AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರಿಂಕೋರ್ಟ್​ ಸಿಜೆಐ ಮೇಲೆ ಶೂ ಎಸೆದಿದ್ದ ವಕೀಲನ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್

ಸುಪ್ರೀಂಕೋರ್ಟ್ ಸಿಜೆಐ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ. ವಕೀಲ ಭಕ್ತವತ್ಸಲ ಎಂಬುವವರ ನೀಡಿದ ದೂರಿನನ್ವಯ ರಾಕೇಶ್ ಕಿಶೋರ್ ವಿರುದ್ಧ ಬಿಎನ್ಎಸ್ 132, 133 ಅಡಿ ಪ್ರಕರಣ ದಾಖಲಿಸಲಾಗಿದೆ.

ಸುಪ್ರಿಂಕೋರ್ಟ್​ ಸಿಜೆಐ ಮೇಲೆ ಶೂ ಎಸೆದಿದ್ದ ವಕೀಲನ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್
ಸುಪ್ರೀಂಕೋರ್ಟ್ ಸಿಜೆಐ ಬಿ ಆರ್ ಗವಾಯಿ
ಪ್ರಸನ್ನ ಗಾಂವ್ಕರ್​
| Edited By: |

Updated on:Oct 08, 2025 | 10:19 PM

Share

ಬೆಂಗಳೂರು, ಅಕ್ಟೋಬರ್​ 08: ಸುಪ್ರೀಂಕೋರ್ಟ್ (Supreme Court) ಮುಖ್ಯನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್​​ ಶೂ ಎಸೆದ ಘಟನೆ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ನ್ಯಾಯಾಂಗ ವ್ಯವಸ್ಥೆಯನ್ನೇ ಅಲುಗಾಡಿಸಿದೆ. ಈ ಘಟನೆ ಎಲ್ಲೆಡೆ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಎಫ್​​ಐಆರ್​​ (FIR) ಒಂದು ದಾಖಲಾಗಿದೆ.

ರಾಕೇಶ್ ಕಿಶೋರ್ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ

ವಕೀಲ ಭಕ್ತವತ್ಸಲ ಎಂಬುವವರು ನಗರದ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವರ ದೂರಿನ ಅನ್ವಯ ವಕೀಲ ರಾಕೇಶ್ ಕಿಶೋರ್ ವಿರುದ್ಧ ಬಿಎನ್ಎಸ್ 132, 133ರ ಅಡಿ ಎಫ್ಐಆರ್ ದಾಖಲಾಗಿದೆ. ಸಿಜೆಐ ಬಿ.ಆರ್‌.ಗವಾಯಿ ಮೇಲೆ ಶೂ ಎಸೆದಿರುವ ರಾಕೇಶ್ ಕಿಶೋರ್ ವಿರುದ್ಧ ಸೂಕ್ತ ಕ್ರಮಕ್ಕೆ ಭಕ್ತವತ್ಸಲ ಒತ್ತಾಯಿಸಿದ್ದಾರೆ.

ಇದನ್ನು ವೈಯುಕ್ತಿಕವಾಗಿ ಖಂಡಿಸುತ್ತೇನೆ ಎಂದ ಮಲ್ಲಿಕಾರ್ಜುನ ಖರ್ಗೆ

ಘಟನೆ ಕುರಿತಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ವಕೀಲ ಎಂದು ಹೇಳಿಕೊಳ್ಳುವ ವ್ಯಕ್ತಿ ಸಿಜೆಐ ಮೇಲೆ ಚಪ್ಪಲಿ ಎಸೆದಿದ್ದಾನೆ. ಧರ್ಮದ ಹೆಸರಲ್ಲಿ ಆ ವ್ಯಕ್ತಿ ಸಿಜೆಐ ಮೇಲೆಯೇ ಚಪ್ಪಲಿ ಎಸೆದಿದ್ದಾನೆ. ಇದನ್ನು ವೈಯುಕ್ತಿಕವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಸಿಜೆಐ ಮೇಲೆ ಶೂ ಎಸೆತ ಕೇಸ್​​​: ಅ 16ರಂದು ವಿಜಯಪುರ ನಗರ ಬಂದ್​ಗೆ ಕರೆ

ಧರ್ಮದ ಹೆಸರಿನಲ್ಲಿ ಸಿಜೆಐಗೆ ಅವಮಾನ ಮಾಡುವ ಕೆಲಸ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಸಮಾಜವನ್ನು ಹಾಳು ಮಾಡಲು ಹೊರಟಿದ್ದಾರೆ. ಇಂತಹವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಗತಿಪರ ವಿಚಾರಧಾರೆ ಇರುವವರು ಮಾತ್ರ ಖಂಡನೆ ಮಾಡಿದ್ದಾರೆ. ಈ ಕೃತ್ಯವನ್ನು ಸಾರ್ವಜನಿಕವಾಗಿ ದೊಡ್ಡಮಟ್ಟದಲ್ಲಿ ಖಂಡಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ

ರಾಮನಗರ ಜಿಲ್ಲೆ ಚನ್ನಗಿರಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಕೃತ್ಯ ಖಂಡಿಸಲು ಪ್ರಧಾನಿ ಮೋದಿಗೆ 9 ಗಂಟೆ ಬೇಕಾಯಿತು. ಸಿಜೆಐ ದೊಡ್ಡ ಮನುಷ್ಯರು, ಹಾಗಾಗಿ ಹೋಗಲಿ ಬಿಡಿ ಎಂದರು. ಪ್ರಧಾನಿ ಹೊರತುಪಡಿಸಿ ಬಿಜೆಪಿಯ ಯಾರೂ ವಿರೋಧಿಸಲಿಲ್ಲ. ಶೂ ಎಸೆದ ಪ್ರಕರಣವನ್ನು ಬೆಂಬಲಿಸುವ ಜನರು ಇದ್ದಾರೆ ಅಂದರೆ ಎಂತಹ ವಿಪರ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಹಿನ್ನಲೆ

ಎಂದಿನಂತೆ ಸುಪ್ರೀಂಕೋರ್ಟ್ ವಿಚಾರಣೆ ಶುರುವಾಗಿತ್ತು. ಒಂದಷ್ಟು ಕಲಾಪ ಕೂಡ ನಡೆದಿತ್ತು. ಈ ವೇಳೆ ಸನಾತನ ಧರ್ಮಕ್ಕೆ ಅಪಮಾನವಾದರೆ ಸಹಿಸಲ್ಲ ಎಂದು ಏಕಾಏಕಿ ಘೋಷಣೆ ಕೂಗಿದ ರಾಕೇಶ್ ಕಿಶೋರ್ ಅನ್ನೋ 71 ವರ್ಷದ ವಕೀಲನೊಬ್ಬ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಪೀಠದತ್ತಲೇ ಬೂಟನ್ನ ಎಸೆದಿದ್ದ. ಆದರೆ ಆತ ಎಸೆದ ಶೂ ಸಿಜೆಐ ಪೀಠದ ಅಣತಿ ದೂರದಲ್ಲಿ ಬಿದ್ದಿದ್ದು, ಗವಾಯಿ ಅವರಿಗೆ ತಾಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:07 pm, Wed, 8 October 25

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ