AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಪ್ರಿಯರಿಗೆ ಮತ್ತೊಮ್ಮೆ ಶಾಕಿಂಗ್ ನ್ಯೂಸ್, ಮೇ 15ರ ವರೆಗೆ ಓಪನ್ ಆಗಲ್ಲ ಬಾರ್

ಬೆಂಗಳೂರು: 2ನೇ ಹಂತದ ಲಾಕ್​ಡೌನ್ ಮೇ 3ಕ್ಕೆ ಅಂತ್ಯವಾಗಲಿದೆ. ಹೀಗಾಗಿ ಇಂದು ಪ್ರಧಾನಿ ಮೋದಿ ಸಿಎಂಗಳ ಜೊತೆ ಸಂವಾದ ನಡೆಸಿದ್ದಾರೆ. ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ರಾಜ್ಯದ ಅಭಿಪ್ರಾಯ ಹೇಳಿರುವ ಸಿಎಂ ಯಡಿಯೂರಪ್ಪ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಪ್ರಧಾನಿ ಜೊತೆ ವಿಡಿಯೋ ಸಂವಾದದ ವೇಳೆ ಮೇ 15ರವರೆಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಹೀಗಾಗಿ ಮೇ 15ರವರೆಗೆ ಎಣ್ಣೆ ಪ್ರಿಯರಿಗೆ […]

ಎಣ್ಣೆ ಪ್ರಿಯರಿಗೆ ಮತ್ತೊಮ್ಮೆ ಶಾಕಿಂಗ್ ನ್ಯೂಸ್, ಮೇ 15ರ ವರೆಗೆ ಓಪನ್ ಆಗಲ್ಲ ಬಾರ್
ಸಚಿವ ಹೆಚ್.ನಾಗೇಶ್
ಸಾಧು ಶ್ರೀನಾಥ್​
|

Updated on:Apr 27, 2020 | 2:00 PM

Share

ಬೆಂಗಳೂರು: 2ನೇ ಹಂತದ ಲಾಕ್​ಡೌನ್ ಮೇ 3ಕ್ಕೆ ಅಂತ್ಯವಾಗಲಿದೆ. ಹೀಗಾಗಿ ಇಂದು ಪ್ರಧಾನಿ ಮೋದಿ ಸಿಎಂಗಳ ಜೊತೆ ಸಂವಾದ ನಡೆಸಿದ್ದಾರೆ. ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ರಾಜ್ಯದ ಅಭಿಪ್ರಾಯ ಹೇಳಿರುವ ಸಿಎಂ ಯಡಿಯೂರಪ್ಪ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ಪ್ರಧಾನಿ ಜೊತೆ ವಿಡಿಯೋ ಸಂವಾದದ ವೇಳೆ ಮೇ 15ರವರೆಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಹೀಗಾಗಿ ಮೇ 15ರವರೆಗೆ ಎಣ್ಣೆ ಪ್ರಿಯರಿಗೆ ಎಣ್ಣೆ ಸಿಗುವುದು ಬಹುತೇಕ ಡೌಟ್ ಆಗಿದೆ.

ಮೇ 3 ಲಾಕ್​ಡೌನ್ ಮುಗಿದ ನಂತರ ಎಣ್ಣೆ ಕುಡಿದು ಮಜಾ ಮಾಡಬೇಕು ಎಂದುಕೊಂಡಿರುವವರಿಗೆ ಸಿಎಂ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಅಭಿಪ್ರಾಯ ಸಲ್ಲಿಕೆ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮೇ 15ರವರೆಗೆ ಲಾಕ್​ಡೌನ್ ಮುಂದುವರಿಸಲು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಸರ್ಕಾರ ಸಹಮತ ಸೂಚಿಸಿದೆ.

ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಮದ್ಯ ಮಾರಾಟಕ್ಕೆ ಸಂಬಂಧಿಸಿ ಮಾತನಾಡಿದ ಅಬಕಾರಿ ಸಚಿವ ಹೆಚ್.ನಾಗೇಶ್ ನಾನು ಮೇ 3ರ ಬಳಿಕ ಗ್ರೀನ್‌ಜೋನ್‌ನಲ್ಲಿ ಮದ್ಯ ಮಾರಾಟಕ್ಕೆ ಸಿಎಂ ಬಳಿ ಮನವಿ ಮಾಡಿದ್ದೇನೆ. ಆದ್ರೆ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಕೋಲಾರದಲ್ಲಿ ಪ್ರತಿಕ್ರಿಯಿಸಿದ್ದಾರೆ. https://www.facebook.com/Tv9Kannada/videos/305645457105158/

Published On - 1:52 pm, Mon, 27 April 20

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ