AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಪ್ರಿಯರಿಗೆ ಶಾಕ್, ಬಿಯರ್​ ಬೆಲೆ ಮತ್ತೊಮ್ಮೆ ಏರಿಕೆ

ಮದ್ಯಪಾನ ಆರೋಗ್ಯ ಹಾನಿಕಾರ ಅಂದ್ರೂ ಮದ್ಯ ಕುಡಿಯುವರ ಸಂಖ್ಯೆ ಕಡಿಮೆಯಾಗಿಲ್ಲ. ಬಿಯರ್​ ಕುಡಿಯುವವರಿಗೆ ಉತ್ಪಾದನಾ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ. ಒಂದು ತಿಂಗಳ ಹಿಂದೆಯಷ್ಟೆ ಬಿಯರ್​ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೆ ಬಿಯರ್ ಬೆಲೆ ಏರಿಕೆಯಾಗಿದೆ.

ಮದ್ಯ ಪ್ರಿಯರಿಗೆ ಶಾಕ್, ಬಿಯರ್​ ಬೆಲೆ ಮತ್ತೊಮ್ಮೆ ಏರಿಕೆ
ಬಿಯರ್​
Kiran Surya
| Edited By: |

Updated on:Jul 30, 2024 | 11:08 AM

Share

ಬೆಂಗಳೂರು, ಜುಲೈ 30: ರಾಜ್ಯದಲ್ಲಿ ಬಿಯರ್ (Beer) ಬೆಲೆ 10 ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಸಿದ್ದವು. ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಮತ್ತೆ ದರ ಏರಿಕೆ ಮಾಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಸರ್ಕಾರ (Karnataka Government) ಅಧಿಕಾರಕ್ಕೆ ಬಂದ ಮೇಲೆ ಬಿಯರ್ ದರ 50ರಿಂದ 60 ರೂ.ವರೆಗೆ ಏರಿಕೆಯಾಗಿದೆ.

ಸರ್ಕಾರ ಈ ಹಿಂದೆ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಆ ನಂತರ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಿಯರ್ ಕಂಪನಿಗಳು ಫೆಬ್ರವರಿ ತಿಂಗಳಲ್ಲಿ ಬಿಯರ್​ ಬೆಲೆ 10 ರೂ.ವರೆಗೆ ಏರಿಕೆ ಮಾಡಿತ್ತು. ಈಗ ಕಂಪನಿಗಳು ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಬಿಯರ್ ದರ ಏರಿಕೆ ಮಾಡಿವೆ. ಈ ಮೂಲಕ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 50 ರಿಂದ 60 ರೂ. ವರೆಗೆ ಹೆಚ್ಚಳವಾದಂತಾಗಿದೆ.

ಕೆಲವು ಕಂಪನಿಗಳ ಬಿಯರ್​ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರದಿಂದ ಜಾರಿಯಾಗಲಿದೆ. ಎಲ್ಲ ಬ್ರ್ಯಾಂಡ್​ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ.

ಇದನ್ನೂ ಓದಿ: ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ ಬರೆ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕೆ ಒಂದಲ್ಲಾ ಒಂದು ವಸ್ತುಗಳು ಏರಿಕೆಯಾಗುತ್ತಲೇ ಬಂದಿವೆ. ರಾಜ್ಯ ಸರ್ಕಾರ ಮೊದಲಿಗೆ ಮದ್ಯದ ಮೇಲಿನ ಸುಂಕ ಏರಿಸಿತ್ತು. ನಂತರ ವಾಣಿಜ್ಯ ವಾಹನಗಳ ಮೇಲಿನ ಸಾರಿಗೆ ಸೆಸ್​ ಅನ್ನು ಏರಿಕೆ ಮಾಡಿತ್ತು.

ನಂತರ ಮುಂದ್ರಾಂಕ ಶುಲ್ಕವನ್ನು ಏರಿಕೆ ಮಾಡಿತ್ತು. ನಂತರ ಬಿತ್ತನೆ ಬೀಜದ ಬೆಲೆ ಶೇ50-60 ರಷ್ಟು ಹೆಚ್ಚಳ ಮಾಡಿತ್ತು. ಪೆಟ್ರೋಲ್​ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳವಾಗಿತ್ತು. ತದನಂತರದಲ್ಲಿ ನಂದಿನಿ ಹಾಲಿನ ದರ 2 ರೂ. ಏರಿಕೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:32 am, Tue, 30 July 24

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ