪಕ್ರಮವು ಸಾಮಾಜಿಕ ಪ್ರಯೋಜನ ಮತ್ತು ವಿಪತ್ತು ನಿರ್ವಹಣೆಗಾಗಿ ವೈಜ್ಞಾನಿಕ ಪ್ರಗತಿಯನ್ನು ನಿಯಂತ್ರಿಸುವ ನಮ್ಮ ರಾಷ್ಟ್ರದ ಬದ್ಧತೆಗೆ ಹೊಂದಿಕೆಯಾಗುತ್ತದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us