AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತನಿಗೆ ಬೆಡ್ ನೀಡದಿದ್ದಕ್ಕೆ ಮಹಾವೀರ್ ಜೈನ್ ಆಸ್ಪತ್ರೆಗೆ ಶೋಕಾಸ್ ನೋಟಿಸ್ ಜಾರಿ

ಕೊರೊನಾ ಸೋಂಕಿತನಿಗೆ ಬೆಡ್ ನೀಡದೆ ಮಹಾವೀರ್ ಜೈನ್ ಆಸ್ಪತ್ರೆ ದರ್ಪ ಮೆರೆದಿದೆ. ಹಾಗೂ ಕೊರೊನಾ ಸೋಂಕಿತ ಆಸ್ಪತ್ರೆಗೆ ಹೋಗಿದ್ದ ವೇಳೆ ಮಹಾವೀರ್ ಜೈನ್ ಆಸ್ಪತ್ರೆ ಈತನಿಗೆ ಬೆಡ್ ನೀಡಲು ನಿರಾಕರಿಸಿದೆ. ಆಸ್ಪತ್ರೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಸೋಂಕಿತ ಮೃತಪಟ್ಟಿದ್ದಾನೆ.

ಕೊರೊನಾ ಸೋಂಕಿತನಿಗೆ ಬೆಡ್ ನೀಡದಿದ್ದಕ್ಕೆ ಮಹಾವೀರ್ ಜೈನ್ ಆಸ್ಪತ್ರೆಗೆ ಶೋಕಾಸ್ ನೋಟಿಸ್ ಜಾರಿ
ವಸಂತನಗರದಲ್ಲಿರುವ ಮಹಾವೀರ್ ಜೈನ್ ಆಸ್ಪತ್ರೆ
ಆಯೇಷಾ ಬಾನು
|

Updated on:Apr 11, 2021 | 1:09 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ. ಒಂದು ದಿನದ ಅಂತರದಲ್ಲಿ 2 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆಯಾಗುತ್ತಿವೆ. ಇಂತಹ ಸಮಯದಲ್ಲಿ ಕೊರೊನಾ ಸೋಂಕಿತನಿಗೆ ಬೆಡ್ ನೀಡದ ಹಿನ್ನೆಲೆಯಲ್ಲಿ ಬೆಂಗಳೂರಿನ ವಸಂತನಗರದಲ್ಲಿರುವ ಮಹಾವೀರ್ ಜೈನ್ ಆಸ್ಪತ್ರೆಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಕೊರೊನಾ ಸೋಂಕಿತನಿಗೆ ಬೆಡ್ ನೀಡದೆ ಮಹಾವೀರ್ ಜೈನ್ ಆಸ್ಪತ್ರೆ ದರ್ಪ ಮೆರೆದಿದೆ. ಹಾಗೂ ಕೊರೊನಾ ಸೋಂಕಿತ ಆಸ್ಪತ್ರೆಗೆ ಹೋಗಿದ್ದ ವೇಳೆ ಮಹಾವೀರ್ ಜೈನ್ ಆಸ್ಪತ್ರೆ ಈತನಿಗೆ ಬೆಡ್ ನೀಡಲು ನಿರಾಕರಿಸಿದೆ. ಆಸ್ಪತ್ರೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಸೋಂಕಿತ ಮೃತಪಟ್ಟಿದ್ದಾನೆ. ಹೀಗಾಗಿ 24 ಗಂಟೆಗಳ ಒಳಗೆ ವಿವರಣೆ ನೀಡುವಂತೆ ಬಿಬಿಎಂಪಿ CHOಆಸ್ಪತ್ರೆಗೆ ನೋಟಿಸ್ ನೀಡಿದ್ದಾರೆ. NDMAಯಡಿ ಆಸ್ಪತ್ರೆ ವಿರುದ್ಧ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ.

ಬನಶಂಕರಿ ಮೂಲದ ತಬರೇಜ್​ ಎಂಬ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಬೆಡ್ ಬ್ಲಾಕ್ ಮಾಡಿದ್ದರು. ಆದರೆ ಬೆಡ್ ಬ್ಲಾಕ್ ಆದರು ಕೂಡಾ ರೋಗಿಯನ್ನ ಅಡ್ಮಿಟ್ ಮಾಡಿಕೊಳ್ಳದೆ‌, ಸೂಕ್ತ ಚಿಕಿತ್ಸೆ ನೀಡದ ಕಾರಣ ಸೋಂಕಿತ ಮೃತಪಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ನಾಳೆಯೊಳಗೆ ಸೂಕ್ತ ಕಾರಣ ನೀಡದೆ ಹೋದರೆ ಆಸ್ಪತ್ರೆ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ನೋಟೀಸ್ ಜಾರಿ ಮಾಡಿದೆ.

ಇಂತಹ ಪ್ರಕರಣಗಳು ಇದೇ ಮೊದಲೇನಲ್ಲ ಈ ಹಿಂದೆಯೂ ಹಾಗೂ ಕೊರೊನಾದ ಮೊದಲ ಅಲೆಯ ಸಂದರ್ಭಗಳಲ್ಲೂ ನಡೆದಿದೆ. ಆದರೆ ಆಸ್ಪತ್ರೆ ಸಿಬ್ಬಂದಿಗೆ ಈ ರೀತಿ ಕೊರೊನಾ ಸೋಂಕಿತರನ್ನು ನಿರ್ಲಕ್ಷಿಸಿದರೆ ಅವರಿಗೆ ಚಿಕಿತ್ಸೆ ನೀಡುವುದಾದರೂ ಯಾರು. ಸಮಾಜದ ಸೇವೆಗೆಂದೇ ನಿಂತವರು ಹಣಕ್ಕಾಗಿ ಸೇವೆ ಮರೆತರೆ ಹೇಗೆ ಎಂಬುವುದೇ ಪ್ರಶ್ನೆಯಾಗಿದೆ. ಸರ್ಕಾರ ಇದೇ ರೀತಿ ಸೋಂಕಿತರಿಗೆ ಚಿಕಿತ್ಸೆ ನೀಡದೆ ದರ್ಪ ಮೆರೆಯುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಲ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೊನಾ ಸೋಂಕು

(Show Cause Notice Against Mahaveer Jain Hospital in Bengaluru)

Published On - 12:00 pm, Sun, 11 April 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?