AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ದಿನಕ್ಕೆ 15 ಲಕ್ಷ ಬಿಲ್ ಮಾಡಿದ ಬೆಂಗಳೂರು ಶ್ರೀ ಸಾಯಿ ಆಸ್ಪತ್ರೆ; ಆಕ್ರೋಶ ಹೊರಹಾಕಿದ ಮೃತ ವ್ಯಕ್ತಿಯ ಸಂಬಂಧಿಕರು

ಕಳೆದ 16 ದಿನಗಳ ಹಿಂದೆ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಶ್ರೀ ಸಾಯಿ ಆಸ್ಪತ್ರೆಗೆ ಹಾರೊಹಳ್ಳಿ ಗ್ರಾಮದ ಗಣೇಶ್ ಎಂಬ ಸೋಂಕಿತ ದಾಖಲಾಗಿದ್ದರು. ಮೂರು ದಿನದ ಹಿಂದೆ ಎಂದಿನಂತೆ ಸಂಬಂಧಿಕರ ಜೊತೆ ಮಾತನಾಡಿದ್ದ ಗಣೇಶ್ ಅದಾದ ನಂತರ ಆತ ಮನೆಯವರ ಜೊತೆ ಮಾತನಾಡಲು ಆಸ್ಪತ್ರೆ ಸಿಬ್ಬಂದಿ ಬಿಟ್ಟಿರಲಿಲ್ಲ.

16 ದಿನಕ್ಕೆ 15 ಲಕ್ಷ ಬಿಲ್ ಮಾಡಿದ ಬೆಂಗಳೂರು ಶ್ರೀ ಸಾಯಿ ಆಸ್ಪತ್ರೆ; ಆಕ್ರೋಶ ಹೊರಹಾಕಿದ ಮೃತ ವ್ಯಕ್ತಿಯ ಸಂಬಂಧಿಕರು
ಶ್ರೀ ಸಾಯಿ ಆಸ್ಪತ್ರೆ
TV9 Web
| Edited By: |

Updated on:Jun 03, 2021 | 12:40 PM

Share

ಆನೇಕಲ್: ಈಗಾಗಲೇ ದೇಶಾದ್ಯಂತ ಕೊರೊನಾ ತುರ್ತು ಪರಿಸ್ಥಿತಿಯಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಪಾಸಿಟಿವ್ ಬಂದಿರುವಂತಹ ಸೋಂಕಿತರ ವಿಚಾರದಲ್ಲಿ ಕೆಲ ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರ ಬಳಿ ಹಣವನ್ನು ಕಿತ್ತುಕೊಳ್ಳುತ್ತಿದ್ದಾರೆ. ಅದೇ ರೀತಿ ನಿನ್ನೆ (ಜೂನ್ 3) ಕೂಡಾ ಸೋಂಕಿತರೊಬ್ಬರ ಮೃತದೇಹ ನೀಡಲು ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಶ್ರೀ ಸಾಯಿ ಆಸ್ಪತ್ರೆ ಸುಮಾರು 15 ಲಕ್ಷ ಬಿಲ್ ಮಾಡಿದೆ.

ಕಳೆದ 16 ದಿನಗಳ ಹಿಂದೆ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಶ್ರೀ ಸಾಯಿ ಆಸ್ಪತ್ರೆಗೆ ಹಾರೊಹಳ್ಳಿ ಗ್ರಾಮದ ಗಣೇಶ್ ಎಂಬ ಸೋಂಕಿತ ದಾಖಲಾಗಿದ್ದರು. ಮೂರು ದಿನದ ಹಿಂದೆ ಎಂದಿನಂತೆ ಸಂಬಂಧಿಕರ ಜೊತೆ ಮಾತನಾಡಿದ್ದ ಗಣೇಶ್ ಅದಾದ ನಂತರ ಆತ ಮನೆಯವರ ಜೊತೆ ಮಾತನಾಡಲು ಆಸ್ಪತ್ರೆ ಸಿಬ್ಬಂದಿ ಬಿಟ್ಟಿರಲಿಲ್ಲ. ಅಷ್ಟರಲ್ಲಾಗಲೇ 6 ಲಕ್ಷ ಹಣ ಕಟ್ಟಿಸಿ ಕೊಂಡಿದ್ದ ಆಸ್ಪತ್ರೆ ಆಡಳಿತ ನಿನ್ನೆ ಬೆಳಗ್ಗೆ ಸಂಬಂಧಿಕರಿಗೆ ಕರೆ ಮಾಡಿ ಗಣೇಶ್ ತೀರಿಕೊಂಡಿದ್ದಾರೆ. 15 ಲಕ್ಷ ಬಿಲ್ ಆಗಿದೆ. ಉಳಿದ 9 ಲಕ್ಷ ಹಣ ನೀಡಿ ಮೃತದೇಹ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಕೂಡಲೆ ಸ್ಥಳಕ್ಕೆ ಬಂದ ಸಂಬಂಧಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸರಕಾರದ ಆದೇಶವನ್ನು ಸಹ ಲೆಕ್ಕಿಸದ ಆಡಳಿತ ಮಂಡಳಿ 15 ಲಕ್ಷ ಹಣ ಪೀಕಲು ಮುಂದಾಗಿದ್ದು, ಬಡ ಜನತೆಗೆ ಇದರಿಂದಾಗಿ ಸಾಕಷ್ಟು ತೊಂದರೆಯಾಗುತ್ತಿದೆ. ಸರಕಾರ ಈ ಕೂಡಲೆ ಆ ಆಸ್ಪತ್ರೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಎಂದು ಸಂಬಂಧಿಕರು ಒತ್ತಾಯಿಸಿದ್ದಾರೆ.

ಸರಕಾರದ ಆದೇಶದಂತೆ ಓರ್ವ ಸೋಂಕಿತನಿಗೆ ಒಂದು ದಿನಕ್ಕೆ ಹದಿನೈದು ಸಾವಿರಕ್ಕೂ ಮೀರದಂತೆ ಖಾಸಗಿ ಆಸ್ಪತ್ರೆಗಳು ಬಿಲ್ ಮಾಡಬೇಕು. ಆದರೆ ಈ ಆಸ್ಪತ್ರೆಯಲ್ಲಿ ಮಾತ್ರ ಕೇವಲ 16 ದಿನಗಳಲ್ಲಿ ಸುಮಾರು 15 ಲಕ್ಷ ಬಿಲ್ ಮಾಡಿದೆ. ಸರಕಾರ ಹಾಗೂ ಜನಪ್ರತಿನಿಧಿಗಳು ಇದುವರೆಗೂ ಇಂತಹ ವಿಷಯದಲ್ಲಿ ಚಕಾರ ತೆಗೆದಿಲ್ಲ. ಹೀಗಾದರೆ ಜನಸಾಮಾನ್ಯರ ಪಾಡು ಏನು ಎಂಬುದು ಮೃತರ ಸಂಬಂಧಿಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ

Corona Warriors: ನಮ್ಮದು ಶಮನವಾಗದ ನೋವು; ವೈದ್ಯರ ಮೇಲಿನ ದೌರ್ಜನ್ಯ ನಿರ್ಲಕ್ಷಿಸಬಹುದಾದಷ್ಟು ನಿಕೃಷ್ಟವಾಯಿತೇ?

ಕೊರೊನಾ ಭಯದಿಂದಲೇ ಇಡೀ ಕುಟುಂಬ ನಾಶ, ಜ್ವರ ಕಾಣಿಸಿಕೊಂಡಿದಕ್ಕೆ ಎಲ್ಲರೂ ಆತ್ಮಹತ್ಯೆಗೆ ಶರಣು

(Shri Sai Hospital in Bangalore has billed 15 lakhs for 16 days to corona infected)

Published On - 12:00 pm, Thu, 3 June 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!