AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shuchi Scheme: 19 ಲಕ್ಷ ವಿದ್ಯಾರ್ಥಿನಿಯರಿಗೆ ಶುಭ ಸುದ್ದಿ: ಕರ್ನಾಟಕದಲ್ಲಿ ಮತ್ತೆ ಆರಂಭವಾಯ್ತು ಶುಚಿ ಯೋಜನೆ

ರಾಜ್ಯದ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ `ಶುಚಿ ಯೋಜನೆ’ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬುಧವಾರ ಮರು ಚಾಲನೆ ನೀಡಿದ್ದಾರೆ. ಮುಟ್ಟಿನ ನೈರ್ಮಲ್ಯಕ್ಕಾಗಿ ಉಚಿತವಾಗಿ ಸ್ಯಾನಿಟರಿ ನ್ಯಾಪ್​ಕಿನ್​ಗಳನ್ನು ವಿತರಿಸುವ ಈ ಯೋಜನೆಯಿಂದ ಸುಮಾರು 19 ಲಕ್ಷ ವಿದ್ಯಾರ್ಥಿನಿಯರಿಗೆ ಪ್ರಯೋಜನವಾಗಲಿದೆ.

Shuchi Scheme: 19 ಲಕ್ಷ ವಿದ್ಯಾರ್ಥಿನಿಯರಿಗೆ ಶುಭ ಸುದ್ದಿ: ಕರ್ನಾಟಕದಲ್ಲಿ ಮತ್ತೆ ಆರಂಭವಾಯ್ತು ಶುಚಿ ಯೋಜನೆ
ಶುಚಿ ಯೋಜನೆಗೆ ಮತ್ತೆ ಚಾಲನೆImage Credit source: Karnataka Health Dept
Ganapathi Sharma
|

Updated on: Feb 29, 2024 | 6:43 AM

Share

ಬೆಂಗಳೂರು, ಫೆಬ್ರವರಿ 29: ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ, ಮುಟ್ಟಿನ ನೈರ್ಮಲ್ಯಕ್ಕೆ ಸಂಬಂಧಿಸಿದ ‘ಶುಚಿ ಯೋಜನೆ’ಯನ್ನು (Shuchi Scheme) ಕರ್ನಾಟಕ ಸರ್ಕಾರ (Karnataka Government) ಬುಧವಾರ ಪುನರಾರಂಭ ಮಾಡಿದೆ. ಇದರೊಂದಿಗೆ, ಶಾಲಾ ಮತ್ತು ಕಾಲೇಜುಗಳ ಸುಮಾರು 19 ಲಕ್ಷ ಹದಿಹರೆಯದ ವಿದ್ಯಾರ್ಥಿನಿಯರಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ಮುಟ್ಟಿನ ನೈರ್ಮಲ್ಯಕ್ಕಾಗಿ ಉಚಿತವಾಗಿ ಸ್ಯಾನಿಟರಿ ನ್ಯಾಪ್​ಕಿನ್​ಗಳನ್ನು (Sanitary Napkins) ವಿತರಿಸುವ, ಕರ್ನಾಟಕ ಸರ್ಕಾರ ಹಮ್ಮಿಕೊಂಡ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ.

ಅಧಿಕಾರಿಗಳ ಪ್ರಕಾರ, ಯೋಜನೆಯ ಮೂಲಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಸುಮಾರು 19 ಲಕ್ಷ ವಿದ್ಯಾರ್ಥಿನಿಯರಿಗೆ (10 ರಿಂದ 18 ವರ್ಷ ವಯಸ್ಸಿನ) ಉಚಿತ ಸ್ಯಾನಿಟರಿ ನ್ಯಾಪ್​​​ಕಿನ್​​ಗಳನ್ನು ಒದಗಿಸುತ್ತದೆ. ಆರೋಗ್ಯ ಇಲಾಖೆಯು ನೇರವಾಗಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ತಲುಪಿಸುತ್ತದೆ. ಅದನ್ನು ಶಾಲೆಗಳು ವಿದ್ಯಾರ್ಥಿನಿಯರಿಗೆ ವಿತರಿಸಲಿವೆ. ಪ್ರತಿ ಕಿಟ್‌ನಲ್ಲಿ 10 ಸ್ಯಾನಿಟರಿ ನ್ಯಾಪ್‌ಕಿನ್‌ಗಳು ಇರುತ್ತವೆ. ವಿದ್ಯಾರ್ಥಿನಿಯರಿಗೆ ಒಂದು ವರ್ಷಕ್ಕೆ ಅಗತ್ಯವಿರುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಯೋಜನೆಯು ವಿದ್ಯಾರ್ಥಿನಿಯರ ನೈರ್ಮಲ್ಯ ಮತ್ತು ಆರೋಗ್ಯಕ್ಕೆ ಮುಖ್ಯವಾಗಿದೆ. ಈ ಹಿಂದೆ ಈ ಯೋಜನೆಯನ್ನು ಹಿಂದಿನ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರಾರಂಭಿಸಿತ್ತು. ಆದರೆ, ನಂತರದ (ಬಿಜೆಪಿ ನೇತೃತ್ವದ) ಸರ್ಕಾರವು ಅಂತಹ ಮಹತ್ವದ ಯೋಜನೆಯನ್ನು ಏಕೆ ನಿಲ್ಲಿಸಿತು ಎಂಬುದು ತಿಳಿದಿಲ್ಲ ಎಂದು ರಾವ್ ಹೇಳಿದ್ದಾರೆ.

ಯೋಜನೆಗೆ ಮರುಚಾಲನೆ ಬಗ್ಗೆ ಆರೋಗ್ಯ ಇಲಾಖೆ ಸಂದೇಶ

ನಾನು ಆರೋಗ್ಯ ಸಚಿವನಾದ ನಂತರ, ಶುಚಿ ಯೋಜನೆಯನ್ನು ಪುನರಾರಂಭಗೊಳಿಸುವುದಾಗಿ ಘೋಷಿಸಿದ್ದೆ. ಕಾಂಗ್ರೆಸ್ ಸರ್ಕಾರವು ಮಹಿಳೆಯರ ಪರವಾಗಿ ಶಕ್ತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ, ಹೆಣ್ಣುಮಕ್ಕಳ ಆರೋಗ್ಯಕ್ಕಾಗಿ ಸಾಮೂಹಿಕ ದೃಷ್ಟಿಕೋನದಿಂದ ಪ್ರಾರಂಭಿಸಲಾಗಿದ್ದ ಶುಚಿ ಯೋಜನೆಯನ್ನು ನಿರ್ಲಕ್ಷಿಸುವುದಿಲ್ಲ ಎಂದು ಗುಂಡೂರಾವ್ ಹೇಳಿದ್ದಾರೆ.

ನಾವು ಉಚಿತ ಸ್ಯಾನಿಟರಿ ನ್ಯಾಪ್​​ಕಿನ್​​ಗಳನ್ನು ನೀಡುತ್ತೇವೆ. 47 ಕೋಟಿ ವೆಚ್ಚದಲ್ಲಿ ಈ ಯೋಜನೆ ಸಾಕಾರಗೊಳ್ಳುತ್ತಿದೆ. ಇದರಿಂದ ಬಡ ಕುಟುಂಬಗಳ ವಿದ್ಯಾರ್ಥಿನಿಯರಿಗೆ ನೆರವಾಗಲಿದೆ. ಋತುಸ್ರಾವವು ಸಹಜ ಪ್ರಕ್ರಿಯೆಯಾಗಿದ್ದು, ಈ ಬಗ್ಗೆ ಹೆಣ್ಣುಮಕ್ಕಳು ಹಿಂಜರಿಯುವ ಅಗತ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: 1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ನಿಗದಿ: ಶಿಕ್ಷಣ ಇಲಾಖೆ ಆದೇಶ

ಋತುಸ್ರಾವದ ಬಗ್ಗೆ ಕೆಲವು ಮೂಢನಂಬಿಕೆಗಳು ಸಮಾಜದಲ್ಲಿ ಹಾಸುಹೊಕ್ಕಾಗಿವೆ. ಅವುಗಳನ್ನು ತೊಲಗಿಸಿ, ಸ್ವಚ್ಛತೆ ಮತ್ತು ಸ್ಯಾನಿಟರಿ ನ್ಯಾಪ್​​​ಕಿನ್‌ಗಳ ಬಳಕೆ ಕುರಿತು ಜಾಗೃತಿ ಮೂಡಿಸಬೇಕು. ಹೆಣ್ಣು ಮಕ್ಕಳ ಆರೋಗ್ಯಕ್ಕೆ ಸ್ವಚ್ಛತೆ ಮತ್ತು ಮುಟ್ಟಿನ ವೈಜ್ಞಾನಿಕ ನಿರ್ವಹಣೆ ಮುಖ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಎರಡು ಜಿಲ್ಲೆಗಳಲ್ಲಿ ಮುಟ್ಟಿನ ಕಪ್ ವಿತರಣೆ

ಸ್ಯಾನಿಟರಿ ಪ್ಯಾಡ್‌ಗಳಿಗೆ ಪರ್ಯಾಯವಾಗಿ ನಾವು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದೇವೆ. ಈ ಜಿಲ್ಲೆಗಳಲ್ಲಿ ಶುಚಿ ಯೋಜನೆ ಅಡಿಯಲ್ಲಿ ಮುಟ್ಟಿನ ಕಪ್‌ಗಳನ್ನು ಅಥವಾ ಮೆನ್​ಸ್ಟ್ರುವಲ್ ಕಪ್​​ಗಳನ್ನು ವಿತರಿಸಲು ನಿರ್ಧರಿಸಿದ್ದೇವೆ. ಮೆನ್​ಸ್ಟ್ರುವಲ್ ಕಪ್‌ಗಳು ಪರಿಸರ ಸ್ನೇಹಿಯಾಗಿದ್ದು, ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ರಾವ್ ಹೇಳಿದ್ದಾರೆ. ಆರೋಗ್ಯ ಇಲಾಖೆಯು ಸ್ಯಾನಿಟರಿ ಪ್ಯಾಡ್‌ಗಳ ಬದಲಿಗೆ ಮೆನ್​ಸ್ಟ್ರುವಲ್ ಕಪ್‌ಗಳ ಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಕಾರ್ಯಕ್ರಮವನ್ನು ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್