AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಪ್ರಿಯರಿಗೆ ಶಾಕ್, ಬಿಯರ್​ ಬೆಲೆ ಮತ್ತೊಮ್ಮೆ ಏರಿಕೆ

ಮದ್ಯಪಾನ ಆರೋಗ್ಯ ಹಾನಿಕಾರ ಅಂದ್ರೂ ಮದ್ಯ ಕುಡಿಯುವರ ಸಂಖ್ಯೆ ಕಡಿಮೆಯಾಗಿಲ್ಲ. ಬಿಯರ್​ ಕುಡಿಯುವವರಿಗೆ ಉತ್ಪಾದನಾ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ. ಒಂದು ತಿಂಗಳ ಹಿಂದೆಯಷ್ಟೆ ಬಿಯರ್​ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೆ ಬಿಯರ್ ಬೆಲೆ ಏರಿಕೆಯಾಗಿದೆ.

ಮದ್ಯ ಪ್ರಿಯರಿಗೆ ಶಾಕ್, ಬಿಯರ್​ ಬೆಲೆ ಮತ್ತೊಮ್ಮೆ ಏರಿಕೆ
ಬಿಯರ್​
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jul 30, 2024 | 11:08 AM

Share

ಬೆಂಗಳೂರು, ಜುಲೈ 30: ರಾಜ್ಯದಲ್ಲಿ ಬಿಯರ್ (Beer) ಬೆಲೆ 10 ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಸಿದ್ದವು. ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಮತ್ತೆ ದರ ಏರಿಕೆ ಮಾಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಸರ್ಕಾರ (Karnataka Government) ಅಧಿಕಾರಕ್ಕೆ ಬಂದ ಮೇಲೆ ಬಿಯರ್ ದರ 50ರಿಂದ 60 ರೂ.ವರೆಗೆ ಏರಿಕೆಯಾಗಿದೆ.

ಸರ್ಕಾರ ಈ ಹಿಂದೆ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಆ ನಂತರ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಿಯರ್ ಕಂಪನಿಗಳು ಫೆಬ್ರವರಿ ತಿಂಗಳಲ್ಲಿ ಬಿಯರ್​ ಬೆಲೆ 10 ರೂ.ವರೆಗೆ ಏರಿಕೆ ಮಾಡಿತ್ತು. ಈಗ ಕಂಪನಿಗಳು ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಬಿಯರ್ ದರ ಏರಿಕೆ ಮಾಡಿವೆ. ಈ ಮೂಲಕ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 50 ರಿಂದ 60 ರೂ. ವರೆಗೆ ಹೆಚ್ಚಳವಾದಂತಾಗಿದೆ.

ಕೆಲವು ಕಂಪನಿಗಳ ಬಿಯರ್​ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರದಿಂದ ಜಾರಿಯಾಗಲಿದೆ. ಎಲ್ಲ ಬ್ರ್ಯಾಂಡ್​ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ.

ಇದನ್ನೂ ಓದಿ: ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ ಬರೆ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕೆ ಒಂದಲ್ಲಾ ಒಂದು ವಸ್ತುಗಳು ಏರಿಕೆಯಾಗುತ್ತಲೇ ಬಂದಿವೆ. ರಾಜ್ಯ ಸರ್ಕಾರ ಮೊದಲಿಗೆ ಮದ್ಯದ ಮೇಲಿನ ಸುಂಕ ಏರಿಸಿತ್ತು. ನಂತರ ವಾಣಿಜ್ಯ ವಾಹನಗಳ ಮೇಲಿನ ಸಾರಿಗೆ ಸೆಸ್​ ಅನ್ನು ಏರಿಕೆ ಮಾಡಿತ್ತು.

ನಂತರ ಮುಂದ್ರಾಂಕ ಶುಲ್ಕವನ್ನು ಏರಿಕೆ ಮಾಡಿತ್ತು. ನಂತರ ಬಿತ್ತನೆ ಬೀಜದ ಬೆಲೆ ಶೇ50-60 ರಷ್ಟು ಹೆಚ್ಚಳ ಮಾಡಿತ್ತು. ಪೆಟ್ರೋಲ್​ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳವಾಗಿತ್ತು. ತದನಂತರದಲ್ಲಿ ನಂದಿನಿ ಹಾಲಿನ ದರ 2 ರೂ. ಏರಿಕೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:32 am, Tue, 30 July 24

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್