AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುದಾನಿತ ಶಾಲೆಗಳಲ್ಲಿ 7 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ, ವಿದ್ಯಾರ್ಥಿಗಳಿಗೆ ಸಮಸ್ಯೆ: ವೈಹೆಚ್ ಹುಚ್ಚಯ್ಯ

ಕರ್ನಾಟಕ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ನೇಮಕಾತಿ ಮೂಲಕ ಶಿಕ್ಷಕರನ್ನು ನೇಮಿಸಲಾಗುತ್ತಿದೆ. ಆದರೆ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ಕೊರೆತೆಯಿದ್ದರೂ 2015 ರಿಂದ ನೇಮಕಾತಿಗೆ ಸರ್ಕಾರ ಅನುಮತಿ ನೀಡಿಲ್ಲ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆ ಅದ್ಯಕ್ಷ ವೈಹೆಚ್ ಹುಚ್ಚಯ್ಯ, ಕೋರ್ಟ್ ಆದೇಶವಿದ್ದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದರು.

ಅನುದಾನಿತ ಶಾಲೆಗಳಲ್ಲಿ 7 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ, ವಿದ್ಯಾರ್ಥಿಗಳಿಗೆ ಸಮಸ್ಯೆ: ವೈಹೆಚ್ ಹುಚ್ಚಯ್ಯ
ಕರ್ನಾಟಕದ ಅನುದಾನಿತ ಶಾಲೆಗಳಲ್ಲಿ 7 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ (ಸಾಂದರ್ಭಿಕ ಚಿತ್ರ)
Vinayak Hanamant Gurav
| Edited By: |

Updated on: Jan 12, 2024 | 2:26 PM

Share

ಬೆಂಗಳೂರು, ಜ.12: ರಾಜ್ಯದಲ್ಲಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ (Aided Educational Institution) ಏಳು ಸಾವಿರಕ್ಕೂ ಅಧಿಕ ಶಿಕ್ಷಕರ (Teachers) ಕೊರತೆ ಇದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆ ಅದ್ಯಕ್ಷ ವೈಹೆಚ್ ಹುಚ್ಚಯ್ಯ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋರ್ಟ್ ಆದೇಶವಿದ್ದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಶಿಕ್ಷಕರ ನೇಮಕ ಮಾಡಲು ಸರ್ಕಾರ 2015 ರಿಂದ ಅವಕಾಶ ನೀಡುತ್ತಿಲ್ಲ. 7,129 ಶಿಕ್ಷಕರ ಕೊರತೆ ನಮ್ಮನ್ನು ಕಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಇಂಗ್ಲಿಷ್ ಹಾಗೂ ಗಣಿತ ಶಿಕ್ಷಕರು ಇಲ್ಲದೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತುಂಬಾ ಹೊಡೆತ ನೀಡಿದೆ. ಶಿಕ್ಷಕರು ಇಲ್ಲದೇ ಅನೇಕ ಶಾಲೆಗಳು ಮುಚ್ಚಿವೆ. ಆದರೂ ಸರ್ಕಾರ ನಮಗೆ ಶಿಕ್ಷಕರ ನೇಮಕಕ್ಕೆ ಅವಕಾಶ ಮಾಡಿ ಕೊಟ್ಟಿಲ್ಲ ಎಂದರು.

ಇದನ್ನೂ ಓದಿ: ಬಾಕಿ ಸಂಬಳ ಸಿಕ್ಕಿಲ್ಲ ಎಂದು ಸ್ಮೃತಿ ಇರಾನಿಗೆ ದೂರು ನೀಡಿದ ಶಿಕ್ಷಕರು; ಅಧಿಕಾರಿಗೆ ಫೋನ್ ಮಾಡಿ ತರಾಟೆಗೆ ತೆಗೆದುಕೊಂಡ ಸಚಿವೆ

ಶಿಕ್ಷಣ ಮಸೂದೇ ಆಧಾರದ ಮೇಲೆ ಖಾಸಗಿಯಾಗಿ ಶಾಲೆ ನಡೆಸಲು ಅವಕಾಶ‌ ಇದೆ ಎಂದು ಹೇಳಿದ ಹುಚ್ಚಯ್ಯ, ನಿವೃತ್ತಿ ಹಾಗೂ ರಾಜೀನಾಮೆ ಹಾಗೂ ಮರಣದಿಂದ ಶಿಕ್ಷಕರ ಕೊರತೆಯಾಗಿದೆ. ನೇಮಕಾತಿಗೆ ಯಾವುದೇ ಬಜೆಟ್ ಅವಶ್ಯಕತೆ ಇಲ್ಲ. ನಾವು ನೇಮಕಾತಿ ವಿಚಾರವಾಗಿ ಹೈಕೋರ್ಟ್ ಹೋಗಿದ್ದೇವೆ. ಕೋರ್ಟ್ ಕೂಡ ಶಿಕ್ಷಕರ ನೇಮಕಾತಿ ಮಾಡಲು ಅನುಮತಿ ನೀಡಿದೆ. ಆದರೆ ಇಲಾಖೆ ಹಾಗೂ ಸರ್ಕಾರ ಯಾವುದೇ ತೀರ್ಮಾನ ಮಾಡಿಲ್ಲ ಎಂದರು.

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದು ಆರೋಪಿಸಿದ ಹುಚ್ಚಯ್ಯ, ಶಿಕ್ಷಣ ಇಲಾಖೆಯಿಂದ ಎಲ್ಲಾ ಸಂಸ್ಕಾರ ಬೆಳೆಯುತ್ತದೆ. ಆದರೆ ಶಿಕ್ಷಣ ಇಲಾಖೆಯಲ್ಲೂ ದುಡ್ಡು ನೀಡದೇ ಹೋದರೆ ಏನೂ ಆಗುವುದಿಲ್ಲ. ಇದನ್ನು ಮೊದಲು ಸರಿ ಪಡಿಸಬೇಕು. ಇಲ್ಲವಾದರೆ ನಾವು ಬೀದಿಗಿಳಿಯಲು ಸಜ್ಜಾಗಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ