AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ, ಐಸಿಯುನಲ್ಲಿರುವವರನ್ನ ಸ್ಥಳಾಂತರಿಸುವ ಅನಿವಾರ್ಯತೆ

ಬೆಂಗಳೂರಿನ ಪರಿಸ್ಥಿತಿ ಅಕ್ಷರಶಃ ಬಿಗಡಾಯಿಸಿದೆ. ಒಂದ್ಕಡೆ ಸಾಯೋರ ಸಂಖ್ಯೆ ಏರ್ತಾನೇ ಇದ್ರೆ, ಮತ್ತೊಂದ್ಕಡೆ ಬದೋಕದಕ್ಕೂ ಹೋರಾಟ ಮಾಡ್ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರೆತೆ ಕಾಡ್ತಾ ಇದ್ದು, ದೊಡ್ಡ ಮೆಡಿಕಲ್ ಡಿಸಾಸ್ಟರ್ ನಡೆದರೂ ನಡೀಬಹುದಾದ ಸನ್ನಿವೇಶ ನಿರ್ಮಾಣವಾಗಿದೆ.

ಸಿಲಿಕಾನ್ ಸಿಟಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ, ಐಸಿಯುನಲ್ಲಿರುವವರನ್ನ ಸ್ಥಳಾಂತರಿಸುವ ಅನಿವಾರ್ಯತೆ
ಆಕ್ಸಿಜನ್ ಸಿಲಿಂಡರ್ (ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
|

Updated on: Apr 18, 2021 | 7:11 AM

Share

ಬೆಂಗಳೂರು: ಕೊರೊನಾ ಸೋಂಕಿನ ಸ್ಫೋಟದ ಬೆನ್ನಲ್ಲೇ ಈಗ ಆಸ್ಪತ್ರೆಗಳಲ್ಲಿ ಆಕ್ಸಿಜನ್​ಗೆ ತತ್ವಾರ ಶುರುವಾಗಿದೆ. ಹೆಮ್ಮಾರಿ ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದವರು, ಸಾವು ಬದುಕಿನ ಮಧ್ಯೆ ಹೊರಾಡ್ತಿದ್ದಾರೆ. ಉಸಿರಾಡೋಕೆ ಆಗದೇ, ಒದ್ದಾಡ್ತಿದ್ದಾರೆ. ಇದಕ್ಕೆಲ್ಲ ಕಾರಣ, ಒನ್ಸ್ ಅಗೇನ್ ಆಕ್ಸಿಜನ್ ಸಿಗದೇ ಇರೋದು.

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನಿಜ, ಬೆಂಗಳೂರಿನಲ್ಲಿ ಕೊರೊನಾ ಸೃಷ್ಟಿಸಿರುವ ಹಾವಳಿ ಅಷ್ಟಿಷ್ಟಲ್ಲ. ದಿಢೀರನೆ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ಗೆ ಡಿಮಾಂಡ್‌ ಹೆಚ್ಚಾಗಿದೆ. ಅದರಲ್ಲೂ ಕೆಲ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಗದೆ ಪರದಾಟ ಶುರುವಾಗಿದೆ. ಇದ್ರಿಂದಾಗಿ ತಮ್ಮ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಬೇರೆ ಆಸ್ಪತ್ರೆಗೆ ರವಾನಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಮತ್ತೊಂದೆಡೆ ಆಕ್ಸಿಜನ್‌ ಸಪ್ಲೈ ಮಾಡುವವರ ಬಳಿಗೆ ಹೋಗಿ ಕೇಳಿದ್ರೆ, ಅಲ್ಲಿ ಆಕ್ಸಿಜನ್‌ ಸಿಲಿಂಡರ್‌ಗಳು ಸಾಲುಗಟ್ಟಿ ನಿಂತಿವೆ. ಆದ್ರೆ ಬೇಡಿಕೆ ಬರುತ್ತಿರುವಷ್ಟು ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗದೆ ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ.

ಇಷ್ಟೆಲ್ಲಾ ಸಮಸ್ಯೆಯಿರುವಾಗ ಬೇರೆ ರಾಜ್ಯಗಳಿಂದಲೂ ಆಕ್ಸಿಜನ್‌ ಸಪ್ಲೈ ಆಗುವುದು ಅನುಮಾನ. ಸರ್ಕಾರ ಸ್ಟೀಲ್‌ ಕಂಪನಿಗಳಿಂದ ಆಕ್ಸಿಜನ್‌ ತರಿಸಿಕೊಳ್ಳಬಹುದು ಎಂಬ ಸಲಹೆಯನ್ನು ಗ್ಯಾಸ್‌ ಏಜೆನ್ಸಿಯವರು ನೀಡುತ್ತಿದ್ದಾರೆ. ಮತ್ತೊಂದೆಡೆ ಆಕ್ಸಿಜನ್ ಸಿಲಿಂಡರ್​ ಕೊರತೆ ಬಗ್ಗೆ ಸಚಿವ ಸುಧಾಕರ್​ಗೆ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಅಸೋಸಿಯೇಷನ್ ತುರ್ತು ಪತ್ರ ಬರೆದಿದೆ. ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್ ಕೊರತೆ ಕಾಡುತ್ತಿದೆ. ಆಕ್ಸಿಜನ್ ಸಪ್ಲೈಯರ್ಸ್​ ಪೂರೈಕೆ ಸ್ಥಗಿತಗೊಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿರುವ ಸರ್ಕಾರಿ ಕೊವಿಡ್ ಬೆಡ್​ ಭರ್ತಿಯಾಗಿದ್ದು, ಲೈಫ್ ಸೇವಿಂಗ್ ಆಕ್ಸಿಜನ್ ಸಪೋರ್ಟ್​ ಇಲ್ಲದೆ ಪರದಾಡುತ್ತಿದ್ದಾರೆ. ಈಗಲೇ ಕ್ರಮಕೈಗೊಳ್ಳದಿದ್ದರೆ ಮೆಡಿಕಲ್ ಡಿಸಾಸ್ಟರ್ ಆಗಲಿದೆ ಎಂದು ಎಚ್ಚರಿಸಿದೆ.

ಅಷ್ಟೇ ಅಲ್ಲ ಆಕ್ಸಿಜನ್ ಸಿಲಿಂಡರ್​ ಇಲ್ಲದಿದ್ದರೆ ರೋಗಿಗಳ ಪ್ರಾಣಕ್ಕೆ ಹಾನಿಯಾಗಲಿದೆ. ಹಾಗಾಗಿ ಕೂಡಲೇ ಕ್ರಮಕೈಗೊಳ್ಳುವಂತೆ ಫನಾ ಅಧ್ಯಕ್ಷ ಡಾ.ಪ್ರಸನ್ನ ಸಚಿವ ಡಾ.ಕೆ.ಸುಧಾಕರ್​ಗೆ ಪತ್ರ ಬರೆದಿದ್ದಾರೆ. ಆದ್ರೆ ಆಕ್ಸಿಜನ್ ಸಿಲಿಂಡರ್ ಸಮಸ್ಯೆ ಕುರಿತಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಕೇಂದ್ರ ಸರ್ಕಾರದಿಂದ ಜಂಬೋ ಸಿಲಿಂಡರ್‌ಗಳು ಬರುತ್ತವೆ ಎಂಬ ಆಶ್ವಾಸನೆ ನೀಡಿದ್ದಾರೆ.

ಉಸಿರಾಡಲು ತೊಂದರೆ ಅನುಭವಿಸುವವರಿಗೆ ಆಕ್ಸಿಜನ್‌ ಕೊಡಿಸುವುದು ಕೊರೊನಾ ಚಿಕಿತ್ಸೆಯ ಸಂದರ್ಭದಲ್ಲಿ ಅನಿವಾರ್ಯ. ಆದ್ರೆ ಸರಿಯಾದ ಸಮಯಕ್ಕೆ ಆಕ್ಸಿಜನ್‌ ಪೂರೈಕೆಯಲ್ಲಾಗಿರುವ ತೊಂದರೆಯನ್ನು ಸರ್ಕಾರ ಸರಿಪಡಿಸದಿದ್ದರೆ ಸಾವಿನ ಪ್ರಮಾಣ ಇನ್ನಷ್ಟು ಜಾಸ್ತಿಯಾಗುವುದರಲ್ಲಿ ಅನುಮಾನವೇ ಇಲ್ಲ. ಯಾವುದಕ್ಕೂ ನಿಮ್ಮ ಎಚ್ಚರಿಕೆಯಲ್ಲಿ ನೀವಿದ್ದು, ಕೊರೊನಾದಿಂದ ದೂರ ಉಳಿಯುುವುದೇ ಈಗಿರುವ ಏಕೈಕ ಪರಿಹಾರ.

ಇದನ್ನೂ ಓದಿ: ಕೇರಳ ಸರ್ಕಾರಿ ಆಸ್ಪತ್ರೆಗಳಿಗೆ ಭಾರತ್ ಪೆಟ್ರೋಲಿಯಂ ಸಂಸ್ಥೆಯಿಂದ ದಿನಕ್ಕೆ 1.5 ಟನ್ ಮೆಡಿಕಲ್​​ ಆಕ್ಸಿಜನ್​ ಪೂರೈಕೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?