ಖಾಸಗಿ ವಲಯದಲ್ಲೂ ಎಸ್​ಸಿ, ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಎನ್​.ಮಹೇಶ್​ ಆಗ್ರಹ

ಈಗ ಮೀಸಲಾತಿಗೆ ಬೇಡಿಕೆ ಹೆಚ್ಚು ಕೇಳಿ ಬರುತ್ತಿದ್ದರೂ, ಖಾಸಗೀಕರಣ ಹೆಚ್ಚಾದ ಹಾಗೆ ಮೀಸಲಾತಿ ಕಡಿಮೆ ಆಗುತ್ತದೆ. ಕೇಂದ್ರ ಸರ್ಕಾರ ಹೀಗೆಯೇ ಖಾಸಗೀಕರಣಕ್ಕೆ ಮಹತ್ವ ನೀಡುತ್ತಾ ಹೋದರೆ ಕ್ರಮೇಣವಾಗಿ ಮೀಸಲಾತಿ ಮರೀಚಿಕೆಯಾಗುತ್ತದೆ. ಈ ಸಮಸ್ಯೆಯನ್ನು ತಪ್ಪಿಸಬೇಕೆಂದರೆ ಖಾಸಗಿ ವಲಯದಲ್ಲಿಯೂ ಮೀಸಲಾತಿ ತರಬೇಕು.

ಖಾಸಗಿ ವಲಯದಲ್ಲೂ ಎಸ್​ಸಿ, ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಎನ್​.ಮಹೇಶ್​ ಆಗ್ರಹ
ಸಿದ್ದರಾಮಯ್ಯ ಮತ್ತು ಎನ್​.ಮಹೇಶ್​
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 18, 2021 | 6:10 PM

ಬೆಂಗಳೂರು: ಮೀಸಲಾತಿಯ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಮೀಸಲಾತಿ ಪರ ಇದ್ದೇನೆ. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಇರಬೇಕು. ಈ ವರ್ಷ 1.5 ಲಕ್ಷ ಕೋಟಿ ರೂ. ಖಾಸಗಿ ವಲಯದಲ್ಲಿ ಹೂಡಿಕೆ ಆಗುತ್ತಿದೆ. ಅಲ್ಲದೇ ಬೇರೆ ಬೇರೆ ಕ್ಷೇತ್ರಗಳು ಖಾಸಗೀಕರಣ ಆಗುತ್ತಿವೆ. ಕೇಂದ್ರವೇ ಹಲವು ಸಂಸ್ಥೆಗಳನ್ನು ಖಾಸಗಿಯವರಿಗೆ ಕೊಡುತ್ತಿದ್ದು, ಹೀಗೇ ಮುಂದುವರೆದರೆ ಮೀಸಲಾತಿ ಎನ್ನುವುದು ಕ್ರಮೇಣ ಮರೀಚಿಕೆ ಆಗುತ್ತದೆ. ಹೀಗಾಗಿ ಖಾಸಗಿ ವಲಯದಲ್ಲಿ ಮೀಸಲಾತಿ ಸಿಗಲು ಕೇಂದ್ರ ಸರ್ಕಾರ ನಿಯಮಗಳಲ್ಲಿ ತಿದ್ದುಪಡಿ ತರಬೇಕಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈಗ ಮೀಸಲಾತಿಗೆ ಬೇಡಿಕೆ ಹೆಚ್ಚು ಕೇಳಿ ಬರುತ್ತಿದ್ದರೂ, ಖಾಸಗೀಕರಣ ಹೆಚ್ಚಾದ ಹಾಗೆ ಮೀಸಲಾತಿ ಕಡಿಮೆ ಆಗುತ್ತದೆ. ಕೇಂದ್ರ ಸರ್ಕಾರ ಹೀಗೆಯೇ ಖಾಸಗೀಕರಣಕ್ಕೆ ಮಹತ್ವ ನೀಡುತ್ತಾ ಹೋದರೆ ಕ್ರಮೇಣವಾಗಿ ಮೀಸಲಾತಿ ಮರೀಚಿಕೆಯಾಗುತ್ತದೆ. ಈ ಸಮಸ್ಯೆಯನ್ನು ತಪ್ಪಿಸಬೇಕೆಂದರೆ ಖಾಸಗಿ ವಲಯದಲ್ಲಿಯೂ ಮೀಸಲಾತಿ ತರಬೇಕು ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಬಜೆಟ್ ಮೇಲೆ ಚರ್ಚೆ ಮಾಡುತ್ತಿದ್ದ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಕೊರೊನಾ ಕಾಲದಲ್ಲಿ ನಾವೆಲ್ಲರೂ‌ ಮನೆಯಲ್ಲಿ ಕೂತಿದ್ದೆವು. ಆದರೆ ನಮ್ಮ ರೈತರು‌ ಮಾತ್ರ ಗಣನೀಯ ಪ್ರಮಾಣದ ಬೆಳೆ ಬೆಳೆದಿದ್ದಾರೆ. ರೈತರಿಗೆ ಕೊಡುವ ಕೃಷಿ ಸಮ್ಮಾನ್ ಪರಿಹಾರ ₹10 ಸಾವಿರ ಇದೆ ಅದನ್ನು ₹12 ಸಾವಿರಕ್ಕೇರಿಸಿ. ಗೋವಧೆ ನಿಷೇಧಿಸಿದ್ದೀರಿ, ಹೀಗಾಗಿ ಗೋವುಗಳ ಖರೀದಿ ಸರ್ಕಾರವೇ ಮಾಡಲಿ, ತಾಲ್ಲೂಕಿಗೊಂದು ಗೋಶಾಲೆ ಮಾಡಬೇಕು. ಜೊತೆಗೆ, ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಕೊಡಬೇಕು. ಈ ಬೆಂಬಲ ಬೆಲೆಗೆ ಕಾನೂನಿನ ಸ್ಪರ್ಶ ಇರಬೇಕು ಎಂದು ಹೇಳುತ್ತಾ ಖಾಸಗೀಕರಣದೊಳಗೆ ಮೀಸಲಾತಿ, ಎಸ್​ಸಿ, ಎಸ್​ಟಿ ಸಮುದಾಯದ ಹಕ್ಕುಗಳನ್ನು ಉಳಿಸಿಕೊಳ್ಳಬೇಕಿದೆ ಎಂದು ಪ್ರತಿಪಾದಿಸಿದರು.

ಬಿಜೆಪಿ ಬಂದ ಮೇಲೆ ಎಸ್​ಸಿ, ಎಸ್​ಟಿ ಅಭಿವೃದ್ಧಿ ನಿಗಮಗಳಿಂದ 3,060 ಎಕರೆ ಖರೀದಿಸಿ ಎಸ್​ಸಿ, ಎಸ್​ಟಿ ರೈತರಿಗೆ ಕೊಡಲಾಗಿದೆ. ಇದೇವೇಳೆ ಎಸ್​ಸಿ, ಎಸ್​ಟಿ ರೈತರು ವಿವಿಧ ಕೋರ್ಟುಗಳ ವ್ಯಾಜ್ಯಗಳಲ್ಲಿ 3,000 ಎಕರೆ ಜಮೀನು ಕಳೆದುಕೊಂಡಿದ್ದಾರೆ. ಈ ಜಮೀನನ್ನು ಸರ್ಕಾರ ಉಳಿಸಿಕೊಡಬೇಕು. ಅಲ್ಲದೇ, ಖಾಸಗಿ ವಲಯದಲ್ಲೂ ಮೀಸಲಾತಿ ಕೊಡಬೇಕಿದೆ. ಅದಕ್ಕೊಂದು ನಿಯಮ ತರಬೇಕು ಎಂದು ಅಭಿಪ್ರಾಯ ತಿಳಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ ಮಾತಿಗೆ ನನ್ನದೂ ಸಹಮತವಿದೆ. ಖಾಸಗಿ ವಲಯದಲ್ಲಿ ಮೀಸಲಾತಿ ಬೇಕು ಎಂದು ದನಿಗೂಡಿಸಿದರು.

ಇದನ್ನೂ ಓದಿ: ಶೇ.50ರಷ್ಟು ಮೀಸಲಾತಿಯನ್ನು ಲಕ್ಷ್ಮಣರೇಖೆಯಂತೆ ಪಾಲಿಸಬೇಕು; ಮರಾಠಾ ಮಿಸಲಾತಿ ಕುರಿತು ಹಿರಿಯ ವಕೀಲ ಅರವಿಂದ ದಾತಾರ್ ವಾದ 

ಇದನ್ನೂ ಓದಿ: ಸಂವಿಧಾನದ ಚೌಕಟ್ಟಿನಲ್ಲಿ ಮೀಸಲಾತಿಗೆ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್