AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳ ಮೂಲಕವೇ ಪೊಲೀಸರಿಗೆ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ತೋರಿಸಿ; ಭೌತಿಕ ದಾಖಲೆ ಅಗತ್ಯವಿಲ್ಲ

ಇನ್ನುಮುಂದೆ ಪೊಲೀಸರು ಕೂಡ ಭೌತಿಕವಾಗಿ ದಾಖಲಾತಿಗಳನ್ನು ತೋರಿಸುವಂತೆ ಒತ್ತಾಯ ಮಾಡುವಂತಿಲ್ಲ. ಪೊಲೀಸರಿಗೂ ಕೂಡ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಭೌತಿಕವಾಗಿ ತೋರಿಸುವಂತೆ ಒತ್ತಾಯ ಮಾಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ವಾಹನ ಸವಾರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳ ಮೂಲಕವೇ ಪೊಲೀಸರಿಗೆ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ತೋರಿಸಿ; ಭೌತಿಕ ದಾಖಲೆ ಅಗತ್ಯವಿಲ್ಲ
ಸಾಂದರ್ಭಿಕ ಚಿತ್ರ
TV9 Web
| Updated By: guruganesh bhat|

Updated on: Jul 08, 2021 | 10:47 PM

Share

ಬೆಂಗಳೂರು: ಕೇಂದ್ರ ಸರ್ಕಾರ ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳನ್ನು ಸಾರ್ವಜನಿಕರು ಬಳಸಬಹುದು. ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ಸೇರಿದಂತೆ ಹಲವು ದಾಖಲೆಗಳನ್ನು ಡಿಜಿ‌ ಲಾಕರ್​ನಲ್ಲಿ ತೋರಿಸಬಹುದು. ಇನ್ನುಮುಂದೆ ಭೌತಿಕ ಸ್ವರೂಪದಲ್ಲೇ ಅಗತ್ಯ ದಾಖಲಾತಿಗಳನ್ನು ಪೊಲೀಸರಿಗೆ ತೋರಿಸುವ ಅಗತ್ಯ ಇಲ್ಲ. ಡಿಜಿ ಲಾಕರ್ ಅಥವಾ ಎಂ ಪರಿವಾಹನ್ ನಲ್ಲಿ ತೋರಿಸಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಇನ್ನುಮುಂದೆ ಪೊಲೀಸರು ಕೂಡ ಭೌತಿಕವಾಗಿ ದಾಖಲಾತಿಗಳನ್ನು ತೋರಿಸುವಂತೆ ಒತ್ತಾಯ ಮಾಡುವಂತಿಲ್ಲ. ಪೊಲೀಸರಿಗೂ ಕೂಡ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಭೌತಿಕವಾಗಿ ತೋರಿಸುವಂತೆ ಒತ್ತಾಯ ಮಾಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ವಾಹನ ಸವಾರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಕರ್ನಾಟಕ ಹೈಕೋರ್ಟ್ ಆದೇಶ ಪಾಲಿಸಿದ ಬೆಂಗಳೂರು ಪೊಲೀಸರು; ಪತ್ರಿಕಾ ಪ್ರಕಟಣೆಗಳಲ್ಲಿ ಆರೋಪಿಯ ಹೆಸರು ಬಹಿರಂಗ ಇಲ್ಲ, ಫೋಟೊ ಬ್ಲರ್ ಜೂನ್ 23 ರಂದು ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ಶಾಖೆ ಘಟಕವು ಐಟಿ ವಲಯದ ಯುವಕರಿಗೆ ಮಾದಕ ದ್ರವ್ಯಗಳನ್ನು ಪೂರೈಸುವ ಕಾರ್ಯದಲ್ಲಿ ಭಾಗಿಯಾಗಿದ್ದ ಐದು ಜನರ ಬಂಧಿಸಿತ್ತು. ಇವರಿಂದ 30 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ, ಎಲ್‌ಎಸ್‌ಡಿ ಮತ್ತು ಹಶಿಶ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಆದಾಗ್ಯೂ ಆ ಪತ್ರಿಕಾ ಪ್ರಕಟಣೆಯಲ್ಲಿ ಬಂಧಿತ ವ್ಯಕ್ತಿಗಳ ಹೆಸರನ್ನು ನೀಡಿಲ್ಲ.

ಮರುದಿನ ನಕಲಿ ವಿದೇಶಿ ಕರೆನ್ಸಿ ವ್ಯವಹಾರದಲ್ಲಿ ಭಾಗಿಯಾಗಿದ್ದ ಮತ್ತು ವೀಸಾಗಳ ಅವಧಿ ಮೀರಿ ಭಾರತದಲ್ಲಿ ಹೆಚ್ಚು ದಿನಗಳ ಕಾಲಉಳಿದುಕೊಂಡಿದ್ದ ಇಬ್ಬರು ಕ್ಯಾಮರೂನಿಯನ್ನರ ಬಂಧನದ ಕುರಿತು ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದರು.ಈ ಬಾರಿಯೂ ಪತ್ರಿಕಾ ಪ್ರಕಟಣೆಯಲ್ಲಿ ಬಂಧಿತ ವ್ಯಕ್ತಿಗಳ ಹೆಸರು ಇರಲಿಲ್ಲ.

ಕಳೆದ ಹದಿನೈದು ದಿನಗಳಿಂದ ಬೆಂಗಳೂರು ಪೊಲೀಸರು ಕರ್ನಾಟಕ ಹೈಕೋರ್ಟ್‌ನ ಜೂನ್ 15 ರ ಆದೇಶದ ಮೇರೆಗೆ ಪತ್ರಿಕಾ ಪ್ರಕಟಣೆಗಳಲ್ಲಿ ಬಂಧಿತ ವ್ಯಕ್ತಿಗಳ ಹೆಸರುಗಳು ಮತ್ತು ಬ್ಲರ್ ಮಾಡಿದ ಫೋಟೊಗಳನ್ನು ಮಾತ್ರ ನೀಡಲು ಪ್ರಾರಂಭಿಸಿದ್ದಾರೆ. ಮಾಧ್ಯಮಗಳಿಗೆ ನೀಡುವ ಪ್ರಕಟಣೆಗಳಲ್ಲಿ ಶಂಕಿತರನ್ನು ಗುರುತಿಸುವುದನ್ನು ನಿಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: 

Big News: ರೈತರಿಗೆ ಎಪಿಎಂಸಿ ಮೂಲಕ 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, 23,123 ಕೋಟಿ ತುರ್ತು ಕೊವಿಡ್​ ಫಂಡ್ ಬಿಡುಗಡೆ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ

(Show police license RC book through Digilocker and Mparivahan App No physical record is required)

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ